ಅಲ್ಲಮ ಪ್ರಭು

ಮನದ ಬಯಲಲಿ ಬವಣೆಗೊಂಡೆ, ಬಿಸಿಲಿನ ಝಳದೆ
ಹುಲ್ಲೆ ಹಂಗಿಸುವ ಹುಸಿನೀರ ಕಾಂಬೊಲು ಕಂಡೆ-
ನೀರ, ನೇಹಿಗ, ನಂಟ, ಬಂಟ, ಸಂವಾದಿ, ಗುರು,
ಶಿಷ್ಯ, ಪ್ರೀತಿಯ ಚಾತಿಗಾರ! ಎಲ್ಲಿರುವೆ ರಸ-
ಸಿದ್ಧ ಗೋರಕ್ಷನುಕ್ಕಿಲೆ ಹೊಯ್ದರೂ ಮುಕ್ಕು
ತುಕ್ಕರಿಯದಿದ್ದ ಮೈಕವಚ ಕಳೆದಿಡುವಂತೆ
ಕೆಳಗಿರಿಸಿ, ಕದಳಿಯಲ್ಲಡಗಿ ಕಾಣದೆ ಹೋದ,
ಲಿಂಗ ಲೀಲಾವಿಲಾಸದಲಿ ನಟಿಸದ ಮೂರ್‍ತಿ?

ವಚನ ವಿದ್ಯಾನಟಿಯು ಕುಣಿಕುಣಿದಳಂದು, ಮ-
ದ್ದಳೆಯ ಸೊಲ್ಲಿಗೆ ವಿವಿಧ ಭಂಗಿಯಲಿ; ಶೂನ್ಯದಲಿ
ಹುಟ್ಟುಗಟ್ಟಿತು ಹದುಳದೊಂದು ಹುಣ್ಣಿಮೆ; ಬೆಡಗು
ಬಿನ್ನಾಣ ಬಿಡಿಸಿ, ಬೆಳುದಿಂಗಳವ ಕುಡಿದ ಮಧು-
ಮತ್ತ ಚಿತ್ತ-ಚಕೋರ ಕೇಳುತಿದೆ, ಹೇಳುತಿದೆ –
“ಬೇರೆ ದರುಶನವೇಕೆ? ಮಾತೆ ಜ್ಯೋತಿರ್‍ಲಿಂಗ?”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮೀನಗಡದ ಸಂತೆ
Next post ಬಲೆ ಜಿಪ್ಣ ಮುನಿಯ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys