ರತ್ನಾಕರ

ಕೃತಿಗಳೊಳು ನಿನ್ನ ಶೃಂಗಾರ ಪಾವನ ಗಂಗೆ-
ಯೊಲು; ರಸವು ಸಮರಸವು. ರುಚಿಯು ಶುಚಿ,
ಸುಭಗ, ಗಂಭೀರ, ಅಸಮಾನ, ನೂತನ, ರಮ್ಯ,
ಮಧುರತಮದೃಷ್ಟಿ ಸುಖವೃಷ್ಟಿ; ಕಲ್ಲಿನಲು
ನಂದನದ ಅಂದ ಕಂಡರಿಸಿ ಕುಸಿರಿಸಿ ನಗುವ
ರೂವಾರಿ ಬಗೆ; ದುಗುಡ ದುಮ್ಮಾನಗಳ ಹಗೆಯೊ.
ಜಾತಿರಸಿಕನೆ ನೀನು ‘ಹಿಡಿದದೇ ತಿರುಳು, ನುಡಿ-
ದುದೆ ಹುರುಳು’ ನಿಜವಾಗಿ ಲೌಕಿಕವಲೌಕಿಕವು!

ನೆಲಮುಗಿಲುಗಳನೊಂದೆ ಅಂಗೈಲಿ ಹಿಡಿವಂತೆ
ಭೋಗಯೋಗವ ಹೊಂದಿಸಿಹ ದಿವ್ಯ ಭವ್ಯ ಕವಿ !
ರನ್ನ ಬಗೆ, ಹೊನ್ನ ನುಡಿ ಕುಂದಣಿಸಿದವರುಂಟು.
ಉಸುರಿದವರೆಷ್ಟು ಜ್ಯೋತಿಯಲಿ ಜಾತಿಯೆ ಹೂತು,
ಪರಿಮಳಿಸುವೊಲು ಸಾರ್ವಭೌಮ ಕಣಿ ಕಣಸುಗಳ?
ಹುಟ್ಟು ಖುಷಿಯಲ್ಲದನ ಕಬ್ಬ ಹಬ್ಬವೆ ಜಗಕೆ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದುರ್ಗಗಳೇ!
Next post ನಂ ದೇವ್ರು ಮುನಿಯ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…