Home / ಕವನ / ಕವಿತೆ / ಚಂದ್ರಗ್ರಹಣ

ಚಂದ್ರಗ್ರಹಣ

ಮೇಳ

ಒಂದು ಗ್ರಹಕೆ ಬಂತು ಗ್ರಹಣ,
ಇಂದೆ ಚಂದ್ರಗ್ರಹಣ
ಇಂದೆ ಚಂದ್ರಗ್ರಹಣೋ !
ಇಂದೆ ಚಂದ್ರಗ್ರಹಣ.

ಮೇಳದ ಹಿರಿಯ

ಕೆನೆವೆಳಕಿನ ಸೊನೆಯ ಚಂದ್ರ-
ನಾದನು ಕಪ್ಪಿಡಿದ ಲಾಂದ್ರ
ಪವನವಾಯ್ತು ತಾಮ್ರದ ವೈ
ಕತ್ತಲೆಯೇ ಎತ್ತಿದ ಕೈ.
ಮರುಳೆಂದವು – ಸೈ, ಸೈ, ಸೈ!
ದೆವ್ವ ಕುಣಿಯೆ : ಹೈ, ಹೈ, ಹೈ!
ತಬ್ಬಿಬ್ಬಾದವು ತಾರೆ
ಮಬ್ಬಿಡಿಯಲು ಹೌಹಾರೆ!

ಮೇಳ

ಒಂದು ಗ್ರಹಕೆ ಬಂತು ಗ್ರಹಣ,
ಇಂದೆ ಚಂದ್ರಗ್ರಹಣ.
ಇಂದೆ ಚಂದ್ರಗ್ರಹಣೋ!
ಇಂದೆ ಚಂದ್ರಗ್ರಹಣ.

ಮೇಳದ ಹಿರಿಯ

ತುಂಬುದೆರೆಯ ತಂಬುಲವನು
ತುಂಬ ಮೆಲುವ ಹಂಬಲವನು
ತಳೆದರಂತೆ ರಾಹು ಕೇತು :
ನೋಡಿದೆಂಧ ಹೇತು, ಬೇತು !
ಕಾಡಿನಲ್ಲಿ ಕಗ್ಗತ್ತಲೆ,
ಮನೆ ಮನೆಯಲಿ ಮಡಿಬತ್ತಲೆ !
ಬಂದಿತಾವುದೋ ವಿಪತ್ತು
ಮಂದಿ ತಿಳಿಯರದರ ಗತ್ತು.

ಮೇಳ

ಒಂದು ಗ್ರಹಕೆ ಬಂತು ಗ್ರಹಣ,
ಇಂದೆ ಚಂದ್ರಗ್ರಹಣ.
ಇಂದೆ ಚಂದ್ರಗ್ರಹಣೋ !
ಇಂದೆ ಚಂದ್ರಗ್ರಹಣ.

ಮೇಳದ ಹಿರಿಯ

ರಾಹು ಕೇತು ರಗಳೆ, ಕಂತೆ;
ಅಂಜಿಕೆಗಳ ಬಂಜೆ ಸಂತೆ.
ಮಣ್ಣಿಗರಿಗೆ ಹೊಳೆದಿರುವುದು,-
ಸತ್ಯಕಥೆಯು ತಿಳಿದಿರುವುದು :
ಹೊಂಗದಿರನಿಗೆದುರಾಗಿ
ಭೂಮಿಯು ಬರುತಿರಲಾಗಿ
ಬೀಳುತಿರುವ ಕಪ್ಪುನೆಳಲು-
ಅದುವೆ ಚಂದ್ರನಳಲು-ಬಳಲು
ಹುಣ್ಣಿಮೆಯನೆ ನುಂಗುವಂಥ
ರಾಹು ನಾವು, ನಮ್ಮ ಪಂಥ
ಪಂಧಾನವ ಸುತ್ತಿದೆ,
ಮುದ್ದು ಮುಗಿಲ ಮುತ್ತಿದೆ :
ಭೂಮಂಡಲ ಕೆಣಕುತಿದೆ,
ಗ್ರಹಮಂಡಲ ಹೆಣಗುತಿದೆ :
ಸಾಯ್ವೆಳಕದು ಮಿಣುಕುತಿದೆ:-

ಮೇಳ

ಒಂದು ಗ್ರಹಕೆ ಬಂತು ಗ್ರಹಣ,
ಇಂದೆ ಚಂದ್ರಗ್ರಹಣ
ಉಳಿದವಕೂ ತುಂಬಿದೆ ದಿನ.
ನಾಳೆ ಸೂರ್‍ಯಗ್ರಹಣ.

ಮೇಳದ ಹಿರಿಯ

ದೇ ದಾನ್ ! ಸುಟೇ ಗ್ರಾನ್ !
ದೇ ದಾನ್ ! ಸುಟೇ ಗ್ರಾನ್ !
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್