Home / ಕವನ / ಕವಿತೆ / ನಂಬಿಕೆ

ನಂಬಿಕೆ

ತೆನೆ – ೧

ಗಂಟೆಯ ಮುಳ್ಳು ನಿಂತಿದೆ
ನಿಮಿಷದ ಮುಳ್ಳಿಗೋ ಗರಬಡಿದಿದೆ
ಕ್ಷಣದ ಮುಳ್ಳು ಹೆಜ್ಜೆ ಕಿತ್ತಿಡಲಾರದೇ
ಮೂಗುಬ್ಬಸದಿಂದ ತೆವಳುತಿದೆ
ಸೋರುತ್ತಿದೆ ಗಳಿಗೆ ಬಟ್ಟಲು
ಇನ್ನಾದರೂ ಹೊಸತಿಗೆ
ತೆರೆಯಬಾರದೇ ಬಾಗಿಲು?
ಪಿಸುಗುಟ್ಟುವ ಚಂದಿರ
ಏರಿಸುತ್ತಾನೆ ಅಮಲು !

ಹೊತ್ತಲ್ಲದ ಹೊತ್ತಲ್ಲಿ
ಎದ್ದು ಬಂದಿದ್ದಾನೆ
ನಿದ್ದೆಗಣ್ಣಿನಲ್ಲೇ ಚಂದಿರ
ಹಾಡು ಮುಗಿಯುತ್ತದೆ
ಜಾವ ಹೊರಳುತ್ತದೆ
ಗಡಿಯಾರ ನಿಂತರೇನು
ಕಾಲ ಸರಿಯುತ್ತದೆ
ಇನ್ನಾದರೂ ಹೊಸತಿಗೆ
ತೆರೆಯಬಾರದೇ ಬಾಗಿಲು?
ಗೊಣಗುತ್ತಲೇ ಮೂಡಿಸುತ್ತಾನೆ ದಿಗಿಲು!

ತೆನೆ-೨
ಒಳಗಿದ್ದದೂ ಹೊರಗುಳಿಯುವ
ಹಠಕ್ಕೆ ಬಿದ್ದು
ಎಲ್ಲಾ ಒದ್ದು
ಬೆಳಕಿಗೇ ಬೆನ್ನು ತಿರುಗಿಸಿ
ಆಕಾಶಕ್ಕೆ ಏಣಿ ಒರಗಿಸಿ
ಎತ್ತರಕ್ಕೇರಿ ಕುಳಿತ ಚಂದಿರನಿಗೆ
ಆಳಗಳು ಆರ್ಥವಾಗುವುದೆಲ್ಲಿ ?

ಹೊಸತಿಗೆ ತೆರೆದುಕೊಳ್ಳುವುದೇನೂ
ಕಷ್ಟವಲ್ಲ
ಬಾಗಿಲು ತೆರೆದುಬಿಡಬಹುದು
ಬೇಕೆನಿಸಿದ ಹೊಸತನ್ನೆಲ್ಲಾ
ಒಳಗೆ ಕರೆದುಬಿಡಬಹುದು
ಎದೆ ನೋವು ನದಿಯಾಗಿ ಹರಿದು
ಎಲ್ಲಾ ಕೊಚ್ಚಿ ಹೋಗುವ ಮೊದಲು
ಕಾಲನ ತಡೆದುಬಿಡಬಹುದು
ಆದರೆ…
ತೆರೆದ ಬಾಗಿಲಿನೊಂದಿಗೇ
ಧೂಳು ಕಸಕಡ್ಡಿಗಳೂ ಬಂದೆರಗಿದರೆ
ಹೇಗೆ ತಡೆಯುವುದು?
ಎಂದೆಲ್ಲಾ ಗೊಂದಲ!

ಆ ಮನವ
ಬೊಗಸೆಯಲಿ ಹಿಡಿದ ಚಂದಿರ
ಕಣ್ಣುಗಳ ಕೂಡಿಸಿ
ನೂರು ಮುತ್ತುಗಳ
ಪ್ರಮಾಣದ ಭರವಸೆಯನ್ನೊತ್ತಿ
ಹೊಸತೆಲ್ಲವೂ ಒಳಿತೆಂದು ಒಪ್ಪಿಸಿದ್ದಾನೆ
ಬಾಗಿಲು ತೆರೆಸಿದ್ದಾನೆ
ಹೊಸ ಬೆಳಕಿಗೆ ಕಣ್ಣು ಮೂಡಿಸಿದ್ದಾನೆ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...