Home / ಕವನ / ಕವಿತೆ / ಮಹಾತ್ಮರ ಉಪವಾಸ

ಮಹಾತ್ಮರ ಉಪವಾಸ

[ರಕ್ತಾಕ್ಷಿ ಸಂ| ದ ಭಾದ್ರಪದ ಬ|೫ (೧೪-೯-೧೯೨೪)ಯಿಂದ ಆಶ್ವೀಜ ಶು।೧೧ (೮—೧೦-೧೯೨೪) ಯ ವರೆಗೆ ಮಹಾತ್ಮಾ ಗಾಂಧಿಯವರು ಧಿಲ್ಲಿಯಲ್ಲಿ ಮಾಡಿದ ೨೧ ದಿನಗಳ ಉಪವಾಸ]

ಮಂಜಿನೇಕಾಂತದಲಿ ಶ್ರೀಹರಿಯ ಹಂಬಲಿಸಿ,
ಹೃದಯ ಕ್ಷುಧಯನ್ನೂಡುತೊಡಲ ಹಸಿವಿಂದಂ,
ಮನದ ರಂಭೆಯ ಗೆದ್ದು ೧ಶುಕನಾತನನ್ನೊಲಿಸಿ,
ಭಕ್ತಿಗಂಗೆಯ ಭಾರತದ ತೃಷೆಗೆ ತಂದಂ ೪

೨ಉರುವೇಲೆಯರಳಿಯಡಿಯಲಿ ಚಿರಂ ಹಸಿದರೆದು,
ಮಾರನಂ ಮುರಿದು ಸಂಬುದ್ಧನೆಮಗಗ್ಗಂ
ನಿಬ್ಬಾಣಮೊಂದೆ, ೩ತಣ್ಹೆರಣ್ಯಮಂ ತರಿದು,
ತೋರ್ದನರಿಯಟ್ಟಂಗಿಕದ ಧಮ್ಮಮಗ್ಗಂ೪ ೮

ಕಟ್ಟಳಯೆ ಕುರುಡಿನಲಿ ಬೆಳಕಿನೊಡೆಯನ ಸೋಸು
ವೆಮ್ಮೆದೆಯ ಪರೆಯ ಹೆರೆದೆಮ್ಮೊಳಗೆ ನಿಸದಂ
ನೆಲಸಿರುವ ೫ಸ್ವಾರಾಜ್ಯವೆಮಗೆ ತೋರಿಸೆ ಯೇಸು
೬ಯೋರ್ದನಿನ ಬನದಿ ನಲವತ್ತು ದಿನ ಹಸಿದಂ ೧೨

ಅರಬರೆದೆಯರಬಿಂದ೮ ನೊಂದು, ನವಜೀವನವ
ನುಪವಾಸದಿಂದರಸಿ ೯ಹಿರೆಯ ಕಂದರಿಯಿಂ
ದೇವರಲ್ಲದೆ ದೇವರಿಲ್ಲೆಮ್ಮ ಕಾವನವ
ನೆಂಬ ಸತ್ಯದಿ ಕಂಡನದನರಬರೆರೆಯಂ. ೧೬

ಗುರುವೆ ಇಪ್ಪತ್ತೊಂದು ದಿನದುಪೋಷ್ಯವ ನೋಂತು
ಧಿಲ್ಲಿಯಿಂ ನೀ ಚೆಲ್ಲಿದೀ ಪ್ರೇಮ ಬೀಜಂ
ಭಾರತದ ಭಾಗ್ಯಲತೆಯಾಗಿ ಮಡಲಿಡದೆಂತು?
ಬೆಳಸದೆಂತಮರ ಸೌದರ್ಯನಿದು ಸಾಜಂ? ೨೦
*****

೧ ಪರಿಕ್ಷಿದ್ರಾಯನಿಗೆ ಶ್ರೀಮದ್ಭಾಗವತವನ್ನು ಹೇಳುವ ದ್ವಾರಾ ಶುಕಯೋಗಿ ಭಕ್ತಿಮಾರ್ಗವನ್ನು
ಬೋಧಿಸಿದನು
೨ ಬುದ್ದಗಯೆಯ ಸಮೀಪದಲ್ಲಿರುವ ವನ
೩ ತೃಷ್ಣೆ, ವಿಷಯ ಲಾಲಸೆ
೪ ಅರಿಯೋ ಅಟ್ಟಿಂಗಿಕೋ ಧಮ್ಮ ಮಗ್ಗೊ – The noble eightfold path.
೫ ಸ್ವರ್ಗದ ರಾಜ್ಯ
೬ ಝರೋಸಲೇಮಿನ ಬಳಿಯ ಒಂದು ಹೊಳೆ
೮ ಅರಬು=ಶುಷ್ಕತೆ, ಅಜ್ಞಾನ
೯ ಮಕ್ಕದ ಸಮೀಪದಲ್ಲಿರುವ ‘ಹಿರಾ’ ಎಂಬ ಗುಡ್ಡದ ಗುಹೆಯಲ್ಲಿ ಮಹಮ್ಮದನು ಧ್ಯಾನಿಸುತ್ತಿದ್ದನು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...