Home / ಕವನ / ಕವಿತೆ / ತೌಳವ ಮಾತೆ

ತೌಳವ ಮಾತೆ

ರಾಗ ಭೈರವೀ-ತ್ರಿತಾಲ
(‘ಪತಿತೋದ್ಧಾರಿಣಿ ಗಂಗೇ’ ಎಂಬ ಬಂಗಾಳೀ ಹಾಡಿನಂತೆ)

ಜಯ ಜಯ ತೌಳವ ತಾಯ ||ಪಲ್ಲ||
ಮಣಿವೆ ತಂದೆತಾಯಂದಿರ ತಾಯೇ,
ಭುವನದಿ ತ್ರಿದಿವಚ್ಛಾಯೇ ||ಅನು||
ಭಾರ್ಗವನಂದು ಬಿಸುಡೆ ಕೊಡಲಿಯ ನೀ ಕಡಲೊಡೆದೆಡೆಯಿಂ ಮೂಡಿ,

ಭಾರತಮಾತೆ ತೊಡೆಯೊಳೊಡಗೂಡಿಸೆ, ಸಹ್ಯವೀಣೆಯಂ ತೀಡಿ-
ದೆಸೆದೆಸೆ ರವಿಶಶಿ ಕಿರಣದ ಮಳೆಕುಳಿರಿನ ಮಿಸುಸೇಸೆಯ ಸೂಸೆ-
ನವನವ ರಿತುಗಾನವನವತರಿಸುವೆ, ಗಗನವನಧಿಯೋಲೈಸೆ ||೧||

ಸಾತಿಯಪುತರ ತವರ್ಮನೆ, 1ಸಾತರ ತೆಂಕಣ ನೆಲೆಮನೆಯ ಲೂಪರಾ
ಕೆಳಮನೆ, ಪಾಂಡ್ಯರ ಮೇಲ್ಮನೆ, ನೆರೆಯರಮನೆ ಕನ್ನಾಡಿನ ಭೂಪರಾ;
ಭೈರವ ಬಂಗರ ಚೌಟರಜಿಲ ಸಾವಂತರ ಮನೆಮನೆಯಿಂಬೇ,
ತುಳುವರ ತಾಯ್ಮನೆಯುಳಿದರ ಕಾಯ್ಮನೆ – ನೀನೆಮ್ಮಯ ಮನೆಯಂಬೇ ||೨||

ದೇಗುಲಗಳೊ ಧರ್ಮದ ಬಾಗಿಲಗಳೊ? ಪುಣ್ಯಘಟಂ ತಟಿನೀತಟಂ!
ಬಸದಿಗಳೋ ಕನಸೇ ಕಲ್ಲಾದುವೋ? ನೆಲಬಿರಿದೆದ್ದರೆ ಗೊಮ್ಮಟಂ?
ನಿನ್ನ ಪುಲಕವೇ ಪಸುರಿದಂತೆ ಪಸರಿಸಿದೀ ಸಸ್ಯದ ಚೆಲುವೇಂ!
ಜೀವನಸಾಮವನಾಡುನ ಪಾಡುವ ಖಗಮೃಗಪತಂಗದೊಲನೇಂ ||೩||

ಹಿಂದು ಜೈನ ಮಸ್ಲೀಮ ಕೈಸ್ತ್ರರಾವೊಂದೇ ಬಾಂಧವರೆಮ್ಮಾ
ತಂದೆ ದೇವರೊಬ್ಬನೆ, ನೀನೊಬ್ಬಳೆ ನಮ್ಮೆಲ್ಲರ ತಾಯಮ್ಮಾ!
ಎಂದಿನವಳೊ ನೀನಿಂದಿನವರೆ ನಾವಾದೊಡೆಮ್ಮನಕ್ಕರೆಯಿಂ
ನಿನ್ನೆದೆ ತೊಟ್ಟಿಲೊಳಿಟ್ಟು ಸಾಕುತಿಹೆ, ಸರಸಿಯಂತೆ ತಾವರೆಯೆಂ ||೪||

ಧನ್ಯನೆನಿತೊ ನಾ ನಿನ್ನಯ ಬಸುರಿಂದುಸುರಿಸಲೀ ಹೂವನ್ನ!
ಕೆಸರೊಳುದುರಲೀಯದೆ, ನಿನ್ನಡಿಗರ್ಪಿಸಿಕೊಳು ಸೌಸವವನ್ನ!
ಬೇಡುವೆನವ್ವಾ, ಬೀಳ್ಕೊಡುವಂದೆನ್ನನೆತ್ತಿದಂಕದಿ ನಿನ್ನ,
‘ಮರಳಿ ಬಾರ, ಕಂದಾ, ನನ್ನುದರದಿ’ ಎಂದು ತಬ್ಬಿ ಹರಸೆನ್ನ! ||೫||
*****
೧ ಸಾತವಾಹನರು

Tagged:

Leave a Reply

Your email address will not be published. Required fields are marked *

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...