ಮುಡಿಪಿದ ಹೂ

ಬಾಗಿ ಬಾಗದ ಹಠದ ದಿಟದ ಸಾಧನೆಯ ಸಾ-
ಹಸದಲ್ಲಿ, ಜೋಕೆ ತೂಕಗಳಿಂದ ವಿಷವ ಹಿಳಿ-
ದೆಳೆದು, ಜೀವನದ ಸವಿ ಬೆರಿಸಿ, ರಸವನ್ನು ತೊರೆ-
ಯಿಸಲೆಳಸಿ, ನಿನ್ನ ಜೀವನ ಚಂದ್ರಕಲೆ ಮಿತ್ರ-
ತಾಪವನ್ನು ನುಂಗಿ ನಗೆಗೂಡಿ, ಬಡತನ ನೀಗಿ,
ತಾಯಿ ನೆಲವನೆ ಸುತ್ತಿಯೊಳಗೊಂಡು ಬಲಗೊಂಡು,
ದಿನದಿನಕೆ ಎದೆಯ ಸುಧೆಯಿಂದ ತೀವಿದ ಮೈಯು
ತಂಬಗೊಳ್ಳುತ್ತಿರಲು, ಕ್ಷಯವು ನುಂಗಿತೆ ಅದನು !

ಬಾನಬಯಲಿನ ತುಂಬ ಮೋಡಗಳೆ ಮೂಡಿದರು,
ಕಾಣಕಾಣುತ ವಸ್ತು ಕನಸು ಗೂಡಿದರು, ಚರಿ-
ತೆ ಕತೆಯಾದರು, ಮಿಂಚಿದುಸಿರು ಸ್ಮೃತಿಪಥಲೀನ-
ವಾದರೂ-ನಶ್ವರವೆ ? ಎಲೆಗೆ ಪ್ರಾಣಜ್ಯೋತಿ !
ಹುಳಹೊಕ್ಕ ಹೂವನೊಳಹೊಕ್ಕು ಅರಿತವರಂಟೆ ?
ಮಗಮಗಿಸಿ ಹೋದ ನಗೆ ಹೂವ ಮರೆತವರಂಟೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನ ಸಾವು
Next post ಇದರಾಗ್ ಐತೆ ಮರ್‍ಮ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…