Home / ಕವನ / ಕವಿತೆ / ಹೊತ್ತಲ್ಲದ ಹೊತ್ತಲ್ಲಿ

ಹೊತ್ತಲ್ಲದ ಹೊತ್ತಲ್ಲಿ

ಇಳೆಗೆ ಹೊಸರಾಗ ಕಲಿಸುವ ಹುಚ್ಚು
ಯಾಕೆ ಬಂತೋ ಈ ಮಳೆಗೆ?

ಹೊತ್ತು – ಗೊತ್ತು
ಒಂದೂ ಇಲ್ಲದೇ ಹೀಗೆ
ಸುರಿದು ಬಿಡುವುದೇ ಇಳೆಗೆ?

ನಡೆಯುತ್ತಾ ನಡೆಯುತ್ತಾ
ಅರ್ಧದಲ್ಲೇ ಥಟ್ಟನೆ
ಎಲ್ಲಾ ನಿಂತು
ಗಾಳಿ – ನೀರು – ಬೇರುಗಳೆಲ್ಲಾ
ಇಳೆಯೊಂದಿಗೇ
ಮೌನದಾಳದಲಿ ಹೂತಿರುವಾಗ
ಜೀವಂತಿಕೆ ಇಲ್ಲದೇ ಸೋತಿರುವಾಗ

ಇಳೆಗೆ ಹೊಸರಾಗ ಕಲಿಸುವ ಹುಚ್ಚು
ಯಾಕೆ ಬಂತೋ ಈ ಮಳೆಗೆ?

ಬೇಕೋ – ಬೇಡವೋ
ಆಗಲೋ – ಈಗಲೋ
ಎಂದನುಮಾನಿಸುತ್ತಲೇ
ಮೆಲ್ಲಗೆ ಕದ ತೆರೆದು
ಮುಗ್ಧತೆಯಿಂದ ಮಳೆಯ ಕಥೆಗೆ
ಕಿವಿ ನೀಡಿದ್ದ ಇಳೆಗೆ
ಸದ್ದಿಲ್ಲದೇ ರಪರಪನೆ ಬಡಿದು
ತೊಯ್ದು ತೊಪ್ಪೆಯಾಗಿಸಿದ ಮಳೆಗೆ
ಮೀಸೆಯಂಚಿನಲ್ಲೇ ನಗು
ಇಳೆಯನ್ನರಳಿಸಿದ ಬೀಗು!

ಏನೂ ಆಗಿಯೇ ಇಲ್ಲವೆಂಬಂತೆ
ಮಳೆ ನೀರು ಕೊಡವಿ
ಮಿಂದು ಮಡಿಯುಟ್ಟ ಇಳೆ
ತನ್ನೆದೆಯಾಳದ ಮಾತಿಗೆ
ಜೀವ ಬಂದುದ ನೋಡಿ ಹಿಗ್ಗುತ್ತದೆ
ಹಮ್ಮಿನಲಿ ದೂರ ಸರಿದು ನಿಂತ
ಮಳೆಯ ತಬ್ಬಿ
ನೂರು ಹೊಸರಾಗಗಳ ಹಾಡುತ್ತದೆ
ಕಂಡೂ ಕಾಣದಂತೆ
ಗೆಲುವಿನ ನಗೆ ನಗುತ್ತದೆ!
ಇಳೆಯ ಮೈ ಮನದ ತುಂಬೆಲ್ಲಾ
ಈಗ ಚಿಗುರು ಹೂ – ಹಣ್ಣು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...