Home / ಲೇಖನ / ಇತರೆ / ಜನಸಂಖ್ಯೆ ಕತೆ

ಜನಸಂಖ್ಯೆ ಕತೆ

ಭವ್ಯ ಭಾರತದ ಜನಸಂಖ್ಯೆಯೂ ಯಾರ ನಿಯಂತ್ರಣದಲ್ಲಿಲ್ಲ. ಬರೀ ಕಾಗದ ಪತ್ರ ಘೋಷಣೆಗಳನ್ನು ಬಿಟ್ಟರೆ, ಯಾವುದೇ ಒತ್ತಡ ಅರಿವು ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ನಮ್ಮಲ್ಲಿ ಇಲ್ಲ.

ಕ್ರಿಸ್ತ ಶಕ ದಿನಾಂಕ ೩೦-೧೨-೨೦೨೨ರ ವೇಳೆಗೆ ಭವ್ಯ ಭಾರತದ ಸಂಖ್ಯೆಯು ಚೀನಾ ದೇಶವನ್ನು ಹಿಂದಿಕ್ಕಿ ಭಾರೀ ಮೇಲುಗೈ ಸಾಧಿಸಲಿದೆಯೆಂದು ಇತ್ತೀಚೆಗೆ ೨೦೧೫ರ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದ ವಿಶ್ವಸಂಸ್ಥೆಯ “ವಿಶ್ವ ಜನಸಂಖ್ಯೆ ನಿರೀಕ್ಷೆಗಳು ೨೦೧೫ರ ಪರಿಷ್ಕರಣೆ” ಎಂಬ ಅಧ್ಯಯನ ವರದಿಯಲ್ಲಿ ವಿವರಿಸಿರುವುದು.

ವಿಶ್ವದಲ್ಲಿ ಸದ್ಯ ಚೀನಾ- ಭಾರತ ದೇಶಗಳು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಹುದೊಡ್ಡ ರಾಷ್ಟ್ರಗಳಾಗಿವೆ. ೨೦೨೨ರ ವೇಳೆಗೆ ಭಾರತವು ಚೀನಾ ದೇಶವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವೆಂದು ಗುರ್‍ತಿಸಿಕೊಳ್ಳಲಿದೆಯೆಂದೂ ಇಡೀ ವಿಶ್ವದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ೧೯% ರಷ್ಟು ಚೀನಾದ ಜನಸಂಖ್ಯೆ ಯಾಗಿದ್ದರೆ ಶೇಕಡಾ ೧೮% ರಷ್ಟು ಭವ್ಯ ಭಾರತದ್ದಾಗಿದೆಯೆಂದು ವಿಶ್ವಸಂಸ್ಥೆ ದಿನಾಂಕ ೦೬-೦೮-೨೦೧೫ರಂದು ಬಹಿರಂಗ ಪಡಿಸಿದೆ.

ನೈಜೀರಿಯಾ ಏಷ್ಯಾದ ಐದು ರಾಷ್ಟ್ರಗಳಾದ ಬಾಂಗ್ಲಾದೇಶ, ಚೀನಾ, ಭವ್ಯಭಾರತ, ಇಂಡೋನೇಷ್ಯಾ ಹಾಗೂ ಪಾಕಿಸ್ತಾನ, ಲ್ಯಾಟಿನ್ ಅಮೇರಿಕಾದ ಎರಡು ದೇಶಗಳಾದ ಬ್ರೆಜಿಲ್ ಮತ್ತು ಮೆಕ್ಸಿಕೊ, ಉತ್ತರ ಅಮೆರಿಕ ಹಾಗೂ ಯುರೋಫ್ (ರಷ್ಯಾ ಒಕ್ಕೂಟ) ಇವೆಲ್ಲವು ಜಗತ್ತಿನ ತೀರಾ ಹೆಚ್ಚೆಚ್ಚು ಜನಸಂಖ್ಯೆವುಳ್ಳ ಹತ್ತು ಬೃಹತ್ ರಾಷ್ಟ್ರಗಳೆನಿಸಿವೆಯೆಂದು ವಿಶ್ವಸಂಸ್ಥೆಯು ತೀರಾ ಕಳವಳ ವ್ಯಕ್ತಪಡಿಸಿ ಅಂಕಿ ಅಂಶಗಳನ್ನು ಕೂಡಾ ಬಿಡುಗಡೆ ಮಾಡಿರುವುದು.

ಇಡೀ ವಿಶ್ವದ ಒಟ್ಟು ಜನಸಂಖ್ಯೆಯು ೨೦೧೫ಕ್ಕೆ ೭೩೦ ಕೋಟಿ ಇರುವುದು. ಇದೇ ಜನಸಂಖ್ಯೆಯು ೨೦೩೦ಕ್ಕೆ ಒಂದು ಅಂದಾಜಿನ ಪ್ರಕಾರ ೮೫೦ ಕೋಟಿ ಬೆಳೆಯುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆಯೆಂದು ವಿಶ್ವಸಂಸ್ಥೆಯ ಅಧ್ಯಯನ ವರದಿಯು ಬಹಿರಂಗಗೊಳಿಸಿರುವುದು.

ಆದ್ದರಿಂದ ಪ್ರತಿ ಮನೆಮನೆಯಲ್ಲಿ, ಹಳ್ಳಿಹಳ್ಳಿಗಳಲ್ಲಿ, ಪಟ್ಟಣ ಪ್ರದೇಶಗಳಲ್ಲಿ ಒಂದು ಬೇಕು ಎರಡು ಮಕ್ಕಳು ಸಾಕು. ಹೆಣ್ಣಿರಲಿ ಗಂಡಿರಲಿ ಎರಡು ಮಕ್ಕಳಿರಲಿ ಎಂದು ಕಡ್ಡಾಯ ಮಾಡುವ ಕಾಯ್ದೆ ಕಾನೂನು ಕಟ್ಟುನಿಟ್ಟು ಮಾಡುವ ಎಲ್ಲಾ ಮನ ಒಲಿಸುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ನೀವು ಸಾಗೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...