ಮುಖಾಮುಖಿ

ಮನಸಿನಾಳದಿಂದ
ಎದ್ದ ಬುದ್ಧ ಈಗ
ಮತ್ತೆ ಬಂದಿದ್ದಾನೆ.

ಮೊದಲಿನಂತೆಯೇ
ರಾತ್ರಿಯಿಡೀ ದಿಟ್ಟಿಸಿನೋಡುತ್ತಾ
ನೂರು ಗೊಂದಲಗಳ
ಮೂಡಿಸಿ ಕಾಡುತ್ತಾನೆ.

ಕೇಳುತ್ತಾನೆ ಒಂದೇ ಪ್ರಶ್ನೆ
“ಈಗ… ಈಗ ಬರುವೆಯಾ ನನ್ನೊಡನೆ?”

ನನ್ನದು ಮತ್ತದೇ
ಹಳಸಲು ಕಾರಣಗಳು
ಅವನಿಂದ ತಪ್ಪಿಸಿಕೊಳ್ಳಲು
ಬದುಕಿನಾಮಿಷದ ನೆವಗಳು!
ನಗುತ್ತಾ ಒಳಹೋಗಿ ಬಿಡುತ್ತಾನೆ
ಆ ನಗೆಗೆಷ್ಟು ಅರ್ಥಗಳು!

ನಿತ್ಯವೂ ಕಾದೆಣ್ಣೆಯಲಿ
ಸಿಡಿದು ಸತ್ತರೂ
ಸಾವಿರ ಸಾಸಿವೆಗಳು
ವೈರಾಗ್ಯೋದಯವಾಗುವುದಿಲ್ಲ

ಹೊತ್ತಿಗೆಯ ಕೊನೆಯ
ಪುಟದವರೆಗೂ ತಿರುವದೇ
ಕೊಡ ತುಂಬಬೇಕಲ್ಲಾ!

ಆದರೂ ಅಂದಿನಂತೆಯೇ
ಮತ್ತೆ ಮತ್ತೆ
ಮನಸಿನಾಳದಿಂದೆದ್ದು
ಬುದ್ಧ ಬರುತ್ತಾನೆ
‘ಈಗ… ಬರುವೆಯಾ?’ ಕೇಳುತ್ತಾನೆ.

ನಾನೀಗ ಅನುಮಾನಿಸುತ್ತಾ
ಮತ್ತದೇ ಸತ್ತ ಉತ್ತರ
ಗಳಹುತ್ತೇನೆ
ಆದರೆ ಏಕೋ
ಇತ್ತೀಚೆಗವನು ನಗುವುದಿಲ್ಲ!
ಮಹಾಮೌನಿಯಾಗಿದ್ದಾನೆ
ನಾನು ಹೆದರುತ್ತೇನೆ
ಬಹುಶಃ ಅವನು ಬೆಳೆದಿದ್ದಾನೆಂದು
ಅವನೊಂದಿಗೆ
ಆಳಕ್ಕಿಯುವುದು ಸುಲಭದ ಮಾತೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನುಮಾನ
Next post ಅಯ್ಯಪ್ಪ ಸಾಮಿ ಕಾಲ ಟಚ್ ಮಾಡಿದ್ಳಂತಲ್ಲಪ್ಪೋ ಜಯ್ಮಾಲ!

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys