ಅಲ್ಲಮ ಪ್ರಭು

ಮನದ ಬಯಲಲಿ ಬವಣೆಗೊಂಡೆ, ಬಿಸಿಲಿನ ಝಳದೆ
ಹುಲ್ಲೆ ಹಂಗಿಸುವ ಹುಸಿನೀರ ಕಾಂಬೊಲು ಕಂಡೆ-
ನೀರ, ನೇಹಿಗ, ನಂಟ, ಬಂಟ, ಸಂವಾದಿ, ಗುರು,
ಶಿಷ್ಯ, ಪ್ರೀತಿಯ ಚಾತಿಗಾರ! ಎಲ್ಲಿರುವೆ ರಸ-
ಸಿದ್ಧ ಗೋರಕ್ಷನುಕ್ಕಿಲೆ ಹೊಯ್ದರೂ ಮುಕ್ಕು
ತುಕ್ಕರಿಯದಿದ್ದ ಮೈಕವಚ ಕಳೆದಿಡುವಂತೆ
ಕೆಳಗಿರಿಸಿ, ಕದಳಿಯಲ್ಲಡಗಿ ಕಾಣದೆ ಹೋದ,
ಲಿಂಗ ಲೀಲಾವಿಲಾಸದಲಿ ನಟಿಸದ ಮೂರ್‍ತಿ?

ವಚನ ವಿದ್ಯಾನಟಿಯು ಕುಣಿಕುಣಿದಳಂದು, ಮ-
ದ್ದಳೆಯ ಸೊಲ್ಲಿಗೆ ವಿವಿಧ ಭಂಗಿಯಲಿ; ಶೂನ್ಯದಲಿ
ಹುಟ್ಟುಗಟ್ಟಿತು ಹದುಳದೊಂದು ಹುಣ್ಣಿಮೆ; ಬೆಡಗು
ಬಿನ್ನಾಣ ಬಿಡಿಸಿ, ಬೆಳುದಿಂಗಳವ ಕುಡಿದ ಮಧು-
ಮತ್ತ ಚಿತ್ತ-ಚಕೋರ ಕೇಳುತಿದೆ, ಹೇಳುತಿದೆ –
“ಬೇರೆ ದರುಶನವೇಕೆ? ಮಾತೆ ಜ್ಯೋತಿರ್‍ಲಿಂಗ?”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮೀನಗಡದ ಸಂತೆ
Next post ಬಲೆ ಜಿಪ್ಣ ಮುನಿಯ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…