ಎಚ್ಚರಿಕೆ

ಎಚ್ಚರಿಕೆ

ಅಲಂಕಾರವು ಕೀಳಾದರೆ ತಪ್ಪಿದಾತನು ಸೊನೆಗಾರ
ಭಂಗಾರದ್ದೇನು ತಪ್ಪು?
ಮೂರ್ತಿ ಕೆಟ್ಟರೆ ದೋಷಕ್ಕೆ ಗುರಿ ಚಿತ್ರಗಾರ
ಮಣ್ಣೇನು ಮಾಡೀತು?
ಮನೆ ಡೊಂಕಾದರೆ ಕೆಡಿಸಿದವನು ಉಪ್ಪಾರ
ಕಟ್ಟೇನು ಮಾಡ್ಯಾವು?
ನಾನು ಗುಣಹೀನನಾದರೆ, ದೇವಾ
ನೀನು ಹೊಣೆಗಾರನು.

ಒಬ್ಬ ಸೊನಗಾರ ಕೆಲಸ ಕೆಡಿಸಿದರೆ ಮತ್ತೊಬ್ಬ ದೊರೆಯುವನೆಂದು ಜನರಿಗೆ ನಂಬಿಕೆ. ಆದರೆ ಸೃಷ್ಟಿಕರ್ತನು ಬೀದಿ-ಬೀದಿಗೆ ದೊರಕುವದುಂಟೆ? ದೇವಾ ನೀ ಮಾಡಿದ ತಪ್ಪನ್ನು ಮತ್ತಾರು ತಿದ್ದುವರು? ಜೀವಿಗಳನ್ನು ನಿರ್ಮಿಸುವಾಗ್ಗೆ ಎಚ್ಚರಿರಬೇಡವೆ? ನನ್ನಂಥ ಪಾಮರರನ್ನು ಜನಿಸಿಸಿ ನಿನ್ನ ಹೆಸರಿಗೆ ನೀನೇ ಕುಂದು ತಗಲಿಸುವದುಚಿತವೆ?

ಕುಂಬಾರನಿಂದ ಒಡಕ ಗಡಿಗೆಗಳನ್ನಾರೂ ಕೊಳ್ಳುವದಿಲ್ಲ. ಕೊಳಕು ಹಣ್ಣುಗಳು ಮಾರಾಟವಾಗುವದಿಲ್ಲ. ಒಡಕ ಗಡಿಗೆಗಳು ತಿರುಗಿ ಕುಂಬಾರನ ಮನೆಗೇ ಹೋಗುವವು. ಎಲೈ ಭವಚಕ್ರನಾಡಿಸುವ ಕುಂಬಾರನೇ! ನನ್ನಂಥ ನಿರ್ಗುಣಿಗಳು ತಿರುಗಿ ನಿನ್ನೆಡೆಗೆಯೇ ಬರುವರು ಎಚ್ಚರಿಕೆ.

ನನ್ನ ಪೂರ್ವ ಕರ್ಮದ ಫಲವೆಂದು ನೀನು ದೋಷ ತಪ್ಪಿಸಲು ಯತ್ನಿಸಬಹುದು, ಆದರೆ ಪೂರ್ವ ಕರ್ಮವನ್ನಾದರೂ ಮಾತಾಡಿಸಿದವರಾರು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷಿ ವಿಜ್ಞಾನಿಯಾಗುವುದಿಂದು ಬಲು ಸುಲಭ ಗೊತ್ತಾ?
Next post ಗಂಧವತಿ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…