Home / ಕವನ / ಕವಿತೆ / ಅಭ್ಯುದಯ

ಅಭ್ಯುದಯ

ಇಳೆಯನೆಲ್ಲ ತುಂಬಿನಿಂತು
ನಾಟ್ಯವಾಡುತಿರುವ ರೂಹೆ !
ಅಲ್ಲಿ-ಇಲ್ಲಿ ಎಲ್ಲೆಡೆಯಲಿ
ಇದ್ದ ನಿನ್ನ ನಿಲುಕದೂಹೆ !
ಮನವ ಸೆಳೆದುಕೊಳ್ಳುವ ಶಕ್ತಿ !
ನಿನ್ನ ಮಿರುಗಮಿಂಚಿದೇನು ?
ಬಣ್ಣ ಬಣ್ಣಗಳನ್ನು ತೋರ್‍ವ
ನಿನ್ನ ಸಹಜ ಸೃಷ್ಟಿಯೇನು ?
ಬಂದ ಮಾವಿನಡಿಗೆ ನಿಂತು
ನಿನ್ನ ಚೆಲುವ ನೋಡಬಹುದು
ನಿನ್ನ ಲತೆಗಳೊಡನೆ ಕೂಡಿ
ಕೇಳ್ದ ವರವ ಪಡೆಯಬಹುದು
ಅಲ್ಲಿ ಇಲ್ಲಿ ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ನಿಜ ಮನೋಜವಿಹ ವಿಶಾಲ
ದೃಷ್ಟಿಯೊಂದು ಕೊನರುತಿಹುದು.
ಬುದ್ಧಿಗಿರುವ ಕಣ್ಣಿನಲ್ಲಿ
ಮತ್ತೆ ಮತ್ತೆ ಹೊಳೆಯುತಿಹುದು.
ಬಿದ್ದು ನಿದ್ರೆಗೈವ ದಿನ್ನೆ
ಯಮನ ಕೋಣವಾಗಬಹುದು.
ಬಳಿಗೆ ಸುಳಿವ ಮರ್‍ತ್ಯಕನ್ಯೆ
ಸ್ವರ್‍ಲಲನೆಯೆ ಆಗಬಹುದು.
ಸನಿಯಕಿರುವ ಗೆಳೆಯನೆದೆಯು
ಅಲ್ಲವೇನು ಸ್ಪರ್‍ಶಮಣಿಯು ?
ತಿಳಿದು ನೋಡೆ,- ಭುವನವಿದು
ಅಲ್ಲವೇನು ಮುದ್ದು ಕಣಿಯು !
ಅಲ್ಲಿ- ಇಲ್ಲಿ- ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ಆದರಿಂಧ ದೃಷ್ಟಿ ಕಳೆದು
ಹುಟ್ಟುಗುರುಡ ಕಂಗಳೇಕೆ ?
ದಿವ್ಯಧಾಮವನ್ನು ಕಂಡ
ಮನವ, ಮಾಯೆ ಸೆಳೆಯಬೇಕೆ ?
ಮತ್ತೆ ನಿಶೆಯು ಕವಿದು ಹಿರಿಯ
ನೋಟವಿಲ್ಲದಾಗುತಿಹುದು
ನೋಡಿದತ್ತ ಕಾಳ್ಗತ್ತಲೆ
ಮೇರೆವರಿದು ಘೂರ್‍ಣಿಸುವದು
ಮತ್ತೆ ಕಾಮ-ಮೋಹ ಬೆರಸಿ
ಸೃಜಿಸಿದ ಪುತ್ತಳಿಯು,-ಹೆಣ್ಣು.
ಪ್ರಕೃತಿಯತುಲ ಸೌಂದರ್‍ಯ-
ಕಿರುವ ಸ್ಫುರಣ, ಬರಿಯ ಮಣ್ಣು
ಅಲ್ಲಿ-ಇಲ್ಲಿ ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ಮಾನವಾಭ್ಯುದಯದ ದೇವಿ !
ನಿನ್ನ ಪ್ರೀತಿಗೆಂದು ಲಲ್ಲೆ-
ಯಿಂದ ಬುವಿಯ ಹಿರಿಯಣುಗರು
ತಮ್ಮ ಬಾಳ ತೊರೆಯಲಿಲ್ಲೆ
ಆತ್ಮಯಜ್ಞವನ್ನೆ ಹೂಡಿ
ನಿನ್ನ ಹಸಿವ ಹಿಂಗಿಸಿದರು.
‘ಏಕೆ ತೆರೆಯನೆತ್ತಲೊಲ್ಲೆ?’
ಎಂದು ನಿನ್ನ ಹಂಗಿಸಿದರು
‘ಮುಂದೆ ಬರುವ ವಂಶಕಿರಲಿ
ಶಾಂತಿ ಕಾಂತಿಯಮಿತವಾಗಿ,
ತಾಯೆ ! ರಜನಿ ಮುಗಿಯಲೆ ’ಂದು
ಪ್ರಾರ್ಥಿಸಿದರು ಪ್ರಾಣ ನೀಗಿ.
ಆದರೇನು? ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ವ್ಯರ್‍ಥವವರ ತ್ಯಾಗ ಮತ್ತೆ
ನೀ ಕೇಳಲು ಬಲಿಯನಿಂದು !
ವ್ಯಕ್ತಿಯೊಳನುರಕ್ತಳೆನುವೆ.
ಇಡಿ ಕುಲಕೀ ಭಾಗ್ಯವೆಂದು !
ಆಡಿದಾಟವನ್ನೆ ಆಡಿ
ಬರೆದುದನ್ನೆ ಬರೆಯುತಿರುವೆ.
ಒಂದೆ ಲಿಪಿಯ ನೀ ಪುನರಪಿ
ಬರೆಯುತಳಿಸಿ ಬರೆಯುತಿರುವೆ !
ಗೆದ್ದುದನ್ನೆ ಮತ್ತೆ ಗೆಲಲು
ಮುನ್ನಡೆಯುವರೇನು ? ತಾಯೆ !
ಇಹೆಯಾ ಮಾಯೆಯಂಕಿತದಲಿ ?
ನಿನ್ನೂಳಿಗದವಳು ಮಾಯೆ !
ಆದರೇನು ? ಬೆಳಕು, ನಿಶೆಯು,-
ಇದುವೆ ನಿನ್ನ ಗಮನದಿಶೆಯು !
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...