ಆದಮನ ಶಾಪ

ಬೇಸಿಗೆ ಕೊನೆಯ ಒಂದು ಸಂಜೆ ಹೊತ್ತು :
ನಿನ್ನಾಪ್ತ ಗೆಳತಿ, ಆ ಚೆಲುವೆ ಕೋಮಲೆ, ನಾನು ನೀನು ಕೂತು
ಮಾತಾಡಿದೆವು ಕವಿತೆಯನ್ನು ಕುರಿತು
ನಾನೆಂದೆ : “ಕವಿತ ಸಾಲೊಂದನ್ನು ಸಾಧಿಸಲು
ಗಂಟೆಗಟ್ಟಲೆ ನಾವು ಹೆಣಗಬೇಕು;
ಆದರೂ ಆ ಸಾಲು ಅಲ್ಲೆ, ಆ ಗಳಿಗೆಯೇ
ಚಿಮ್ಮಿ ಬಂದದ್ದೆಂದು ಅನ್ನಿಸದೆ ಇದ್ದಲ್ಲಿ
ಹೊಲಿದು ಬಿಟ್ಟಿದ್ದೆಲ್ಲ ಪೂರ ವ್ಯರ್‍ಥ.
ಬೆನ್ನು ಬಗ್ಗಿಸಿ ಮಂಡಿಯೂರಿ ಕೊಳೆಯಡಿಗೆ ಮನೆ ನೆಲವನ್ನುಜ್ಜುವುದೊ,
ಕಡು ಭಿಕಾರಿಯ ಹಾಗೆ ಬಿಸಿಲು ಚಳಿ ಎನ್ನದೆ ಕಲ್ಲನ್ನೊಡೆಯುವುದೊ
ಇದಕ್ಕಿಂತ ಉತ್ತಮ
ಮಧುರ ನಾದಗಳ ಹದವಾಗಿ ಹೆಣೆಯುವ ಕೆಲಸ
ಎಲ್ಲಕ್ಕೂ ಕಷ್ಟ ಅಷ್ಟೆಲ್ಲ ಮಾಡಿಯೂ ಕೂಡ
ಶಾಲೆ ಮತ ಬ್ಯಾಂಕುಗಳ ಗೊಂದಲದ ಮಂದಿಗೆ
ನಾವು ಕವಿಗಳು ಶುದ್ಧ ಕೆಲಸಗೇಡಿಗಳು”

ನಿನ್ನ ಪ್ರಿಯಗೆಳತಿ ಆ ಚೆಲುವೆ – ಎಂಥ ಪ್ರಶಾಂತೆ,
ಏನು ಸವಿ ಅವಳದನಿ, ಎಷ್ಟು ಮಿದು, ಅದಕಾಗಿ
ಏನೆಲ್ಲ ಹೃದಯವ್ಯಥೆ ಸಹಿಸಲೂ ಸಿದ್ದರು ಎಂಥೆಂಥ ಜನರೂ –
ಹೇಳಿದಳು : “ಕಲಿಸದಿದ್ದರು ಕೂಡ ಯಾವ ಸ್ಕೂಲೂ ಎಲ್ಲೂ,
ಹೆಣ್ಣು ಜೀವಕ್ಕೆಲ್ಲ ಗೊತ್ತಿರುವ ಗುಟ್ಟು ಇದು, ಚೆಲುವೆಯಾಗಿರಲು
ಶ್ರಮಿಸಬೇಕು ಸದಾ”. ನಾನಂದೆ : “ಹೌದು, ನಿಜ
ಆದಮನ ಪತನವಾದಂದಿನಿಂದ
ಕಷ್ಟಪಡದೇ ಗಳಿಸಬಲ್ಲ ಸುಂದರವಸ್ತು ಏನೊಂದೂ ಇಲ್ಲ.
ಪ್ರೇಮವೆಂದರೆ ತೀರ ಸೂಕ್ಷ್ಮ ಸೌಜನ್ಯಗಳ
ಪರಿಪಾಕವೆಂದೆ ಗ್ರಹಿಸಿದ್ದ ಪ್ರೇಮಿಗಳು ಇದ್ದರೆಷ್ಟೋ.
ನಿಟ್ಟುಸಿರ ಚೆಲ್ಲುತ್ತ, ಜ್ಞಾನ ತುಂಬಿದ ದೃಷ್ಟಿ ಹರಿಸಿ ಉದ್ಗರಿಸುತ್ತ.
ಪ್ರಾಚೀನ ಸುಂದರ ಕೃತಿಗಳಿಂದಾಯ್ದ ಸಂಗತಿಯ ಉದ್ದರಿಸುತ್ತ
ತೋಡಿಕೊಳ್ಳುತ್ತಿದ್ದರವರ ಅನುರಾಗ,
ವ್ಯರ್‍ಥವೆನಿಸುತ್ತದೆ ಅಂಥ ಉದ್ಯಮ ಈಗ.”

