Home / ಲೇಖನ / ಇತರೆ / ಜನಸಂಖ್ಯೆ ಕತೆ

ಜನಸಂಖ್ಯೆ ಕತೆ

ಭವ್ಯ ಭಾರತದ ಜನಸಂಖ್ಯೆಯೂ ಯಾರ ನಿಯಂತ್ರಣದಲ್ಲಿಲ್ಲ. ಬರೀ ಕಾಗದ ಪತ್ರ ಘೋಷಣೆಗಳನ್ನು ಬಿಟ್ಟರೆ, ಯಾವುದೇ ಒತ್ತಡ ಅರಿವು ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ನಮ್ಮಲ್ಲಿ ಇಲ್ಲ.

ಕ್ರಿಸ್ತ ಶಕ ದಿನಾಂಕ ೩೦-೧೨-೨೦೨೨ರ ವೇಳೆಗೆ ಭವ್ಯ ಭಾರತದ ಸಂಖ್ಯೆಯು ಚೀನಾ ದೇಶವನ್ನು ಹಿಂದಿಕ್ಕಿ ಭಾರೀ ಮೇಲುಗೈ ಸಾಧಿಸಲಿದೆಯೆಂದು ಇತ್ತೀಚೆಗೆ ೨೦೧೫ರ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದ ವಿಶ್ವಸಂಸ್ಥೆಯ “ವಿಶ್ವ ಜನಸಂಖ್ಯೆ ನಿರೀಕ್ಷೆಗಳು ೨೦೧೫ರ ಪರಿಷ್ಕರಣೆ” ಎಂಬ ಅಧ್ಯಯನ ವರದಿಯಲ್ಲಿ ವಿವರಿಸಿರುವುದು.

ವಿಶ್ವದಲ್ಲಿ ಸದ್ಯ ಚೀನಾ- ಭಾರತ ದೇಶಗಳು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಹುದೊಡ್ಡ ರಾಷ್ಟ್ರಗಳಾಗಿವೆ. ೨೦೨೨ರ ವೇಳೆಗೆ ಭಾರತವು ಚೀನಾ ದೇಶವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವೆಂದು ಗುರ್‍ತಿಸಿಕೊಳ್ಳಲಿದೆಯೆಂದೂ ಇಡೀ ವಿಶ್ವದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ೧೯% ರಷ್ಟು ಚೀನಾದ ಜನಸಂಖ್ಯೆ ಯಾಗಿದ್ದರೆ ಶೇಕಡಾ ೧೮% ರಷ್ಟು ಭವ್ಯ ಭಾರತದ್ದಾಗಿದೆಯೆಂದು ವಿಶ್ವಸಂಸ್ಥೆ ದಿನಾಂಕ ೦೬-೦೮-೨೦೧೫ರಂದು ಬಹಿರಂಗ ಪಡಿಸಿದೆ.

ನೈಜೀರಿಯಾ ಏಷ್ಯಾದ ಐದು ರಾಷ್ಟ್ರಗಳಾದ ಬಾಂಗ್ಲಾದೇಶ, ಚೀನಾ, ಭವ್ಯಭಾರತ, ಇಂಡೋನೇಷ್ಯಾ ಹಾಗೂ ಪಾಕಿಸ್ತಾನ, ಲ್ಯಾಟಿನ್ ಅಮೇರಿಕಾದ ಎರಡು ದೇಶಗಳಾದ ಬ್ರೆಜಿಲ್ ಮತ್ತು ಮೆಕ್ಸಿಕೊ, ಉತ್ತರ ಅಮೆರಿಕ ಹಾಗೂ ಯುರೋಫ್ (ರಷ್ಯಾ ಒಕ್ಕೂಟ) ಇವೆಲ್ಲವು ಜಗತ್ತಿನ ತೀರಾ ಹೆಚ್ಚೆಚ್ಚು ಜನಸಂಖ್ಯೆವುಳ್ಳ ಹತ್ತು ಬೃಹತ್ ರಾಷ್ಟ್ರಗಳೆನಿಸಿವೆಯೆಂದು ವಿಶ್ವಸಂಸ್ಥೆಯು ತೀರಾ ಕಳವಳ ವ್ಯಕ್ತಪಡಿಸಿ ಅಂಕಿ ಅಂಶಗಳನ್ನು ಕೂಡಾ ಬಿಡುಗಡೆ ಮಾಡಿರುವುದು.

ಇಡೀ ವಿಶ್ವದ ಒಟ್ಟು ಜನಸಂಖ್ಯೆಯು ೨೦೧೫ಕ್ಕೆ ೭೩೦ ಕೋಟಿ ಇರುವುದು. ಇದೇ ಜನಸಂಖ್ಯೆಯು ೨೦೩೦ಕ್ಕೆ ಒಂದು ಅಂದಾಜಿನ ಪ್ರಕಾರ ೮೫೦ ಕೋಟಿ ಬೆಳೆಯುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆಯೆಂದು ವಿಶ್ವಸಂಸ್ಥೆಯ ಅಧ್ಯಯನ ವರದಿಯು ಬಹಿರಂಗಗೊಳಿಸಿರುವುದು.

ಆದ್ದರಿಂದ ಪ್ರತಿ ಮನೆಮನೆಯಲ್ಲಿ, ಹಳ್ಳಿಹಳ್ಳಿಗಳಲ್ಲಿ, ಪಟ್ಟಣ ಪ್ರದೇಶಗಳಲ್ಲಿ ಒಂದು ಬೇಕು ಎರಡು ಮಕ್ಕಳು ಸಾಕು. ಹೆಣ್ಣಿರಲಿ ಗಂಡಿರಲಿ ಎರಡು ಮಕ್ಕಳಿರಲಿ ಎಂದು ಕಡ್ಡಾಯ ಮಾಡುವ ಕಾಯ್ದೆ ಕಾನೂನು ಕಟ್ಟುನಿಟ್ಟು ಮಾಡುವ ಎಲ್ಲಾ ಮನ ಒಲಿಸುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ನೀವು ಸಾಗೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...