ಸಮಾದಾನ

ಕುಡದ್ಬುಟ್ಟು ಮೋರೀಲ್ ನಾ ಬಿದ್ಕೊಂಡ್ ಇವ್ನೀಂತ್ ಏಳಿ
ಎಲ್ಲಾರ ನೆಗ್ತಾರೆ ಸುಂಸುಂಕೇನೆ.
ಎಲ್ರಂಗೇ ಮನ್ಸ-ಇವನೇನೋ ಒಸ್ ತಪ್ದಾಂತ
ಅನ್ನಾಲ್ಲ-ಬೆಪ್ಗಳ್ಗೆ ಏನ್ ಏಳಾನೆ ! ೧

ಆಕಾಸ್ದಲ್ ಸೂರ್‍ಯಾವ್ನೆ-ದೊಡ್ಡ್ ಮನ್ಸ-ವಾಸ್ತವ-
ಗ್ರಾಸ್ತ್ನಂತೆ ಅಗಲೆಲ್ಲ ತಿರಗಾಡ್ತಾನೆ;
ಸಂಜೆ ಆಯ್ತ್ ಅಂದರ್‌ ಸಾಕ್- ಪಚ್ಚಿ ಮದೂರಾಚೇಲಿ
ಮಡಗೀರೊ ಪಡಕಾನೇಗ್ ಓಡೋಯ್ತಾನೆ! ೨

ಪಟ್ಟಾಗಿ ಒಡದ್ಬುಟ್ಟು ತೂರಾಡ್ತ ತೂಗ್ತಾನೆ!
ಕಣ್ಗಳ್ನ ಕೆಂಪಿಗ್ ಮಾಡ್ ತೇಲಿಸ್ತಾನೆ!
ನನ್ ಅಣಕ್ಸೊ ನರಮನ್ಸ ಸೂರ್‍ಯನ್ಗೆ ಬಾಯ್ಬುಟ್ಟಿ
ಅದಕಂತೆ ಇದಕಂತೆ ವೋಲೀಸ್ತಾನೆ! ೩

ತೂರಾಡ್ತ ಮೋರೀಗೆ ಮೋಚ್ತಾನೆ ಸೂರ್‍ಯಪ್ಪ-
ಕೆಸರೆಲ್ಲ ಛಿಲ್ಲಂತ ಮೇಲ್ ಆರ್‍ತದೆ!
ಅದಕಂಡು ‘ಕತ್ಲಾತು ಕತ್ಲಾತು’ ಅನ್ಕೊಂಡಿ
ಬೆಪ್ತಕಡಿ ಲೋಕೆಲ್ಲ ಕೂಗ್ ಆಕ್ತದೆ! ೪

ಚಿಕ್ಕೋರ್ ಸಿಕ್ಕೌರಣ್ಣ ಎಲ್ಲಾರ್ ನೆಗಾಕೆ!
ದೊಡ್ಕೋರ್ ಎಂಗಾಡಿದ್ರ ಎಲ್ಲಾನ ಸೈ!
ಲೋಕಾನೆ ಇಂಗೈತೆ-ನಾನ್ ಯಾಕ್ ದುಕ್ಪಡಲಿ-
ಮುನಿಯನ್ಗು ಯೆಂಡಕ್ಕು ಬೋಲೋರೇ ಜೈ! ೫
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹರಕೆ
Next post ದೃಷ್ಟಿ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…