Home / ಕವನ / ಕವಿತೆ / ಅಭ್ಯುದಯ

ಅಭ್ಯುದಯ

ಇಳೆಯನೆಲ್ಲ ತುಂಬಿನಿಂತು
ನಾಟ್ಯವಾಡುತಿರುವ ರೂಹೆ !
ಅಲ್ಲಿ-ಇಲ್ಲಿ ಎಲ್ಲೆಡೆಯಲಿ
ಇದ್ದ ನಿನ್ನ ನಿಲುಕದೂಹೆ !
ಮನವ ಸೆಳೆದುಕೊಳ್ಳುವ ಶಕ್ತಿ !
ನಿನ್ನ ಮಿರುಗಮಿಂಚಿದೇನು ?
ಬಣ್ಣ ಬಣ್ಣಗಳನ್ನು ತೋರ್‍ವ
ನಿನ್ನ ಸಹಜ ಸೃಷ್ಟಿಯೇನು ?
ಬಂದ ಮಾವಿನಡಿಗೆ ನಿಂತು
ನಿನ್ನ ಚೆಲುವ ನೋಡಬಹುದು
ನಿನ್ನ ಲತೆಗಳೊಡನೆ ಕೂಡಿ
ಕೇಳ್ದ ವರವ ಪಡೆಯಬಹುದು
ಅಲ್ಲಿ ಇಲ್ಲಿ ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ನಿಜ ಮನೋಜವಿಹ ವಿಶಾಲ
ದೃಷ್ಟಿಯೊಂದು ಕೊನರುತಿಹುದು.
ಬುದ್ಧಿಗಿರುವ ಕಣ್ಣಿನಲ್ಲಿ
ಮತ್ತೆ ಮತ್ತೆ ಹೊಳೆಯುತಿಹುದು.
ಬಿದ್ದು ನಿದ್ರೆಗೈವ ದಿನ್ನೆ
ಯಮನ ಕೋಣವಾಗಬಹುದು.
ಬಳಿಗೆ ಸುಳಿವ ಮರ್‍ತ್ಯಕನ್ಯೆ
ಸ್ವರ್‍ಲಲನೆಯೆ ಆಗಬಹುದು.
ಸನಿಯಕಿರುವ ಗೆಳೆಯನೆದೆಯು
ಅಲ್ಲವೇನು ಸ್ಪರ್‍ಶಮಣಿಯು ?
ತಿಳಿದು ನೋಡೆ,- ಭುವನವಿದು
ಅಲ್ಲವೇನು ಮುದ್ದು ಕಣಿಯು !
ಅಲ್ಲಿ- ಇಲ್ಲಿ- ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ಆದರಿಂಧ ದೃಷ್ಟಿ ಕಳೆದು
ಹುಟ್ಟುಗುರುಡ ಕಂಗಳೇಕೆ ?
ದಿವ್ಯಧಾಮವನ್ನು ಕಂಡ
ಮನವ, ಮಾಯೆ ಸೆಳೆಯಬೇಕೆ ?
ಮತ್ತೆ ನಿಶೆಯು ಕವಿದು ಹಿರಿಯ
ನೋಟವಿಲ್ಲದಾಗುತಿಹುದು
ನೋಡಿದತ್ತ ಕಾಳ್ಗತ್ತಲೆ
ಮೇರೆವರಿದು ಘೂರ್‍ಣಿಸುವದು
ಮತ್ತೆ ಕಾಮ-ಮೋಹ ಬೆರಸಿ
ಸೃಜಿಸಿದ ಪುತ್ತಳಿಯು,-ಹೆಣ್ಣು.
ಪ್ರಕೃತಿಯತುಲ ಸೌಂದರ್‍ಯ-
ಕಿರುವ ಸ್ಫುರಣ, ಬರಿಯ ಮಣ್ಣು
ಅಲ್ಲಿ-ಇಲ್ಲಿ ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ಮಾನವಾಭ್ಯುದಯದ ದೇವಿ !
ನಿನ್ನ ಪ್ರೀತಿಗೆಂದು ಲಲ್ಲೆ-
ಯಿಂದ ಬುವಿಯ ಹಿರಿಯಣುಗರು
ತಮ್ಮ ಬಾಳ ತೊರೆಯಲಿಲ್ಲೆ
ಆತ್ಮಯಜ್ಞವನ್ನೆ ಹೂಡಿ
ನಿನ್ನ ಹಸಿವ ಹಿಂಗಿಸಿದರು.
‘ಏಕೆ ತೆರೆಯನೆತ್ತಲೊಲ್ಲೆ?’
ಎಂದು ನಿನ್ನ ಹಂಗಿಸಿದರು
‘ಮುಂದೆ ಬರುವ ವಂಶಕಿರಲಿ
ಶಾಂತಿ ಕಾಂತಿಯಮಿತವಾಗಿ,
ತಾಯೆ ! ರಜನಿ ಮುಗಿಯಲೆ ’ಂದು
ಪ್ರಾರ್ಥಿಸಿದರು ಪ್ರಾಣ ನೀಗಿ.
ಆದರೇನು? ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ವ್ಯರ್‍ಥವವರ ತ್ಯಾಗ ಮತ್ತೆ
ನೀ ಕೇಳಲು ಬಲಿಯನಿಂದು !
ವ್ಯಕ್ತಿಯೊಳನುರಕ್ತಳೆನುವೆ.
ಇಡಿ ಕುಲಕೀ ಭಾಗ್ಯವೆಂದು !
ಆಡಿದಾಟವನ್ನೆ ಆಡಿ
ಬರೆದುದನ್ನೆ ಬರೆಯುತಿರುವೆ.
ಒಂದೆ ಲಿಪಿಯ ನೀ ಪುನರಪಿ
ಬರೆಯುತಳಿಸಿ ಬರೆಯುತಿರುವೆ !
ಗೆದ್ದುದನ್ನೆ ಮತ್ತೆ ಗೆಲಲು
ಮುನ್ನಡೆಯುವರೇನು ? ತಾಯೆ !
ಇಹೆಯಾ ಮಾಯೆಯಂಕಿತದಲಿ ?
ನಿನ್ನೂಳಿಗದವಳು ಮಾಯೆ !
ಆದರೇನು ? ಬೆಳಕು, ನಿಶೆಯು,-
ಇದುವೆ ನಿನ್ನ ಗಮನದಿಶೆಯು !
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...