Home / ಕವನ / ಕವಿತೆ / ಪ್ರಾರ್‍ತನೆ

ಪ್ರಾರ್‍ತನೆ

ಬ್ರಮ್ಮ! ನಿಂಗೆ ಜೋಡಿಸ್ತೀನಿ
ಯೆಂಡ ಮುಟ್ಟಿದ್ ಕೈನ!
ಬೂಮೀ ಉದ್ಕು ಬೊಗ್ಗಿಸ್ತೀನಿ
ಯೆಂಡ ತುಂಬ್ಕೊಂಡ್ ಮೈನ! ೧

ಬುರ್ ಬುರ್ ನೊರೆ ಬಸಿಯೋವಂತ
ಒಳ್ಳೆ ವುಳಿ ಯೆಂಡ
ಕೊಡ್ತೀನ್ ನನ್ದು ಪ್ರಾರ್‍ತ್ನೆ ಕೇಳು
ಸರಸೋತಮ್ಮನ್ ಗಂಡ! ೨

ಸರಸೋತಮ್ಮ ಮನಸ್ಕೊಂಡೌಳೆ
ನೀನಾರ್ ಒಸ್ಸಿ ಯೋಳು;
ಕುಡದ್ಬುಟ್ ಆಡ್ದ್ರೆ ತೋಲ್ತಾದಣ್ಣ
ನಾಲ್ಗೆ – ಬಾಳ ಗೋಳು! ೩

ಅಕ್ಸ್ರಾನೆಲ್ಲಾ ಸರಸೋತಮ್ಮ
ಪಟ್ಟಾಗ್ ಇಡಕೊಂಬುಟ್ಟಿ
ಮುನಿಯ ಯೆಂಡ ಬುಡೊವಂಗೇನೆ
ಬುಡತಾಳ್-ಔಟ್ ಕೈ ಗಟ್ಟಿ! ೪

ಮುನಿಯಂಗಾರ ಕಾಸ್ ಓಗ್ತೈತೆ
ಯೆಚ್ಗೆ ಯೆಂಡ ಬುಟ್ರೆ;
ಸರಸೋತಮ್ಮಂಗ್ ಏನೋಗ್ತೈತೆ
ಮಾತ್ ಸಲೀಸಾಗ್ ಕೊಟ್ರೆ? ೫

ನಂಗೆ ನೀನು ಲಾಯ್ರಿಯಾಗಿ
ನನ್ ಕೇಸ್ ಗೆದ್‌ಗಿದ್ ಕೊಟ್ರೆ
ಮಾಡ್ತೀನಣ್ಣ ನಿನ್ ವೊಟ್ಟೇನ
ವುಳಿ ಯೆಂಡಕ್ ಪೊಟ್ರೆ! ೬

ಕಮಲದ್ ಊವಿನ್ ಕುರ್ಚಿ ಮೇಗೆ
ಜೋಕಾಗ್ ಕುಂತೊ ನೀನು!
ನಾಕೂ ಬಾಯ್ಗೂ ನಾಕು ಬುಂಡೆ
ಯೆಂಡ ತತ್ತೀನ್ ನಾನು! ೭

ಸರಸೋತಮ್ಮಂಗ್ ಯೋಳಾಕಿಲ್ಲ-
ನೀನೇನ್ ಎದರ್‍ಕೊಬೇಡ;
ಕೇಳಿದ್ ವರಾನ್ ವೊಂದೀಸ್ಕೊಟ್ರೆ-
ತಕ್ಕೊ! ಯೆಂಡದ್ ಫೇಡ! ೮
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...