ಪ್ರಾರ್‍ತನೆ

ಬ್ರಮ್ಮ! ನಿಂಗೆ ಜೋಡಿಸ್ತೀನಿ
ಯೆಂಡ ಮುಟ್ಟಿದ್ ಕೈನ!
ಬೂಮೀ ಉದ್ಕು ಬೊಗ್ಗಿಸ್ತೀನಿ
ಯೆಂಡ ತುಂಬ್ಕೊಂಡ್ ಮೈನ! ೧

ಬುರ್ ಬುರ್ ನೊರೆ ಬಸಿಯೋವಂತ
ಒಳ್ಳೆ ವುಳಿ ಯೆಂಡ
ಕೊಡ್ತೀನ್ ನನ್ದು ಪ್ರಾರ್‍ತ್ನೆ ಕೇಳು
ಸರಸೋತಮ್ಮನ್ ಗಂಡ! ೨

ಸರಸೋತಮ್ಮ ಮನಸ್ಕೊಂಡೌಳೆ
ನೀನಾರ್ ಒಸ್ಸಿ ಯೋಳು;
ಕುಡದ್ಬುಟ್ ಆಡ್ದ್ರೆ ತೋಲ್ತಾದಣ್ಣ
ನಾಲ್ಗೆ – ಬಾಳ ಗೋಳು! ೩

ಅಕ್ಸ್ರಾನೆಲ್ಲಾ ಸರಸೋತಮ್ಮ
ಪಟ್ಟಾಗ್ ಇಡಕೊಂಬುಟ್ಟಿ
ಮುನಿಯ ಯೆಂಡ ಬುಡೊವಂಗೇನೆ
ಬುಡತಾಳ್-ಔಟ್ ಕೈ ಗಟ್ಟಿ! ೪

ಮುನಿಯಂಗಾರ ಕಾಸ್ ಓಗ್ತೈತೆ
ಯೆಚ್ಗೆ ಯೆಂಡ ಬುಟ್ರೆ;
ಸರಸೋತಮ್ಮಂಗ್ ಏನೋಗ್ತೈತೆ
ಮಾತ್ ಸಲೀಸಾಗ್ ಕೊಟ್ರೆ? ೫

ನಂಗೆ ನೀನು ಲಾಯ್ರಿಯಾಗಿ
ನನ್ ಕೇಸ್ ಗೆದ್‌ಗಿದ್ ಕೊಟ್ರೆ
ಮಾಡ್ತೀನಣ್ಣ ನಿನ್ ವೊಟ್ಟೇನ
ವುಳಿ ಯೆಂಡಕ್ ಪೊಟ್ರೆ! ೬

ಕಮಲದ್ ಊವಿನ್ ಕುರ್ಚಿ ಮೇಗೆ
ಜೋಕಾಗ್ ಕುಂತೊ ನೀನು!
ನಾಕೂ ಬಾಯ್ಗೂ ನಾಕು ಬುಂಡೆ
ಯೆಂಡ ತತ್ತೀನ್ ನಾನು! ೭

ಸರಸೋತಮ್ಮಂಗ್ ಯೋಳಾಕಿಲ್ಲ-
ನೀನೇನ್ ಎದರ್‍ಕೊಬೇಡ;
ಕೇಳಿದ್ ವರಾನ್ ವೊಂದೀಸ್ಕೊಟ್ರೆ-
ತಕ್ಕೊ! ಯೆಂಡದ್ ಫೇಡ! ೮
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಡಲು
Next post ಪಾರ್ಕಿಂಗ್

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…