ನಂಬಿಕೆ

ತೆನೆ – ೧

ಗಂಟೆಯ ಮುಳ್ಳು ನಿಂತಿದೆ
ನಿಮಿಷದ ಮುಳ್ಳಿಗೋ ಗರಬಡಿದಿದೆ
ಕ್ಷಣದ ಮುಳ್ಳು ಹೆಜ್ಜೆ ಕಿತ್ತಿಡಲಾರದೇ
ಮೂಗುಬ್ಬಸದಿಂದ ತೆವಳುತಿದೆ
ಸೋರುತ್ತಿದೆ ಗಳಿಗೆ ಬಟ್ಟಲು
ಇನ್ನಾದರೂ ಹೊಸತಿಗೆ
ತೆರೆಯಬಾರದೇ ಬಾಗಿಲು?
ಪಿಸುಗುಟ್ಟುವ ಚಂದಿರ
ಏರಿಸುತ್ತಾನೆ ಅಮಲು !

ಹೊತ್ತಲ್ಲದ ಹೊತ್ತಲ್ಲಿ
ಎದ್ದು ಬಂದಿದ್ದಾನೆ
ನಿದ್ದೆಗಣ್ಣಿನಲ್ಲೇ ಚಂದಿರ
ಹಾಡು ಮುಗಿಯುತ್ತದೆ
ಜಾವ ಹೊರಳುತ್ತದೆ
ಗಡಿಯಾರ ನಿಂತರೇನು
ಕಾಲ ಸರಿಯುತ್ತದೆ
ಇನ್ನಾದರೂ ಹೊಸತಿಗೆ
ತೆರೆಯಬಾರದೇ ಬಾಗಿಲು?
ಗೊಣಗುತ್ತಲೇ ಮೂಡಿಸುತ್ತಾನೆ ದಿಗಿಲು!

ತೆನೆ-೨
ಒಳಗಿದ್ದದೂ ಹೊರಗುಳಿಯುವ
ಹಠಕ್ಕೆ ಬಿದ್ದು
ಎಲ್ಲಾ ಒದ್ದು
ಬೆಳಕಿಗೇ ಬೆನ್ನು ತಿರುಗಿಸಿ
ಆಕಾಶಕ್ಕೆ ಏಣಿ ಒರಗಿಸಿ
ಎತ್ತರಕ್ಕೇರಿ ಕುಳಿತ ಚಂದಿರನಿಗೆ
ಆಳಗಳು ಆರ್ಥವಾಗುವುದೆಲ್ಲಿ ?

ಹೊಸತಿಗೆ ತೆರೆದುಕೊಳ್ಳುವುದೇನೂ
ಕಷ್ಟವಲ್ಲ
ಬಾಗಿಲು ತೆರೆದುಬಿಡಬಹುದು
ಬೇಕೆನಿಸಿದ ಹೊಸತನ್ನೆಲ್ಲಾ
ಒಳಗೆ ಕರೆದುಬಿಡಬಹುದು
ಎದೆ ನೋವು ನದಿಯಾಗಿ ಹರಿದು
ಎಲ್ಲಾ ಕೊಚ್ಚಿ ಹೋಗುವ ಮೊದಲು
ಕಾಲನ ತಡೆದುಬಿಡಬಹುದು
ಆದರೆ…
ತೆರೆದ ಬಾಗಿಲಿನೊಂದಿಗೇ
ಧೂಳು ಕಸಕಡ್ಡಿಗಳೂ ಬಂದೆರಗಿದರೆ
ಹೇಗೆ ತಡೆಯುವುದು?
ಎಂದೆಲ್ಲಾ ಗೊಂದಲ!

ಆ ಮನವ
ಬೊಗಸೆಯಲಿ ಹಿಡಿದ ಚಂದಿರ
ಕಣ್ಣುಗಳ ಕೂಡಿಸಿ
ನೂರು ಮುತ್ತುಗಳ
ಪ್ರಮಾಣದ ಭರವಸೆಯನ್ನೊತ್ತಿ
ಹೊಸತೆಲ್ಲವೂ ಒಳಿತೆಂದು ಒಪ್ಪಿಸಿದ್ದಾನೆ
ಬಾಗಿಲು ತೆರೆಸಿದ್ದಾನೆ
ಹೊಸ ಬೆಳಕಿಗೆ ಕಣ್ಣು ಮೂಡಿಸಿದ್ದಾನೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೆಟಪ್
Next post ಚಿಕ್ಕಮಗಳೂನ ಬರಿ ಕರ್ಪೂರ್ದಾಗೆ ಸುಟ್ಟು ಭಸ್ಮ ಮಾಡ್ತೀನಿ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…