Home / ಕವನ / ಕವಿತೆ / ತೌಳವ ಮಾತೆ

ತೌಳವ ಮಾತೆ

ರಾಗ ಭೈರವೀ-ತ್ರಿತಾಲ
(‘ಪತಿತೋದ್ಧಾರಿಣಿ ಗಂಗೇ’ ಎಂಬ ಬಂಗಾಳೀ ಹಾಡಿನಂತೆ)

ಜಯ ಜಯ ತೌಳವ ತಾಯ ||ಪಲ್ಲ||
ಮಣಿವೆ ತಂದೆತಾಯಂದಿರ ತಾಯೇ,
ಭುವನದಿ ತ್ರಿದಿವಚ್ಛಾಯೇ ||ಅನು||
ಭಾರ್ಗವನಂದು ಬಿಸುಡೆ ಕೊಡಲಿಯ ನೀ ಕಡಲೊಡೆದೆಡೆಯಿಂ ಮೂಡಿ,

ಭಾರತಮಾತೆ ತೊಡೆಯೊಳೊಡಗೂಡಿಸೆ, ಸಹ್ಯವೀಣೆಯಂ ತೀಡಿ-
ದೆಸೆದೆಸೆ ರವಿಶಶಿ ಕಿರಣದ ಮಳೆಕುಳಿರಿನ ಮಿಸುಸೇಸೆಯ ಸೂಸೆ-
ನವನವ ರಿತುಗಾನವನವತರಿಸುವೆ, ಗಗನವನಧಿಯೋಲೈಸೆ ||೧||

ಸಾತಿಯಪುತರ ತವರ್ಮನೆ, 1ಸಾತರ ತೆಂಕಣ ನೆಲೆಮನೆಯ ಲೂಪರಾ
ಕೆಳಮನೆ, ಪಾಂಡ್ಯರ ಮೇಲ್ಮನೆ, ನೆರೆಯರಮನೆ ಕನ್ನಾಡಿನ ಭೂಪರಾ;
ಭೈರವ ಬಂಗರ ಚೌಟರಜಿಲ ಸಾವಂತರ ಮನೆಮನೆಯಿಂಬೇ,
ತುಳುವರ ತಾಯ್ಮನೆಯುಳಿದರ ಕಾಯ್ಮನೆ – ನೀನೆಮ್ಮಯ ಮನೆಯಂಬೇ ||೨||

ದೇಗುಲಗಳೊ ಧರ್ಮದ ಬಾಗಿಲಗಳೊ? ಪುಣ್ಯಘಟಂ ತಟಿನೀತಟಂ!
ಬಸದಿಗಳೋ ಕನಸೇ ಕಲ್ಲಾದುವೋ? ನೆಲಬಿರಿದೆದ್ದರೆ ಗೊಮ್ಮಟಂ?
ನಿನ್ನ ಪುಲಕವೇ ಪಸುರಿದಂತೆ ಪಸರಿಸಿದೀ ಸಸ್ಯದ ಚೆಲುವೇಂ!
ಜೀವನಸಾಮವನಾಡುನ ಪಾಡುವ ಖಗಮೃಗಪತಂಗದೊಲನೇಂ ||೩||

ಹಿಂದು ಜೈನ ಮಸ್ಲೀಮ ಕೈಸ್ತ್ರರಾವೊಂದೇ ಬಾಂಧವರೆಮ್ಮಾ
ತಂದೆ ದೇವರೊಬ್ಬನೆ, ನೀನೊಬ್ಬಳೆ ನಮ್ಮೆಲ್ಲರ ತಾಯಮ್ಮಾ!
ಎಂದಿನವಳೊ ನೀನಿಂದಿನವರೆ ನಾವಾದೊಡೆಮ್ಮನಕ್ಕರೆಯಿಂ
ನಿನ್ನೆದೆ ತೊಟ್ಟಿಲೊಳಿಟ್ಟು ಸಾಕುತಿಹೆ, ಸರಸಿಯಂತೆ ತಾವರೆಯೆಂ ||೪||

ಧನ್ಯನೆನಿತೊ ನಾ ನಿನ್ನಯ ಬಸುರಿಂದುಸುರಿಸಲೀ ಹೂವನ್ನ!
ಕೆಸರೊಳುದುರಲೀಯದೆ, ನಿನ್ನಡಿಗರ್ಪಿಸಿಕೊಳು ಸೌಸವವನ್ನ!
ಬೇಡುವೆನವ್ವಾ, ಬೀಳ್ಕೊಡುವಂದೆನ್ನನೆತ್ತಿದಂಕದಿ ನಿನ್ನ,
‘ಮರಳಿ ಬಾರ, ಕಂದಾ, ನನ್ನುದರದಿ’ ಎಂದು ತಬ್ಬಿ ಹರಸೆನ್ನ! ||೫||
*****
೧ ಸಾತವಾಹನರು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...