Home / ಕಥೆ / ಸಣ್ಣ ಕಥೆ / ಕತೆಗಾಗಿ ಜತೆ

ಕತೆಗಾಗಿ ಜತೆ

ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್ ಹೋಗಬೇಕು, ನಾಳಿಗೆ ಹೋಗಬೇಕು ಹೇಳಿ ಯೆಷ್ಟೋ ದಿವಸ ಕಳದ ಹೋಯ್ತು. ಆ ದಿವ್ಸ ರಾಜರ ಮನಿಹತ್ರ ಹೇಳ್ದ. ‘ನಾ ಇವತ್ತ್ ನೆಂಟ್ರ ಮನಿಗ್ ಹೋಗಬೇಕು’ ಹೇಳಿ ನೆಡ್ದೆ ಬಿಟ್ಟ . ಅವ ಮೊಳೆಯಾಗಿ ಯೆಲ್ಲಾ ವಯ್ ಸ್ತ್ರ ಅದ್ದಿ, ವಂದ್ ಅಜ್ಜಿ ಮುದ್ಕಿ ಮನಿಲ್ ಹೋಗಿ ಕೂತ ಶನೀಪದಲ್ ವಂದ್ ಊರಲ್ಲಿ.

ಆ ಅಜ್ಜಿ ಮುದ್ಕಿ ಹತ್ರ ಹೇಳ್ತ ಯೇನಂದಿ? “ನಾನು ಇಲ್ಲೆ ಬಗಿಲ್ ಮನಿಕಳೆನೆ. ಸಲ್ಪ ಜಾಗ ಕೊಡ್ಬೇಕು” ಅಂದ. ಅಜ್ಜಿ ಮುದ್ಕಿ ಯೇನ್ ಹೇಳ್ತಾಳೆ? ಹೇಳದ್ರೆ, “ನಿನ್ಗೆ ಜಾಗಕೊಡ್ಲಿಕ್ಕೆ ಅಡ್ಡಿಲ್ಲ. ಹೊದಿಲಿಕ್ಕೆ ಮಾಡ್ಲಿಕ್ಕೆ ಯೆಲ್ಲಾ ಕೊಡ್ತೇನೆ. ನಾನು ವಂದ್ ರಾಜ್ರ ಮನಿಲಿ ಕೆಲ್ಸಕೆ ಹೋಗ್ತೆ ಇದ್ದೆ. ಅಲ್ಲಿ ಆ ದಿವಸ ಯೇನಾಗಿದೆ? ನಂದು, ರಾಜ್ರ ಮನಿ ಹುಡುಗಿಗೆ ಆಳು ಅಲ್ಲಿದ್ ನಾನು ಅದ್ ಕೆ ಕತೆ ದಿನಾಲೂ ಹೇಳ್ಬೇಕು. ಇವತ್ ನಂದ ಬಾರಿ ಬಂದದೆ. ಅದ್ಕೆ ಕತೆ ಹೇಳು ದಿವಸ ಇವತ್ತೆ ಆಗದೆ. ನನ್ಗೆ ಕೆಲ್ಸ ಮಾಡಿ ಸಾಕಾಗದೆ ಕತೆನ್ನ ನೀನ್ ಹೇಳಬೇಕು.”

ಆವಾಗ ಇವ ಹೇಳ್ತಾನೆ. ಯೇನಂದ್ರೆ? “ಹಾಗಾದ್ರಜ್ಜಿ, ನೀನು ಆ ಹುಡ್ಗೀನೇ ಇಲ್ ಕರಕಂಬಾ. ನಮ್ಮನಿಲ್ ವಬ್ಬ ಮೊಮ್ಮಗ ಬಂದನೆ. ಚಲೋಕತೆ ಹೇಳ್ತಾನೆ; ಹೇಳಿ ಕರಕಂಡ ಬಾ ನಿನ್ ಮನಿಗೆ” ಅಂದ.

