Home / ಕವನ / ಕವಿತೆ / ಕಡಲೇ ಒಮ್ಮೊಮ್ಮೆಯಾದರೂ ಬಾ

ಕಡಲೇ ಒಮ್ಮೊಮ್ಮೆಯಾದರೂ ಬಾ

ಹೀಗೆ ಒಮ್ಮೊಮ್ಮೆಯಾದರೂ
ಎಲ್ಲ ಮಿತಿಗಳ ಮೀರಿ
ನನ್ನೆದೆಯ ದಡಕೆ
ಅಪ್ಪಳಿಸು ಬಾ ಕಡಲೇ.

ಶತಶತಮಾನಗಳಿಂದ
ಕಾದು ಕೆಂಡವಾಗಿರುವ
ನನ್ನೆದೆಯ ಸುಡುಮರಳ
ಕೊಂಚ ತಂಪಾಗಿಸಿಕೊಳ್ಳುತ್ತೇನೆ.

ನೀ ಹೊತ್ತು ತರುವ
ಕುಳಿರ್ಗಾಳಿಗೆ ಒಮ್ಮೆಯಾದರೂ ಅರಳಿ
ಮತ್ತೊಮ್ಮೆ ಪಕ್ಕಗಳಲ್ಲಿ
ಸಾಧ್ಯತೆಗಾಗಿ ಹೊರಳುತ್ತೇನೆ.

ನಿನ್ನೆದೆಯಲಿ ಮುಳುಗುವ
ನಿನ್ನದೆಯಿಂದ ಮೂಡುವ
ಹುಚ್ಚು ಸೂರ್ಯನ ಕಣ್ತುಂಬ ಹೀರಿ
ಹೊಸ ಭರವಸೆಗಳೊಂದಿಗೆ ಕಣ್ತೆರೆಯುತ್ತೇನೆ.

ನೀ ಅಪ್ಪಳಿಸಿದ ರಭಸಕೆ
ಎದ್ದ ಅಲೆಗಳಲಿ ನಾ
ಕಳೆದುಕೊಂಡದ್ದನ್ನೆಲ್ಲಾ
ಮತ್ತೆ ಹುಡುಕುತ್ತೇನೆ.

ನಿನ್ನ ವಿಸ್ತಾರಗಳ ಕಂಡು
ಧನ್ಯಳಾಗುತ್ತಾ ಪುಳಕಗೊಂಡು
ನನಗೆ ನಾನು ಅರ್ಥವಾಗುತ್ತೇನೆ
ಕಲ್ಲು ನಾ ಚಿಗುರುತ್ತೇನೆ.

ನಿನ್ನ ಉಪ್ಪುಪ್ಪು ನೀರಿನಲಿ
ಗಾಢ ಬಣ್ಣಗಳ ಮಾಡಿ
ಈ ತಟಸ್ಥ ಬದುಕಿಗೆರಚಿಕೊಳ್ಳುತ್ತೇನೆ
ಕೆಲಕ್ಷಣಗಳಾದರೂ ನಾನೂ ಕಡಲಾಗುತ್ತೇನೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...