Home / ಕವನ / ಕವಿತೆ / ತೌಳವ ಮಾತೆ

ತೌಳವ ಮಾತೆ

ರಾಗ ಭೈರವೀ-ತ್ರಿತಾಲ
(‘ಪತಿತೋದ್ಧಾರಿಣಿ ಗಂಗೇ’ ಎಂಬ ಬಂಗಾಳೀ ಹಾಡಿನಂತೆ)

ಜಯ ಜಯ ತೌಳವ ತಾಯ ||ಪಲ್ಲ||
ಮಣಿವೆ ತಂದೆತಾಯಂದಿರ ತಾಯೇ,
ಭುವನದಿ ತ್ರಿದಿವಚ್ಛಾಯೇ ||ಅನು||
ಭಾರ್ಗವನಂದು ಬಿಸುಡೆ ಕೊಡಲಿಯ ನೀ ಕಡಲೊಡೆದೆಡೆಯಿಂ ಮೂಡಿ,

ಭಾರತಮಾತೆ ತೊಡೆಯೊಳೊಡಗೂಡಿಸೆ, ಸಹ್ಯವೀಣೆಯಂ ತೀಡಿ-
ದೆಸೆದೆಸೆ ರವಿಶಶಿ ಕಿರಣದ ಮಳೆಕುಳಿರಿನ ಮಿಸುಸೇಸೆಯ ಸೂಸೆ-
ನವನವ ರಿತುಗಾನವನವತರಿಸುವೆ, ಗಗನವನಧಿಯೋಲೈಸೆ ||೧||

ಸಾತಿಯಪುತರ ತವರ್ಮನೆ, 1ಸಾತರ ತೆಂಕಣ ನೆಲೆಮನೆಯ ಲೂಪರಾ
ಕೆಳಮನೆ, ಪಾಂಡ್ಯರ ಮೇಲ್ಮನೆ, ನೆರೆಯರಮನೆ ಕನ್ನಾಡಿನ ಭೂಪರಾ;
ಭೈರವ ಬಂಗರ ಚೌಟರಜಿಲ ಸಾವಂತರ ಮನೆಮನೆಯಿಂಬೇ,
ತುಳುವರ ತಾಯ್ಮನೆಯುಳಿದರ ಕಾಯ್ಮನೆ – ನೀನೆಮ್ಮಯ ಮನೆಯಂಬೇ ||೨||

ದೇಗುಲಗಳೊ ಧರ್ಮದ ಬಾಗಿಲಗಳೊ? ಪುಣ್ಯಘಟಂ ತಟಿನೀತಟಂ!
ಬಸದಿಗಳೋ ಕನಸೇ ಕಲ್ಲಾದುವೋ? ನೆಲಬಿರಿದೆದ್ದರೆ ಗೊಮ್ಮಟಂ?
ನಿನ್ನ ಪುಲಕವೇ ಪಸುರಿದಂತೆ ಪಸರಿಸಿದೀ ಸಸ್ಯದ ಚೆಲುವೇಂ!
ಜೀವನಸಾಮವನಾಡುನ ಪಾಡುವ ಖಗಮೃಗಪತಂಗದೊಲನೇಂ ||೩||

ಹಿಂದು ಜೈನ ಮಸ್ಲೀಮ ಕೈಸ್ತ್ರರಾವೊಂದೇ ಬಾಂಧವರೆಮ್ಮಾ
ತಂದೆ ದೇವರೊಬ್ಬನೆ, ನೀನೊಬ್ಬಳೆ ನಮ್ಮೆಲ್ಲರ ತಾಯಮ್ಮಾ!
ಎಂದಿನವಳೊ ನೀನಿಂದಿನವರೆ ನಾವಾದೊಡೆಮ್ಮನಕ್ಕರೆಯಿಂ
ನಿನ್ನೆದೆ ತೊಟ್ಟಿಲೊಳಿಟ್ಟು ಸಾಕುತಿಹೆ, ಸರಸಿಯಂತೆ ತಾವರೆಯೆಂ ||೪||

ಧನ್ಯನೆನಿತೊ ನಾ ನಿನ್ನಯ ಬಸುರಿಂದುಸುರಿಸಲೀ ಹೂವನ್ನ!
ಕೆಸರೊಳುದುರಲೀಯದೆ, ನಿನ್ನಡಿಗರ್ಪಿಸಿಕೊಳು ಸೌಸವವನ್ನ!
ಬೇಡುವೆನವ್ವಾ, ಬೀಳ್ಕೊಡುವಂದೆನ್ನನೆತ್ತಿದಂಕದಿ ನಿನ್ನ,
‘ಮರಳಿ ಬಾರ, ಕಂದಾ, ನನ್ನುದರದಿ’ ಎಂದು ತಬ್ಬಿ ಹರಸೆನ್ನ! ||೫||
*****
೧ ಸಾತವಾಹನರು

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...