ಪ್ರೇಮವೆಂದದ್ದೆ ತಡ, ಮೌನ ನೆಲೆಸಿತು ಸುತ್ತ
ಹಗಲ ಬೆಳಕಿನ ಕಡೆಯ ಕಿಡಿಗಳೂ ಆರುತ್ತ
ಪಚ್ಚಿನೀಲಿಗಳು ಕಂಪಿಸುವ ನಭದೆದೆಯಲ್ಲಿ ಕಂಡ ಚಿತ್ರ :
ಅಲೆಯೆದ್ದು ಬಿದ್ದು ಸಾಗುತ್ತಿರುವ ಕಾಲಜಲ
ದಿನ ವತ್ಸರಗಳಾಗಿ ಒಡೆಯುತ್ತ, ಕಡೆಯುತ್ತ,
ಚಿಕ್ಕೆಗಳ ನಡುವೆ ತಳದಲ್ಲೆಲ್ಲೊ ತೊಳೆಯುತ್ತ
ಸವೆದಿದ್ದ ಚಿಪ್ಪಿನಂತಿದ್ದ ಚಂದ್ರ.
ನಿನ್ನ ಕಿವಿಯೊಳಗಷ್ಟೆ ಉಸಿರಬಹುದಾದೊಂದು ವಿಚಾರ ಬಂತು
ನೀ ಚೆಲುವೆಯಾಗಿದ್ದೆ,
ಹಿಂದಿನವರು ಪ್ರೇಮದ ಉಚ್ಚ ನೆಲೆಯಲ್ಲಿ
ನಿನ್ನನ್ನೊಲಿಸಲು ನಾನು ಹೆಣಗಿದ್ದೆ, ಆಗೆಲ್ಲ
ಸುಖವಾಗಿಯೇ ಇತ್ತು. ಆದರೆ ಈಗ
ಅನಿಸುವುದು ನಮ್ಮ ಎದೆ ಬಳಲಿದಂತೆ
ಸಮೆದು ತೆಳುವಾದ ಆ ಚಂದ್ರನಂತೆ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಏಟ್ಸನ ಆವರೆಗಿನ ಕವನಗಳಲ್ಲೆಲ್ಲ ಮುಖ್ಯವಾದದ್ದು ಎಲಿಯಟ್ ಇದನ್ನು ಮೆಚ್ಚಿ ಮಾತಾಡಿದ್ದಾನೆ.

ದೇವರು ತನ್ನ ಅಪ್ಪಣೆಗೆ ವಿರುದ್ಧವಾಗಿ ನಡೆದ ಆದಮನನ್ನು ಈಡನ್ ತೋಟದಿಂದ ಹೊರಕಳಿಸಿದ. ಮುಂದೆ ಶ್ರಮದ ದುಡಿಮೆಯಿಂದ ಜೀವಿಸುವಂತೆ ಶಾಪವಿತ್ತ.

ಕವನದಲ್ಲಿ ಕವಿಯ ಜೊತೆ ಮಾತಿಗೆ ಕುಳಿತಿರುವವರು ಮಾಡಗಾನ್ ಮತ್ತು ಅವಳ ತಂಗಿ ಕ್ಯಾಥಲೀನ್.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಫುಢಾರಿ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೪೬

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

cheap jordans|wholesale air max|wholesale jordans|wholesale jewelry|wholesale jerseys