Home / ಲೇಖನ / ಇತರೆ / ಹಳೆಯ ಪ್ರಶಸ್ತಿ ಗೊತ್ತೇ?

ಹಳೆಯ ಪ್ರಶಸ್ತಿ ಗೊತ್ತೇ?

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಆದ್ದರಿಂದ ಇಂದಿನ ಮಕ್ಕಳೆಲ್ಲ ವಿಜ್ಞಾನದತ್ತ ಒಲವು ತೋರಿಸಬೇಕು. ಅದರಲ್ಲೂ ಭೌತವಿಜ್ಞಾನವನ್ನು ಅಭ್ಯಸಿಸಬೇಕು. ಜ್ಞಾನ ವಿಜ್ಞಾನದ ಮುನ್ನಡೆ ದೇಶದ ಮುನ್ನೆಡೆಯಾಗಿದೆ.

ಪ್ರತಿವರ್‍ಷ ಲಂಡನ್‌ನ ರಾಯಲ್ ಸೊಸೈಟಿ ನೀಡುವ ವಿಶ್ವದ ತೀರಾ ಹಳೆಯದಾದ ವಿಜ್ಞಾನ ಪ್ರಶಸ್ತಿಯಾದ ‘ಕೋಪ್ಲೆ ಮೆಡಲ್’ ಗೆ ಭೌತವಿಜ್ಞಾನಿ ಪೀಟರ್ ಹಿಗ್ಸ್ ಅವರು ಇತ್ತೀಚೆಗೆ ಆಯ್ಕೆಯಾಗಿರುವರು. ಅವರ ‘ದೇವಕಣ’ ಶೋಧನೆಗಾಗಿ ಈ ಪ್ರಶಸ್ತಿ ನೀಡಿದೆ.

ಪೀಟರ್ ಹಿಗ್ಸ್ ದೇವಕಣ ಕುರಿತು ೧೯೬೪ ರಲ್ಲೇ ತಮ್ಮ ಸಿದ್ಧಾಂತವನ್ನು ಮಂಡಿಸಿದ್ದರು. ಇದೇ ವೇಳೆಯಲ್ಲೇ ಫ್ರಾಂಸ್ವಾ ಎನ್‌ಗ್ಲೆರ್‍ಟ್ ಇದೇ ಸಿದ್ಧಾಂತದ ಮೇಲೆ ಕೆಲಸ ಮಾಡಿದ್ದರು!

ಹೀಗಾಗಿ ಹಲವು ಪ್ರಯೋಗಗಳ ನಂತರ ೨೦೧೨ ರಲ್ಲಿ ಹಿಗ್ಸ್ ಅವರ ಸಿದ್ಧಾಂತಕ್ಕೆ ಮಾನ್ಯತೆ ನೀಡಿದೆ ಎಂದು ವರದಿಯಾಗಿದೆ. ಈ ಮಹತ್ವದ ಸಾಧನೆಗಾಗಿ ಪೀಟರ್ ಹೀಗ್ಸ್- ಎನ್‌ಗ್ಲೆರ್‍ಟ್ ಫ್ರಾಂಸ್ವಾ ಅವರಿಗೆ ೨೦೧೩ ರಲ್ಲಿ ಜೋಡಿಯಾಗಿ ೨೦೧೩ ರಲ್ಲಿ ನೊಬೆಲ್ ಬಹುಮಾನ ನೀಡಿ ಗೌರವಿಸಲಾಗಿತ್ತು!

ಜ್ಞಾನ ವಿಜ್ಞಾನ ಕಾರ್‍ಯಕ್ಷೇತ್ರದಲ್ಲಿನ ತೀರಾ ಮಹತ್ವದ ಸಾಧನೆ ಮಾಡಿದವರಿಗಾಗಿ ರಾಯಲ್ ಸೊಸೈಟಿಯು ಈ ಪುರಸ್ಕಾರವನ್ನು ನೀಡಿ ಗೌರವಿಸುವುದು.

ಈಗಾಗಲೇ ಸ್ಟೀಫನ್ ಹಾಂಕಿಂಗ್, ಅಲೆಸ್ ಜೆಫ್ರಿ, ಆಂಡ್ರೆ ಜೆಮ್ ಮೊದಲಾದ ವಿಜ್ಞಾನಿಗಳಿಗೆ ಈ ಗೌರವ ಸಂದಿರುವುದು.

ವಿಜ್ಞಾನ ಕ್ಷೇತ್ರದಲ್ಲಿ ತೀರಾ ಹಳೆಯ ಪ್ರಶಸ್ತಿಯಾದ ಕೋಪ್ಲೆ ಮೆಡಲ್ ಪಡೆದ ಚಾರ್ಲ್ಸ್ ಡಾರ್ವಿನ್- ಅಲ್ಬರ್ಟ್ ಐನ್‌ಸ್ಟೀನ್ ಅವರ ಸಾಲಿಗೆ ಪೀಟರ್ ಹೀಗ್ಸ್ ವಯಸ್ಸು ೮೬ ವರ್ಷ ಇವರೂ ಈಗ ಸೇರ್‍ಪಡೆಯಾಗಿರುವರು.

ಮೊತ್ತ ಮೊದಲ ನೊಬೆಲ್ ಬಹುಮಾನ ನೀಡುವುದಕ್ಕಿಂತ ಸುಮಾರು ೧೭೦ ವರ್ಷಗಳಿಗೆ ಮೊದಲು ಅಂದರೆ ೧೭೩೧ ರಲ್ಲಿ ರಾಯಲ್ ಸೊಸೈಟಿಯು ಕೋಪ್ಲೆ ಮೆಡಲ್ ಪ್ರಶಸ್ತಿ ನೀಡಲು ಮೊದಲಾಯಿತು. ಹೀಗಾಗಿ ಇದು ವಿಜ್ಞಾನ ಕ್ಷೇತ್ರದ ಹಳೆಯ ಪ್ರಶಸ್ತಿ ಎಂಬ ಹಿರಿಮೆಯನ್ನು ಹೊಂದಿದೆ.

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿದ ಸಾಧಕರಿಗೆ ಹೀಗೆ ಪ್ರಶಸ್ತಿಗಳ ಸುರಿಮಳೆ ವಿಶ್ವದಾದ್ಯಂತ ಇದೆಯೆಂಬುದನ್ನು ನಾವು ನೀವು ಮನಗಾಣಬೇಕಾಗಿದೆ.
*****

Tagged:

Leave a Reply

Your email address will not be published. Required fields are marked *

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...