Home / ಲೇಖನ / ಇತರೆ / ಹಳೆಯ ಪ್ರಶಸ್ತಿ ಗೊತ್ತೇ?

ಹಳೆಯ ಪ್ರಶಸ್ತಿ ಗೊತ್ತೇ?

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಆದ್ದರಿಂದ ಇಂದಿನ ಮಕ್ಕಳೆಲ್ಲ ವಿಜ್ಞಾನದತ್ತ ಒಲವು ತೋರಿಸಬೇಕು. ಅದರಲ್ಲೂ ಭೌತವಿಜ್ಞಾನವನ್ನು ಅಭ್ಯಸಿಸಬೇಕು. ಜ್ಞಾನ ವಿಜ್ಞಾನದ ಮುನ್ನಡೆ ದೇಶದ ಮುನ್ನೆಡೆಯಾಗಿದೆ.

ಪ್ರತಿವರ್‍ಷ ಲಂಡನ್‌ನ ರಾಯಲ್ ಸೊಸೈಟಿ ನೀಡುವ ವಿಶ್ವದ ತೀರಾ ಹಳೆಯದಾದ ವಿಜ್ಞಾನ ಪ್ರಶಸ್ತಿಯಾದ ‘ಕೋಪ್ಲೆ ಮೆಡಲ್’ ಗೆ ಭೌತವಿಜ್ಞಾನಿ ಪೀಟರ್ ಹಿಗ್ಸ್ ಅವರು ಇತ್ತೀಚೆಗೆ ಆಯ್ಕೆಯಾಗಿರುವರು. ಅವರ ‘ದೇವಕಣ’ ಶೋಧನೆಗಾಗಿ ಈ ಪ್ರಶಸ್ತಿ ನೀಡಿದೆ.

ಪೀಟರ್ ಹಿಗ್ಸ್ ದೇವಕಣ ಕುರಿತು ೧೯೬೪ ರಲ್ಲೇ ತಮ್ಮ ಸಿದ್ಧಾಂತವನ್ನು ಮಂಡಿಸಿದ್ದರು. ಇದೇ ವೇಳೆಯಲ್ಲೇ ಫ್ರಾಂಸ್ವಾ ಎನ್‌ಗ್ಲೆರ್‍ಟ್ ಇದೇ ಸಿದ್ಧಾಂತದ ಮೇಲೆ ಕೆಲಸ ಮಾಡಿದ್ದರು!

ಹೀಗಾಗಿ ಹಲವು ಪ್ರಯೋಗಗಳ ನಂತರ ೨೦೧೨ ರಲ್ಲಿ ಹಿಗ್ಸ್ ಅವರ ಸಿದ್ಧಾಂತಕ್ಕೆ ಮಾನ್ಯತೆ ನೀಡಿದೆ ಎಂದು ವರದಿಯಾಗಿದೆ. ಈ ಮಹತ್ವದ ಸಾಧನೆಗಾಗಿ ಪೀಟರ್ ಹೀಗ್ಸ್- ಎನ್‌ಗ್ಲೆರ್‍ಟ್ ಫ್ರಾಂಸ್ವಾ ಅವರಿಗೆ ೨೦೧೩ ರಲ್ಲಿ ಜೋಡಿಯಾಗಿ ೨೦೧೩ ರಲ್ಲಿ ನೊಬೆಲ್ ಬಹುಮಾನ ನೀಡಿ ಗೌರವಿಸಲಾಗಿತ್ತು!

ಜ್ಞಾನ ವಿಜ್ಞಾನ ಕಾರ್‍ಯಕ್ಷೇತ್ರದಲ್ಲಿನ ತೀರಾ ಮಹತ್ವದ ಸಾಧನೆ ಮಾಡಿದವರಿಗಾಗಿ ರಾಯಲ್ ಸೊಸೈಟಿಯು ಈ ಪುರಸ್ಕಾರವನ್ನು ನೀಡಿ ಗೌರವಿಸುವುದು.

ಈಗಾಗಲೇ ಸ್ಟೀಫನ್ ಹಾಂಕಿಂಗ್, ಅಲೆಸ್ ಜೆಫ್ರಿ, ಆಂಡ್ರೆ ಜೆಮ್ ಮೊದಲಾದ ವಿಜ್ಞಾನಿಗಳಿಗೆ ಈ ಗೌರವ ಸಂದಿರುವುದು.

ವಿಜ್ಞಾನ ಕ್ಷೇತ್ರದಲ್ಲಿ ತೀರಾ ಹಳೆಯ ಪ್ರಶಸ್ತಿಯಾದ ಕೋಪ್ಲೆ ಮೆಡಲ್ ಪಡೆದ ಚಾರ್ಲ್ಸ್ ಡಾರ್ವಿನ್- ಅಲ್ಬರ್ಟ್ ಐನ್‌ಸ್ಟೀನ್ ಅವರ ಸಾಲಿಗೆ ಪೀಟರ್ ಹೀಗ್ಸ್ ವಯಸ್ಸು ೮೬ ವರ್ಷ ಇವರೂ ಈಗ ಸೇರ್‍ಪಡೆಯಾಗಿರುವರು.

ಮೊತ್ತ ಮೊದಲ ನೊಬೆಲ್ ಬಹುಮಾನ ನೀಡುವುದಕ್ಕಿಂತ ಸುಮಾರು ೧೭೦ ವರ್ಷಗಳಿಗೆ ಮೊದಲು ಅಂದರೆ ೧೭೩೧ ರಲ್ಲಿ ರಾಯಲ್ ಸೊಸೈಟಿಯು ಕೋಪ್ಲೆ ಮೆಡಲ್ ಪ್ರಶಸ್ತಿ ನೀಡಲು ಮೊದಲಾಯಿತು. ಹೀಗಾಗಿ ಇದು ವಿಜ್ಞಾನ ಕ್ಷೇತ್ರದ ಹಳೆಯ ಪ್ರಶಸ್ತಿ ಎಂಬ ಹಿರಿಮೆಯನ್ನು ಹೊಂದಿದೆ.

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿದ ಸಾಧಕರಿಗೆ ಹೀಗೆ ಪ್ರಶಸ್ತಿಗಳ ಸುರಿಮಳೆ ವಿಶ್ವದಾದ್ಯಂತ ಇದೆಯೆಂಬುದನ್ನು ನಾವು ನೀವು ಮನಗಾಣಬೇಕಾಗಿದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...