Home / ಕವನ / ಕವಿತೆ / ಬಾಳಿನ ಹಂಬಲು

ಬಾಳಿನ ಹಂಬಲು


ಕೂಸಿಗಂದು ಏನು ಬೇಡ,
ತಿಂಡಿ ಗೊಂಬೆ ಮುದ್ದು ಬೇಡ.
ಏನೊ ಅರಕೆ, ಏನೊ ಬೇನೆ,
ಅತ್ತು ಸೊರಗಿತು :
“ಅಮ್ಮ ಎಲ್ಲಿ ಹೋತು” ಎನುತ
ಅತ್ತು ಸೊರಗಿತು.

ಅಳುವ ಕೇಳಿ ಬಂದ ತಾಯ
ಅಮೃತಸ್ಪರ್‍ಶಕಾರೆ ಗಾಯ,
ತೊಯ್ದ ಕಣ್ಣ ಬಿಚ್ಚಿ, ಸುಳಿಸಿ,
ತೊಂದು ನಗೆಯನು-
“ನಿನ್ನ ನುಳಿಯೆ ಬಾಳು ಶೂನ್ಯ!”
ಎನುವ ನಗೆಯನು.


ಕೂಸು ಬೆಳೆದು ಆದ ರಾಮು,
ಇಂದು ನೆರೆಯ ಮನೆಯ ಶಾಮು
ರಾಮನೊಂದೆ ಬಯಕೆ, ಕನಸು,
ಬಾಳ ಧ್ಯೇಯವು ;
ಆಸೆಗಳಿಗೆ ಕಲ್ಪತರುವು,
ನೋವಿಗಮೃತವು.

ಒಂದೆ ಜೀವದೆರಡು ಕವಲು;
ರಾಮ-ಶಾಮು: ಹಾಡು-ಹೊಳಲು.
ತುಂಬುಗಣ್ಣೊಳವನ ರಾಮು
ಸೆರೆಯಕೊಳುವನು:
“ನಿನ್ನ ನುಳಿಯೆ ಬಾಳು ಬಯಲು”
ಎಂದುಕೊಳುವನು.


ರಾಮುವೀಗ ರಾಮರಾಯ!
ಏನು ಠೀವಿ! ಎಂಥ ಪ್ರಾಯ!
ನಿತ್ಯ ಕನಸುಕಾಂಬ ತೆರದ
ನೋಟದಲೆತವು;
ಒಲುಮೆನೆರೆಗೆ ಸಿಲುಕಿದವನ
ಮನದ ಸೆಳೆತವು!

ಇಂದು ಸರಳೆ ಅವನ ಜಗವ
ತುಂಬಿ, ಬಾಳ ಸೂರೆಗೊಳುವ-
ಳಾತ್ಮವನ್ನೆ ಮೀಸಲಿಟ್ಟು
ರಾಮು ಒಲಿವನು;
“ಸುಳಿದೆ, ಸರಳ, ಬಾಳ ಟೊಳ್ಳು
ತುಂಬಿ”ತೆನುವನು.


ಸರಳೆ ರಾಮರೊಲುಮೆ ಸೂತ್ರ
ಹಸುಳೆ ಕಿಟ್ಟು, ಮೊದಲು – ಚಿತ್ರ!
ರಾಮಗದರ ಬಾಳ ಗುಟ್ಟು
ಅರ್‍ಥವಾಗದು:
“ನಮ್ಮ ಪ್ರೇಮಕಡ್ಡಬಂದ
ಗಂಡವೇನಿದು?”

ಒಂದು ದಿನದಿ ಕೂಸು ತನ್ನ
ಬೆಳಕೆ ದ್ರವಿಸಿ ಹರಿವ ಕಣ್ಣ
ಮೊಗದಿ ನೆಟ್ಟು, ಅವನ ಬೆರಳ
ಬಾಯಿಗೊಯ್ಯಲು,
ರಾಮನೆಂದ, “ತೀರಿತಿಂದು
ಬಾಳ ಹಂಬಲು!”


ರಾಮರಾಯನೆಂಥ ಮನುಜ!
ಸಿರಿಯ ಘೃಣೆಯ ಹಿರಿಯ ಕಣಜ!
ಏನು ಪ್ರತಿಭೆ, ಎಂಥ ವಿನಯ!-
ಯಶದ ಹೊಗಳದು.
ಆತನೊಂದೆ ಬಯಕೆ ಒಲಿದು
ಬರುವ ಮೊಳಗದು.

ಜಸದ ಹೆಣ್ಣು ಒಲಿದು ನಗಲು,
ನಗೆಯು ಮೊಗದಿ ಬಿಂಬಿಸಿರಲು,
ಬಾಳ ಸಂಜೆಯಲ್ಲಿ ಯಶಕೆ
ರಾಮರಾಯರು,
“ಬಂದೆ, ಬಾಳು ಪೂರ್ಣವಾಯ್ತು”
ಎಂದು ನುಡಿದರು.


“ಇಲ್ಲಿ ಹಳ್ಳ, ಅಲ್ಲಿ ತಿಟ್ಟು”
ಎನುತ ಕೋಲ ಹಿಡಿದು ಪುಟ್ಟು
ನಡೆಸುತಿರುವ ಪಲಿತ ಶಿರದ
ತಾತ-ರಾಯರು!
ಕೂಸಿಗಿಂತ ತ್ರಾಣಿಯಲ್ಲ
ಪಾಪ!-ರಾಯರು.

ಒಂದು ದಿನದೊಳಿರುಳಿನಲ್ಲಿ
ಕಿರಣವೊಂದು ಹೊನ್ನ ಚೆಲ್ಲಿ,
ಬಾಳ ಸೆರೆಯ ಬೆಳಗೆ, ತಾತ
ಚಕಿತರಾದರು:
“ಬಂದು ಬಾಳಿಗರ್‍ಥವಿತ್ತೆ,
ಮೃತ್ಯು” ಎಂದರು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...