ಅಭ್ಯುದಯ

ಇಳೆಯನೆಲ್ಲ ತುಂಬಿನಿಂತು
ನಾಟ್ಯವಾಡುತಿರುವ ರೂಹೆ !
ಅಲ್ಲಿ-ಇಲ್ಲಿ ಎಲ್ಲೆಡೆಯಲಿ
ಇದ್ದ ನಿನ್ನ ನಿಲುಕದೂಹೆ !
ಮನವ ಸೆಳೆದುಕೊಳ್ಳುವ ಶಕ್ತಿ !
ನಿನ್ನ ಮಿರುಗಮಿಂಚಿದೇನು ?
ಬಣ್ಣ ಬಣ್ಣಗಳನ್ನು ತೋರ್‍ವ
ನಿನ್ನ ಸಹಜ ಸೃಷ್ಟಿಯೇನು ?
ಬಂದ ಮಾವಿನಡಿಗೆ ನಿಂತು
ನಿನ್ನ ಚೆಲುವ ನೋಡಬಹುದು
ನಿನ್ನ ಲತೆಗಳೊಡನೆ ಕೂಡಿ
ಕೇಳ್ದ ವರವ ಪಡೆಯಬಹುದು
ಅಲ್ಲಿ ಇಲ್ಲಿ ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ನಿಜ ಮನೋಜವಿಹ ವಿಶಾಲ
ದೃಷ್ಟಿಯೊಂದು ಕೊನರುತಿಹುದು.
ಬುದ್ಧಿಗಿರುವ ಕಣ್ಣಿನಲ್ಲಿ
ಮತ್ತೆ ಮತ್ತೆ ಹೊಳೆಯುತಿಹುದು.
ಬಿದ್ದು ನಿದ್ರೆಗೈವ ದಿನ್ನೆ
ಯಮನ ಕೋಣವಾಗಬಹುದು.
ಬಳಿಗೆ ಸುಳಿವ ಮರ್‍ತ್ಯಕನ್ಯೆ
ಸ್ವರ್‍ಲಲನೆಯೆ ಆಗಬಹುದು.
ಸನಿಯಕಿರುವ ಗೆಳೆಯನೆದೆಯು
ಅಲ್ಲವೇನು ಸ್ಪರ್‍ಶಮಣಿಯು ?
ತಿಳಿದು ನೋಡೆ,- ಭುವನವಿದು
ಅಲ್ಲವೇನು ಮುದ್ದು ಕಣಿಯು !
ಅಲ್ಲಿ- ಇಲ್ಲಿ- ನೋಡಿದಲ್ಲಿ
ಎಸೆಯುತಿಹುದು ನಿನ್ನ ಬಳ್ಳಿ !

ಆದರಿಂಧ ದೃಷ್ಟಿ ಕಳೆದು
ಹುಟ್ಟುಗುರುಡ ಕಂಗಳೇಕೆ ?
ದಿವ್ಯಧಾಮವನ್ನು ಕಂಡ
ಮನವ, ಮಾಯೆ ಸೆಳೆಯಬೇಕೆ ?
ಮತ್ತೆ ನಿಶೆಯು ಕವಿದು ಹಿರಿಯ
ನೋಟವಿಲ್ಲದಾಗುತಿಹುದು
ನೋಡಿದತ್ತ ಕಾಳ್ಗತ್ತಲೆ
ಮೇರೆವರಿದು ಘೂರ್‍ಣಿಸುವದು
ಮತ್ತೆ ಕಾಮ-ಮೋಹ ಬೆರಸಿ
ಸೃಜಿಸಿದ ಪುತ್ತಳಿಯು,-ಹೆಣ್ಣು.
ಪ್ರಕೃತಿಯತುಲ ಸೌಂದರ್‍ಯ-
ಕಿರುವ ಸ್ಫುರಣ, ಬರಿಯ ಮಣ್ಣು
ಅಲ್ಲಿ-ಇಲ್ಲಿ ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ಮಾನವಾಭ್ಯುದಯದ ದೇವಿ !
ನಿನ್ನ ಪ್ರೀತಿಗೆಂದು ಲಲ್ಲೆ-
ಯಿಂದ ಬುವಿಯ ಹಿರಿಯಣುಗರು
ತಮ್ಮ ಬಾಳ ತೊರೆಯಲಿಲ್ಲೆ
ಆತ್ಮಯಜ್ಞವನ್ನೆ ಹೂಡಿ
ನಿನ್ನ ಹಸಿವ ಹಿಂಗಿಸಿದರು.
‘ಏಕೆ ತೆರೆಯನೆತ್ತಲೊಲ್ಲೆ?’
ಎಂದು ನಿನ್ನ ಹಂಗಿಸಿದರು
‘ಮುಂದೆ ಬರುವ ವಂಶಕಿರಲಿ
ಶಾಂತಿ ಕಾಂತಿಯಮಿತವಾಗಿ,
ತಾಯೆ ! ರಜನಿ ಮುಗಿಯಲೆ ’ಂದು
ಪ್ರಾರ್ಥಿಸಿದರು ಪ್ರಾಣ ನೀಗಿ.
ಆದರೇನು? ನೋಡಿದಲ್ಲಿ
ಕಾಳರೂಪವೆಸೆವುದಿಲ್ಲಿ !

ವ್ಯರ್‍ಥವವರ ತ್ಯಾಗ ಮತ್ತೆ
ನೀ ಕೇಳಲು ಬಲಿಯನಿಂದು !
ವ್ಯಕ್ತಿಯೊಳನುರಕ್ತಳೆನುವೆ.
ಇಡಿ ಕುಲಕೀ ಭಾಗ್ಯವೆಂದು !
ಆಡಿದಾಟವನ್ನೆ ಆಡಿ
ಬರೆದುದನ್ನೆ ಬರೆಯುತಿರುವೆ.
ಒಂದೆ ಲಿಪಿಯ ನೀ ಪುನರಪಿ
ಬರೆಯುತಳಿಸಿ ಬರೆಯುತಿರುವೆ !
ಗೆದ್ದುದನ್ನೆ ಮತ್ತೆ ಗೆಲಲು
ಮುನ್ನಡೆಯುವರೇನು ? ತಾಯೆ !
ಇಹೆಯಾ ಮಾಯೆಯಂಕಿತದಲಿ ?
ನಿನ್ನೂಳಿಗದವಳು ಮಾಯೆ !
ಆದರೇನು ? ಬೆಳಕು, ನಿಶೆಯು,-
ಇದುವೆ ನಿನ್ನ ಗಮನದಿಶೆಯು !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರಾವಣಸಮೀರ!
Next post ಏಡಿರಾಜ

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys