Home / ಕವನ / ಕವಿತೆ / ಅಭ್ಯುದಯ

ಅಭ್ಯುದಯ

ಇಳೆಯನೆಲ್ಲ ತುಂಬಿನಿಂತು
ನಾಟ್ಯವಾಡುತಿರುವ ರೂಹೆ !
ಅಲ್ಲಿ-ಇಲ್ಲಿ ಎಲ್ಲೆಡೆಯಲಿ
ಇದ್ದ ನಿನ್ನ ನಿಲುಕದೂಹೆ !
ಮನವ ಸೆಳೆದುಕೊಳ್ಳುವ ಶಕ್ತಿ !
ನಿನ್ನ ಮಿರುಗಮಿಂಚಿದೇನು ?
ಬಣ್ಣ ಬಣ್ಣಗಳನ್ನು ತೋರ್‍ವ
ನಿನ್ನ ಸಹಜ ಸೃಷ್ಟಿಯೇನು ?
ಬಂದ ಮಾವಿನಡಿಗೆ ನಿಂತು
ನಿನ್ನ ಚೆಲುವ ನೋಡಬಹುದು
ನಿನ್ನ ಲತೆಗಳೊಡನೆ ಕೂಡಿ
ಕೇಳ್ದ ವರವ ಪಡೆಯಬಹುದು
ಅಲ್ಲಿ ಇಲ್ಲಿ ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ನಿಜ ಮನೋಜವಿಹ ವಿಶಾಲ
ದೃಷ್ಟಿಯೊಂದು ಕೊನರುತಿಹುದು.
ಬುದ್ಧಿಗಿರುವ ಕಣ್ಣಿನಲ್ಲಿ
ಮತ್ತೆ ಮತ್ತೆ ಹೊಳೆಯುತಿಹುದು.
ಬಿದ್ದು ನಿದ್ರೆಗೈವ ದಿನ್ನೆ
ಯಮನ ಕೋಣವಾಗಬಹುದು.
ಬಳಿಗೆ ಸುಳಿವ ಮರ್‍ತ್ಯಕನ್ಯೆ
ಸ್ವರ್‍ಲಲನೆಯೆ ಆಗಬಹುದು.
ಸನಿಯಕಿರುವ ಗೆಳೆಯನೆದೆಯು
ಅಲ್ಲವೇನು ಸ್ಪರ್‍ಶಮಣಿಯು ?
ತಿಳಿದು ನೋಡೆ,- ಭುವನವಿದು
ಅಲ್ಲವೇನು ಮುದ್ದು ಕಣಿಯು !
ಅಲ್ಲಿ- ಇಲ್ಲಿ- ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ಆದರಿಂಧ ದೃಷ್ಟಿ ಕಳೆದು
ಹುಟ್ಟುಗುರುಡ ಕಂಗಳೇಕೆ ?
ದಿವ್ಯಧಾಮವನ್ನು ಕಂಡ
ಮನವ, ಮಾಯೆ ಸೆಳೆಯಬೇಕೆ ?
ಮತ್ತೆ ನಿಶೆಯು ಕವಿದು ಹಿರಿಯ
ನೋಟವಿಲ್ಲದಾಗುತಿಹುದು
ನೋಡಿದತ್ತ ಕಾಳ್ಗತ್ತಲೆ
ಮೇರೆವರಿದು ಘೂರ್‍ಣಿಸುವದು
ಮತ್ತೆ ಕಾಮ-ಮೋಹ ಬೆರಸಿ
ಸೃಜಿಸಿದ ಪುತ್ತಳಿಯು,-ಹೆಣ್ಣು.
ಪ್ರಕೃತಿಯತುಲ ಸೌಂದರ್‍ಯ-
ಕಿರುವ ಸ್ಫುರಣ, ಬರಿಯ ಮಣ್ಣು
ಅಲ್ಲಿ-ಇಲ್ಲಿ ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ಮಾನವಾಭ್ಯುದಯದ ದೇವಿ !
ನಿನ್ನ ಪ್ರೀತಿಗೆಂದು ಲಲ್ಲೆ-
ಯಿಂದ ಬುವಿಯ ಹಿರಿಯಣುಗರು
ತಮ್ಮ ಬಾಳ ತೊರೆಯಲಿಲ್ಲೆ
ಆತ್ಮಯಜ್ಞವನ್ನೆ ಹೂಡಿ
ನಿನ್ನ ಹಸಿವ ಹಿಂಗಿಸಿದರು.
‘ಏಕೆ ತೆರೆಯನೆತ್ತಲೊಲ್ಲೆ?’
ಎಂದು ನಿನ್ನ ಹಂಗಿಸಿದರು
‘ಮುಂದೆ ಬರುವ ವಂಶಕಿರಲಿ
ಶಾಂತಿ ಕಾಂತಿಯಮಿತವಾಗಿ,
ತಾಯೆ ! ರಜನಿ ಮುಗಿಯಲೆ ’ಂದು
ಪ್ರಾರ್ಥಿಸಿದರು ಪ್ರಾಣ ನೀಗಿ.
ಆದರೇನು? ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ವ್ಯರ್‍ಥವವರ ತ್ಯಾಗ ಮತ್ತೆ
ನೀ ಕೇಳಲು ಬಲಿಯನಿಂದು !
ವ್ಯಕ್ತಿಯೊಳನುರಕ್ತಳೆನುವೆ.
ಇಡಿ ಕುಲಕೀ ಭಾಗ್ಯವೆಂದು !
ಆಡಿದಾಟವನ್ನೆ ಆಡಿ
ಬರೆದುದನ್ನೆ ಬರೆಯುತಿರುವೆ.
ಒಂದೆ ಲಿಪಿಯ ನೀ ಪುನರಪಿ
ಬರೆಯುತಳಿಸಿ ಬರೆಯುತಿರುವೆ !
ಗೆದ್ದುದನ್ನೆ ಮತ್ತೆ ಗೆಲಲು
ಮುನ್ನಡೆಯುವರೇನು ? ತಾಯೆ !
ಇಹೆಯಾ ಮಾಯೆಯಂಕಿತದಲಿ ?
ನಿನ್ನೂಳಿಗದವಳು ಮಾಯೆ !
ಆದರೇನು ? ಬೆಳಕು, ನಿಶೆಯು,-
ಇದುವೆ ನಿನ್ನ ಗಮನದಿಶೆಯು !
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...