Home / ಕವನ / ಕವಿತೆ / ಚಂದ್ರಗ್ರಹಣ

ಚಂದ್ರಗ್ರಹಣ

ಮೇಳ

ಒಂದು ಗ್ರಹಕೆ ಬಂತು ಗ್ರಹಣ,
ಇಂದೆ ಚಂದ್ರಗ್ರಹಣ
ಇಂದೆ ಚಂದ್ರಗ್ರಹಣೋ !
ಇಂದೆ ಚಂದ್ರಗ್ರಹಣ.

ಮೇಳದ ಹಿರಿಯ

ಕೆನೆವೆಳಕಿನ ಸೊನೆಯ ಚಂದ್ರ-
ನಾದನು ಕಪ್ಪಿಡಿದ ಲಾಂದ್ರ
ಪವನವಾಯ್ತು ತಾಮ್ರದ ವೈ
ಕತ್ತಲೆಯೇ ಎತ್ತಿದ ಕೈ.
ಮರುಳೆಂದವು – ಸೈ, ಸೈ, ಸೈ!
ದೆವ್ವ ಕುಣಿಯೆ : ಹೈ, ಹೈ, ಹೈ!
ತಬ್ಬಿಬ್ಬಾದವು ತಾರೆ
ಮಬ್ಬಿಡಿಯಲು ಹೌಹಾರೆ!

ಮೇಳ

ಒಂದು ಗ್ರಹಕೆ ಬಂತು ಗ್ರಹಣ,
ಇಂದೆ ಚಂದ್ರಗ್ರಹಣ.
ಇಂದೆ ಚಂದ್ರಗ್ರಹಣೋ!
ಇಂದೆ ಚಂದ್ರಗ್ರಹಣ.

ಮೇಳದ ಹಿರಿಯ

ತುಂಬುದೆರೆಯ ತಂಬುಲವನು
ತುಂಬ ಮೆಲುವ ಹಂಬಲವನು
ತಳೆದರಂತೆ ರಾಹು ಕೇತು :
ನೋಡಿದೆಂಧ ಹೇತು, ಬೇತು !
ಕಾಡಿನಲ್ಲಿ ಕಗ್ಗತ್ತಲೆ,
ಮನೆ ಮನೆಯಲಿ ಮಡಿಬತ್ತಲೆ !
ಬಂದಿತಾವುದೋ ವಿಪತ್ತು
ಮಂದಿ ತಿಳಿಯರದರ ಗತ್ತು.

ಮೇಳ

ಒಂದು ಗ್ರಹಕೆ ಬಂತು ಗ್ರಹಣ,
ಇಂದೆ ಚಂದ್ರಗ್ರಹಣ.
ಇಂದೆ ಚಂದ್ರಗ್ರಹಣೋ !
ಇಂದೆ ಚಂದ್ರಗ್ರಹಣ.

ಮೇಳದ ಹಿರಿಯ

ರಾಹು ಕೇತು ರಗಳೆ, ಕಂತೆ;
ಅಂಜಿಕೆಗಳ ಬಂಜೆ ಸಂತೆ.
ಮಣ್ಣಿಗರಿಗೆ ಹೊಳೆದಿರುವುದು,-
ಸತ್ಯಕಥೆಯು ತಿಳಿದಿರುವುದು :
ಹೊಂಗದಿರನಿಗೆದುರಾಗಿ
ಭೂಮಿಯು ಬರುತಿರಲಾಗಿ
ಬೀಳುತಿರುವ ಕಪ್ಪುನೆಳಲು-
ಅದುವೆ ಚಂದ್ರನಳಲು-ಬಳಲು
ಹುಣ್ಣಿಮೆಯನೆ ನುಂಗುವಂಥ
ರಾಹು ನಾವು, ನಮ್ಮ ಪಂಥ
ಪಂಧಾನವ ಸುತ್ತಿದೆ,
ಮುದ್ದು ಮುಗಿಲ ಮುತ್ತಿದೆ :
ಭೂಮಂಡಲ ಕೆಣಕುತಿದೆ,
ಗ್ರಹಮಂಡಲ ಹೆಣಗುತಿದೆ :
ಸಾಯ್ವೆಳಕದು ಮಿಣುಕುತಿದೆ:-

ಮೇಳ

ಒಂದು ಗ್ರಹಕೆ ಬಂತು ಗ್ರಹಣ,
ಇಂದೆ ಚಂದ್ರಗ್ರಹಣ
ಉಳಿದವಕೂ ತುಂಬಿದೆ ದಿನ.
ನಾಳೆ ಸೂರ್‍ಯಗ್ರಹಣ.

ಮೇಳದ ಹಿರಿಯ

ದೇ ದಾನ್ ! ಸುಟೇ ಗ್ರಾನ್ !
ದೇ ದಾನ್ ! ಸುಟೇ ಗ್ರಾನ್ !
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...