ಮುಟ್ಟಿದರೆ ಮುನಿಯೂ, ಕನಕಾಂಬರ ಬೀಜವೂ

ಅರಳಲೋ ಬೇಡವೋ
ಎಂದನುಮಾನಿಸುತ್ತಲೇ
ಎಲೆದಳದಳಗಳ ಅರ್ಧವಷ್ಟೇ
ಮೆಲ್ಲಗೆ ವಿಕಸಿಸಿ
ಯಾರ ದಿಟ್ಟಿಗೂ ತಾಗದಿದ್ದರೆ
ಸಾಕೆನುತ
ಮೈಮನಗಳನೆಲ್ಲ ಮುದುರಿಸಿ
ದೇಹವೂ ನಾನೇ ಆತ್ಮವೂ ನಾನೇ
ಬಚ್ಚಿಡಲೆಂತು ಎರಡನೂ
ಪರಕೀಯ ದಾಳಿಯಿಂದ?
ಕಳವಳದಿಂದ
ಸಣ್ಣ ತಾಗುವಿಕೆಗೂ
ಮೈಮನಗಳ ಇಂಚಿಂಚೂ
ಒಳಗೊಳಗೇ ಮುದುರಿಕೊಳ್ಳುತಾ
ಬದುಕಿಡೀ ಚಡಪಡಿಸುತಾ
ಕಳೆವ ತುಡುಮುಡಿಕೆ ಜೀವ
ಈ ಮುಟ್ಟಿದರೆ ಮುನಿಯದು!

ಧ್ಯಾನಕ್ಕೆ ಕೂತು
ಆಳದಾಳದ ಮೌನದಲಿ ಹೂತು
ಬಿರುಬಿಸಿಲಿಗೆ ಹೊರ ಮೈ
ಒಣಗಿಸಿ
ಕಾವಿನಲಿ ಒಳಗು ಮಾಗಿಸಿ
ದೇಹ ನಾನಲ್ಲ. ಆತ್ಮ ನಾನು
ದೇಹಕ್ಕೂ ನನಗೂ
ಸಂಬಂಧವಿಲ್ಲೆನುತ
ಸಣ್ಣ ತಾಗುವಿಕೆಗೇ
ಪಟ್ಟನೆ ಒಡೆದು
ತಟ್ಟನೆ ಸಿಡಿದು
ಬಿರಿದುದುರಿದರೂ
ಒಳಗಿನದೆಲ್ಲಾ ಶುಭ್ರ
ಮಡಿಮಡಿ ಬಿಳುಪೆಂಬ
ಸಮಜಾಯಿಷಿಯಲಿ
ಮತ್ತೆ ಹಸಿಮಣ್ಣಲಿ ಹೂತು
ಧನ್ಯತೆಯ ಪಡೆವ ತವಕ
ಕಾದು ಕುಳಿತ
ಕನಕಾಂಬರ ಬೀಜದ್ದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬದುಕಿದ್ದಾರೆ
Next post ಪಾಪ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

cheap jordans|wholesale air max|wholesale jordans|wholesale jewelry|wholesale jerseys