Home / ಕವನ / ಕವಿತೆ / ಸಮಾದಾನ

ಸಮಾದಾನ

ಕುಡದ್ಬುಟ್ಟು ಮೋರೀಲ್ ನಾ ಬಿದ್ಕೊಂಡ್ ಇವ್ನೀಂತ್ ಏಳಿ
ಎಲ್ಲಾರ ನೆಗ್ತಾರೆ ಸುಂಸುಂಕೇನೆ.
ಎಲ್ರಂಗೇ ಮನ್ಸ-ಇವನೇನೋ ಒಸ್ ತಪ್ದಾಂತ
ಅನ್ನಾಲ್ಲ-ಬೆಪ್ಗಳ್ಗೆ ಏನ್ ಏಳಾನೆ ! ೧

ಆಕಾಸ್ದಲ್ ಸೂರ್‍ಯಾವ್ನೆ-ದೊಡ್ಡ್ ಮನ್ಸ-ವಾಸ್ತವ-
ಗ್ರಾಸ್ತ್ನಂತೆ ಅಗಲೆಲ್ಲ ತಿರಗಾಡ್ತಾನೆ;
ಸಂಜೆ ಆಯ್ತ್ ಅಂದರ್‌ ಸಾಕ್- ಪಚ್ಚಿ ಮದೂರಾಚೇಲಿ
ಮಡಗೀರೊ ಪಡಕಾನೇಗ್ ಓಡೋಯ್ತಾನೆ! ೨

ಪಟ್ಟಾಗಿ ಒಡದ್ಬುಟ್ಟು ತೂರಾಡ್ತ ತೂಗ್ತಾನೆ!
ಕಣ್ಗಳ್ನ ಕೆಂಪಿಗ್ ಮಾಡ್ ತೇಲಿಸ್ತಾನೆ!
ನನ್ ಅಣಕ್ಸೊ ನರಮನ್ಸ ಸೂರ್‍ಯನ್ಗೆ ಬಾಯ್ಬುಟ್ಟಿ
ಅದಕಂತೆ ಇದಕಂತೆ ವೋಲೀಸ್ತಾನೆ! ೩

ತೂರಾಡ್ತ ಮೋರೀಗೆ ಮೋಚ್ತಾನೆ ಸೂರ್‍ಯಪ್ಪ-
ಕೆಸರೆಲ್ಲ ಛಿಲ್ಲಂತ ಮೇಲ್ ಆರ್‍ತದೆ!
ಅದಕಂಡು ‘ಕತ್ಲಾತು ಕತ್ಲಾತು’ ಅನ್ಕೊಂಡಿ
ಬೆಪ್ತಕಡಿ ಲೋಕೆಲ್ಲ ಕೂಗ್ ಆಕ್ತದೆ! ೪

ಚಿಕ್ಕೋರ್ ಸಿಕ್ಕೌರಣ್ಣ ಎಲ್ಲಾರ್ ನೆಗಾಕೆ!
ದೊಡ್ಕೋರ್ ಎಂಗಾಡಿದ್ರ ಎಲ್ಲಾನ ಸೈ!
ಲೋಕಾನೆ ಇಂಗೈತೆ-ನಾನ್ ಯಾಕ್ ದುಕ್ಪಡಲಿ-
ಮುನಿಯನ್ಗು ಯೆಂಡಕ್ಕು ಬೋಲೋರೇ ಜೈ! ೫
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...