ಆವಾಗ ಅಜ್ಜಿ ಮುದ್ಕಿ ಅಲ್ ಹೋಗಿ ಆ ಹುಡ್ಗಿ ಹತ್ರೆ, “ಮಗಾ ಇವತ್ತೆ ನನ್ ಮೊಮ್ಮಗ ಬಂದನೆ ನನ್ನ ಮನಿಗೆ ನನಕಿಂತಾ ಚಲೋ ಕತೆ ಹೇಳ್ತಾನೆ. ಮತ್ತು ನಂಮನಿಗೆ ಹೋಗ್ವ ಬಾ” ಹೇಳಿ ಕರಕಂಡ ಬಂತು ಅಜ್ಜಿ ತನ್ ಮನಿಗೆ. ಆವಾಗೇ ಇವ್ರ ಊಟ ಬೀಟ ಮಾಡಿ, ಸಲ್ಪ ಮನಗದ್ರು. ಆವಾಗೇನಾಯ್ತು ಹೇಳಿದ್ರೆ ಅಜ್ಜಿಗೆ ಕೆಲ್ಸ ಮಾಡಿ ಸಾಕಾಗ್ ಹೋಗಿತ್ತು. ಅಜ್ಜಿಗೆ ಚಲೋ ನಿದ್ದೇನೆ ಬಿತ್ತು. ಆವಾಗ ಇವ ಕತೆ ಹೇಳ್ತಾನೆ ಹುಡ್ಗಿ ಹತ್ರ.

ಹುಡ್ಗಿ ಹತ್ರೆ ಕತೆ, “ವಂದ್ ಊರಲ್ಲಿ ವಂದ ರಾಜನ ಮನ್ಯಲ್ಲಿ ವಂದ ಮಡವಾಳರವ ಇದ್ದ. ಅವನಿಗೆ ನೆಂಟ್ರಮನಿಗೆ ವಂದ್ ದಿವಸ ಹೋಗಬೇಕು ಹೇಳದ್ರೆ ವಂದ್ ದಿವಸನೂ ಬಟ್ಟೆ ಶೆಳದಿ ಪುರಸತಿ ಹೇಳೊದಿಲ್ಲ. ಆವಾಗೆ ವಂದಲ್ಲ ವಂದ್ ದಿವಸ ಆ ಮಡವಾಳರವನಿಗೆ ಸಲ್ಪ ಸಿಟ್ ಬಂದ್ ಹೋಯ್ತು. ನೆಂಟ್ರಮನಿಗೆ ಹೋಗಲೇಬೇಕು ಹೇಳ್ ಕಾಣಿಸ್ತು.” ಆವಾಗೆ ಇವಯೇನ್ ಹೇಳ್ತ, ಹುಡಗಿ ಹತ್ರ “ನೀ ಅಷ್ಟದೂರ ಮನಿಕಂಡಿದ್ರೆ ಕೇಳವಾಂಗಿಲ್ಲ. ಚಲೋ ಕತೆ ಇದೆ.” ಮುಂದೆ ಬಂತು. “ಸಲ್ಪ ನನ್ನ ಬುಡಕೆ ಬಂದಿ ಮನಿಕೊ” ಹೇಳಿ ಹೇಳ್ತ. ಅದು ಹತ್ರ ಬಂತು. ವಂದಾನೊಂದು ದಿವಸ ಮಡವಾಳರವ ನೆಂಟ್ರ ಮನಿಗೆ ಹೋಗಕಾಗದೆಯ ವಂದ್ ಅಜ್ಜಿ ಮುದ್ಕಿ ಮನಿಲಿ ಉಳಕಂಡ. ಆಗೆ ಆ ಹುಡಗಿ ಹತ್ರೆ ಕತೆ ಹೇಳತೆ ಹೇಳತೆ ಇರಬೇಕಾದ್ರೆ ಹುಡ್ಗಿ ಮೇಲೆ ಕೆಲಸ ಸಲ್ಪ ಪೂರೈಸಿದ. ಬೆಳಿಗ್ಗೆ ಎದ್ದಿ ಮಡವಾಳದವ ಮನಿಗೆ ಹೋದ. ಆ ಹುಡಗೀನು ಮನಿಗೆ ಹೋಯ್ತು. ಹೋಗಿ ಅಪ್ಪನ ಹತ್ರ ಈ ಹುಡುಗಿ ಹೇಳತಾಳೆ “ದಿವಸಾ ವಬ್ಬಬ್ಬ ಕತೆ ಹೇಳುವುದಾಗಿತ್ತು. ಇನ್ನು ಕತೆ ನನಗೆ ಬೇಡ.”
*****

ಹೇಳಿದವರು : ಶ್ರೀ ದೇವಪ್ಪ ಅಣ್ಣಪ್ಪ, ನಾಯ್ಕ, ಹೊದ್ಕೆ, ದಿನಾಂಕ :-೨೫-೧೨-೧೯೭೧

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯಲ್ಲಿ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...