ಲಿಂಗಮ್ಮನ ವಚನಗಳು – ೮

ಅಯ್ಯ, ಈ ಮಹಾಘನವ ಕಾಂಬುದಕ್ಕೆ,
ಹಸಿವು ಕೆಡಬೇಕು. ತೃಷೆಯಡಗಬೇಕು.
ವ್ಯಸನ ನಿಲ್ಲಬೇಕು. ನಿದ್ರೆ ಹರಿಯಬೇಕು.
ಜೀವ ಬುದ್ಧಿ ಹಿಂಗಬೇಕು.
ಮನ ಪವನ ಬಿಂದು ಒಡಗೂಡಬೇಕು.
ಚಿತ್ತ ಒತ್ತಟ್ಟಿಗೆ ಹೋಗದಿರಬೇಕು.
ಹೊತ್ತು ಹೊತ್ತಿಗೆ ಎತ್ತರವನೇರಿ,
ಬೆಚ್ಚು ಬೇರಿಲ್ಲದೆ ಲಿಂಗದೊಳಗೆ
ಅಚ್ಚೊತ್ತಿದಂತೆ ಬೆರೆದರೆ,
ಕತ್ತಲೆ ಹರಿಯುವದು. ಮರವೆ ಹಿಂಗುವದು,
ನಿದ್ರೆ ಹರಿಯುವದು, ಹಸಿವು ಕೆಡುವುದು,
ತೃಷೆಯಡಗುವದು, ವ್ಯಸನ ನಿಲ್ಲುವುದು.
ಇವೆಲ್ಲವನು ಹಿಂಗಿಸಿ ತಾ ಲಿಂಗ
ವ್ಯಸನಿಯಾಗಬಲ್ಲರೆ ಮುಂದೆ ಮಹಾ ಮಂಗಳದ
ಬೆಳಗು ಕಾಣಿಪುದೆಂದರು
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನ-ನಿನ್ನ ಅಂತರ!
Next post ಕವನ ಹುಟ್ಟಿತು ಕೇಳಾ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

cheap jordans|wholesale air max|wholesale jordans|wholesale jewelry|wholesale jerseys