Home / ಲೇಖನ / ಇತರೆ / ಹಳೆಯ ಪ್ರಶಸ್ತಿ ಗೊತ್ತೇ?

ಹಳೆಯ ಪ್ರಶಸ್ತಿ ಗೊತ್ತೇ?

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಆದ್ದರಿಂದ ಇಂದಿನ ಮಕ್ಕಳೆಲ್ಲ ವಿಜ್ಞಾನದತ್ತ ಒಲವು ತೋರಿಸಬೇಕು. ಅದರಲ್ಲೂ ಭೌತವಿಜ್ಞಾನವನ್ನು ಅಭ್ಯಸಿಸಬೇಕು. ಜ್ಞಾನ ವಿಜ್ಞಾನದ ಮುನ್ನಡೆ ದೇಶದ ಮುನ್ನೆಡೆಯಾಗಿದೆ.

ಪ್ರತಿವರ್‍ಷ ಲಂಡನ್‌ನ ರಾಯಲ್ ಸೊಸೈಟಿ ನೀಡುವ ವಿಶ್ವದ ತೀರಾ ಹಳೆಯದಾದ ವಿಜ್ಞಾನ ಪ್ರಶಸ್ತಿಯಾದ ‘ಕೋಪ್ಲೆ ಮೆಡಲ್’ ಗೆ ಭೌತವಿಜ್ಞಾನಿ ಪೀಟರ್ ಹಿಗ್ಸ್ ಅವರು ಇತ್ತೀಚೆಗೆ ಆಯ್ಕೆಯಾಗಿರುವರು. ಅವರ ‘ದೇವಕಣ’ ಶೋಧನೆಗಾಗಿ ಈ ಪ್ರಶಸ್ತಿ ನೀಡಿದೆ.

ಪೀಟರ್ ಹಿಗ್ಸ್ ದೇವಕಣ ಕುರಿತು ೧೯೬೪ ರಲ್ಲೇ ತಮ್ಮ ಸಿದ್ಧಾಂತವನ್ನು ಮಂಡಿಸಿದ್ದರು. ಇದೇ ವೇಳೆಯಲ್ಲೇ ಫ್ರಾಂಸ್ವಾ ಎನ್‌ಗ್ಲೆರ್‍ಟ್ ಇದೇ ಸಿದ್ಧಾಂತದ ಮೇಲೆ ಕೆಲಸ ಮಾಡಿದ್ದರು!

ಹೀಗಾಗಿ ಹಲವು ಪ್ರಯೋಗಗಳ ನಂತರ ೨೦೧೨ ರಲ್ಲಿ ಹಿಗ್ಸ್ ಅವರ ಸಿದ್ಧಾಂತಕ್ಕೆ ಮಾನ್ಯತೆ ನೀಡಿದೆ ಎಂದು ವರದಿಯಾಗಿದೆ. ಈ ಮಹತ್ವದ ಸಾಧನೆಗಾಗಿ ಪೀಟರ್ ಹೀಗ್ಸ್- ಎನ್‌ಗ್ಲೆರ್‍ಟ್ ಫ್ರಾಂಸ್ವಾ ಅವರಿಗೆ ೨೦೧೩ ರಲ್ಲಿ ಜೋಡಿಯಾಗಿ ೨೦೧೩ ರಲ್ಲಿ ನೊಬೆಲ್ ಬಹುಮಾನ ನೀಡಿ ಗೌರವಿಸಲಾಗಿತ್ತು!

ಜ್ಞಾನ ವಿಜ್ಞಾನ ಕಾರ್‍ಯಕ್ಷೇತ್ರದಲ್ಲಿನ ತೀರಾ ಮಹತ್ವದ ಸಾಧನೆ ಮಾಡಿದವರಿಗಾಗಿ ರಾಯಲ್ ಸೊಸೈಟಿಯು ಈ ಪುರಸ್ಕಾರವನ್ನು ನೀಡಿ ಗೌರವಿಸುವುದು.

ಈಗಾಗಲೇ ಸ್ಟೀಫನ್ ಹಾಂಕಿಂಗ್, ಅಲೆಸ್ ಜೆಫ್ರಿ, ಆಂಡ್ರೆ ಜೆಮ್ ಮೊದಲಾದ ವಿಜ್ಞಾನಿಗಳಿಗೆ ಈ ಗೌರವ ಸಂದಿರುವುದು.

ವಿಜ್ಞಾನ ಕ್ಷೇತ್ರದಲ್ಲಿ ತೀರಾ ಹಳೆಯ ಪ್ರಶಸ್ತಿಯಾದ ಕೋಪ್ಲೆ ಮೆಡಲ್ ಪಡೆದ ಚಾರ್ಲ್ಸ್ ಡಾರ್ವಿನ್- ಅಲ್ಬರ್ಟ್ ಐನ್‌ಸ್ಟೀನ್ ಅವರ ಸಾಲಿಗೆ ಪೀಟರ್ ಹೀಗ್ಸ್ ವಯಸ್ಸು ೮೬ ವರ್ಷ ಇವರೂ ಈಗ ಸೇರ್‍ಪಡೆಯಾಗಿರುವರು.

ಮೊತ್ತ ಮೊದಲ ನೊಬೆಲ್ ಬಹುಮಾನ ನೀಡುವುದಕ್ಕಿಂತ ಸುಮಾರು ೧೭೦ ವರ್ಷಗಳಿಗೆ ಮೊದಲು ಅಂದರೆ ೧೭೩೧ ರಲ್ಲಿ ರಾಯಲ್ ಸೊಸೈಟಿಯು ಕೋಪ್ಲೆ ಮೆಡಲ್ ಪ್ರಶಸ್ತಿ ನೀಡಲು ಮೊದಲಾಯಿತು. ಹೀಗಾಗಿ ಇದು ವಿಜ್ಞಾನ ಕ್ಷೇತ್ರದ ಹಳೆಯ ಪ್ರಶಸ್ತಿ ಎಂಬ ಹಿರಿಮೆಯನ್ನು ಹೊಂದಿದೆ.

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿದ ಸಾಧಕರಿಗೆ ಹೀಗೆ ಪ್ರಶಸ್ತಿಗಳ ಸುರಿಮಳೆ ವಿಶ್ವದಾದ್ಯಂತ ಇದೆಯೆಂಬುದನ್ನು ನಾವು ನೀವು ಮನಗಾಣಬೇಕಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...