Home / ಕವನ / ಕವಿತೆ / ಹೊತ್ತಲ್ಲದ ಹೊತ್ತಲ್ಲಿ

ಹೊತ್ತಲ್ಲದ ಹೊತ್ತಲ್ಲಿ

ಇಳೆಗೆ ಹೊಸರಾಗ ಕಲಿಸುವ ಹುಚ್ಚು
ಯಾಕೆ ಬಂತೋ ಈ ಮಳೆಗೆ?

ಹೊತ್ತು – ಗೊತ್ತು
ಒಂದೂ ಇಲ್ಲದೇ ಹೀಗೆ
ಸುರಿದು ಬಿಡುವುದೇ ಇಳೆಗೆ?

ನಡೆಯುತ್ತಾ ನಡೆಯುತ್ತಾ
ಅರ್ಧದಲ್ಲೇ ಥಟ್ಟನೆ
ಎಲ್ಲಾ ನಿಂತು
ಗಾಳಿ – ನೀರು – ಬೇರುಗಳೆಲ್ಲಾ
ಇಳೆಯೊಂದಿಗೇ
ಮೌನದಾಳದಲಿ ಹೂತಿರುವಾಗ
ಜೀವಂತಿಕೆ ಇಲ್ಲದೇ ಸೋತಿರುವಾಗ

ಇಳೆಗೆ ಹೊಸರಾಗ ಕಲಿಸುವ ಹುಚ್ಚು
ಯಾಕೆ ಬಂತೋ ಈ ಮಳೆಗೆ?

ಬೇಕೋ – ಬೇಡವೋ
ಆಗಲೋ – ಈಗಲೋ
ಎಂದನುಮಾನಿಸುತ್ತಲೇ
ಮೆಲ್ಲಗೆ ಕದ ತೆರೆದು
ಮುಗ್ಧತೆಯಿಂದ ಮಳೆಯ ಕಥೆಗೆ
ಕಿವಿ ನೀಡಿದ್ದ ಇಳೆಗೆ
ಸದ್ದಿಲ್ಲದೇ ರಪರಪನೆ ಬಡಿದು
ತೊಯ್ದು ತೊಪ್ಪೆಯಾಗಿಸಿದ ಮಳೆಗೆ
ಮೀಸೆಯಂಚಿನಲ್ಲೇ ನಗು
ಇಳೆಯನ್ನರಳಿಸಿದ ಬೀಗು!

ಏನೂ ಆಗಿಯೇ ಇಲ್ಲವೆಂಬಂತೆ
ಮಳೆ ನೀರು ಕೊಡವಿ
ಮಿಂದು ಮಡಿಯುಟ್ಟ ಇಳೆ
ತನ್ನೆದೆಯಾಳದ ಮಾತಿಗೆ
ಜೀವ ಬಂದುದ ನೋಡಿ ಹಿಗ್ಗುತ್ತದೆ
ಹಮ್ಮಿನಲಿ ದೂರ ಸರಿದು ನಿಂತ
ಮಳೆಯ ತಬ್ಬಿ
ನೂರು ಹೊಸರಾಗಗಳ ಹಾಡುತ್ತದೆ
ಕಂಡೂ ಕಾಣದಂತೆ
ಗೆಲುವಿನ ನಗೆ ನಗುತ್ತದೆ!
ಇಳೆಯ ಮೈ ಮನದ ತುಂಬೆಲ್ಲಾ
ಈಗ ಚಿಗುರು ಹೂ – ಹಣ್ಣು!
*****

Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...