Home / ಲೇಖನ / ಇತರೆ / ಹಳೆಯ ಪ್ರಶಸ್ತಿ ಗೊತ್ತೇ?

ಹಳೆಯ ಪ್ರಶಸ್ತಿ ಗೊತ್ತೇ?

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಆದ್ದರಿಂದ ಇಂದಿನ ಮಕ್ಕಳೆಲ್ಲ ವಿಜ್ಞಾನದತ್ತ ಒಲವು ತೋರಿಸಬೇಕು. ಅದರಲ್ಲೂ ಭೌತವಿಜ್ಞಾನವನ್ನು ಅಭ್ಯಸಿಸಬೇಕು. ಜ್ಞಾನ ವಿಜ್ಞಾನದ ಮುನ್ನಡೆ ದೇಶದ ಮುನ್ನೆಡೆಯಾಗಿದೆ.

ಪ್ರತಿವರ್‍ಷ ಲಂಡನ್‌ನ ರಾಯಲ್ ಸೊಸೈಟಿ ನೀಡುವ ವಿಶ್ವದ ತೀರಾ ಹಳೆಯದಾದ ವಿಜ್ಞಾನ ಪ್ರಶಸ್ತಿಯಾದ ‘ಕೋಪ್ಲೆ ಮೆಡಲ್’ ಗೆ ಭೌತವಿಜ್ಞಾನಿ ಪೀಟರ್ ಹಿಗ್ಸ್ ಅವರು ಇತ್ತೀಚೆಗೆ ಆಯ್ಕೆಯಾಗಿರುವರು. ಅವರ ‘ದೇವಕಣ’ ಶೋಧನೆಗಾಗಿ ಈ ಪ್ರಶಸ್ತಿ ನೀಡಿದೆ.

ಪೀಟರ್ ಹಿಗ್ಸ್ ದೇವಕಣ ಕುರಿತು ೧೯೬೪ ರಲ್ಲೇ ತಮ್ಮ ಸಿದ್ಧಾಂತವನ್ನು ಮಂಡಿಸಿದ್ದರು. ಇದೇ ವೇಳೆಯಲ್ಲೇ ಫ್ರಾಂಸ್ವಾ ಎನ್‌ಗ್ಲೆರ್‍ಟ್ ಇದೇ ಸಿದ್ಧಾಂತದ ಮೇಲೆ ಕೆಲಸ ಮಾಡಿದ್ದರು!

ಹೀಗಾಗಿ ಹಲವು ಪ್ರಯೋಗಗಳ ನಂತರ ೨೦೧೨ ರಲ್ಲಿ ಹಿಗ್ಸ್ ಅವರ ಸಿದ್ಧಾಂತಕ್ಕೆ ಮಾನ್ಯತೆ ನೀಡಿದೆ ಎಂದು ವರದಿಯಾಗಿದೆ. ಈ ಮಹತ್ವದ ಸಾಧನೆಗಾಗಿ ಪೀಟರ್ ಹೀಗ್ಸ್- ಎನ್‌ಗ್ಲೆರ್‍ಟ್ ಫ್ರಾಂಸ್ವಾ ಅವರಿಗೆ ೨೦೧೩ ರಲ್ಲಿ ಜೋಡಿಯಾಗಿ ೨೦೧೩ ರಲ್ಲಿ ನೊಬೆಲ್ ಬಹುಮಾನ ನೀಡಿ ಗೌರವಿಸಲಾಗಿತ್ತು!

ಜ್ಞಾನ ವಿಜ್ಞಾನ ಕಾರ್‍ಯಕ್ಷೇತ್ರದಲ್ಲಿನ ತೀರಾ ಮಹತ್ವದ ಸಾಧನೆ ಮಾಡಿದವರಿಗಾಗಿ ರಾಯಲ್ ಸೊಸೈಟಿಯು ಈ ಪುರಸ್ಕಾರವನ್ನು ನೀಡಿ ಗೌರವಿಸುವುದು.

ಈಗಾಗಲೇ ಸ್ಟೀಫನ್ ಹಾಂಕಿಂಗ್, ಅಲೆಸ್ ಜೆಫ್ರಿ, ಆಂಡ್ರೆ ಜೆಮ್ ಮೊದಲಾದ ವಿಜ್ಞಾನಿಗಳಿಗೆ ಈ ಗೌರವ ಸಂದಿರುವುದು.

ವಿಜ್ಞಾನ ಕ್ಷೇತ್ರದಲ್ಲಿ ತೀರಾ ಹಳೆಯ ಪ್ರಶಸ್ತಿಯಾದ ಕೋಪ್ಲೆ ಮೆಡಲ್ ಪಡೆದ ಚಾರ್ಲ್ಸ್ ಡಾರ್ವಿನ್- ಅಲ್ಬರ್ಟ್ ಐನ್‌ಸ್ಟೀನ್ ಅವರ ಸಾಲಿಗೆ ಪೀಟರ್ ಹೀಗ್ಸ್ ವಯಸ್ಸು ೮೬ ವರ್ಷ ಇವರೂ ಈಗ ಸೇರ್‍ಪಡೆಯಾಗಿರುವರು.

ಮೊತ್ತ ಮೊದಲ ನೊಬೆಲ್ ಬಹುಮಾನ ನೀಡುವುದಕ್ಕಿಂತ ಸುಮಾರು ೧೭೦ ವರ್ಷಗಳಿಗೆ ಮೊದಲು ಅಂದರೆ ೧೭೩೧ ರಲ್ಲಿ ರಾಯಲ್ ಸೊಸೈಟಿಯು ಕೋಪ್ಲೆ ಮೆಡಲ್ ಪ್ರಶಸ್ತಿ ನೀಡಲು ಮೊದಲಾಯಿತು. ಹೀಗಾಗಿ ಇದು ವಿಜ್ಞಾನ ಕ್ಷೇತ್ರದ ಹಳೆಯ ಪ್ರಶಸ್ತಿ ಎಂಬ ಹಿರಿಮೆಯನ್ನು ಹೊಂದಿದೆ.

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿದ ಸಾಧಕರಿಗೆ ಹೀಗೆ ಪ್ರಶಸ್ತಿಗಳ ಸುರಿಮಳೆ ವಿಶ್ವದಾದ್ಯಂತ ಇದೆಯೆಂಬುದನ್ನು ನಾವು ನೀವು ಮನಗಾಣಬೇಕಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...