ಹರಕೆ

ಮಂದಗತಿ ಮಂದತರವಾಗಿಬಿಟ್ಟಿದೆ; ಹುಲ್ಲೆ-
ಗಂಗಳೊಳು ಚಂಚಲತೆ ಕುಡಿಯೊಡೆಯಲಿದೆ; ಉಡುಗಿ
ಮೈನಯದ ನೆಯ್ಗೆ ತೊಪ್ಪಲು; ಹರೆಯ ಚಿಗುರಡಗಿ
ನೆತ್ತರದ ನೆರೆಗೆಂಪು ಹಳಸುತಿದೆ ಭರದಲ್ಲೆ.
ಹಾರು ಹಕ್ಕಿಯ ಪುಚ್ಚವೆಣಿಸಲೆಳಸಿದ ಬೆಡಗಿ!
ವಿಜಯ ವಿಠ್ಠಲನ ಗುಡಿ ಭಣಗುಡುವ ತೆರದಲ್ಲೆ
ಹರುಹಲಿರುವೆದೆ ಬರಿದೊ ಬರಿದು; ಮಿದು ಸವಿಸೊಲ್ಲೆ
ಹುಟ್ಟದಿದೆ; ಕೈನೀಡಿ ಬೆಳೆದು ನಿಂತಿಯೆ ಹುಡುಗಿ !

ದಿನದ ದಣಿವನು ಕಳೆಯೆ ತಂಗಿ ಹಾರುವ ಹಕ್ಕಿ
ಎರಗದಿರಲಿಲ್ಲ. ಕಟ್ಟಾಡಿಸಲು ಬರದಿರಲಿ
ಹುಡುಗ ಗಾಳಿ, ಅನಾದಿವಂಶದಾ ವೈಭವೋ-
ದಯವ ಮೂಸಿಸಿ ಬಿಡುವ ತುಂಬಿ ಬರದಿರು, ನವೋ-
ನವ ಮನೋರಥಸಫಲ ಪೊಸ ಬಸಂತನೆ ಬರಲಿ.
ನಿನಗೆ ಕಾವಲವಿರಲಿ ನಿನ್ನ ಚಂದ್ರಮ ಚಿಕ್ಕಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಧುರ ಮಂಡಲ ಮತ್ತು ಅದರ ಅವಶ್ಯಕತೆಯು
Next post ಸಮಾದಾನ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…