Home / ಕವನ / ಕವಿತೆ / ತೌಳವ ಮಾತೆ

ತೌಳವ ಮಾತೆ

ರಾಗ ಭೈರವೀ-ತ್ರಿತಾಲ
(‘ಪತಿತೋದ್ಧಾರಿಣಿ ಗಂಗೇ’ ಎಂಬ ಬಂಗಾಳೀ ಹಾಡಿನಂತೆ)

ಜಯ ಜಯ ತೌಳವ ತಾಯ ||ಪಲ್ಲ||
ಮಣಿವೆ ತಂದೆತಾಯಂದಿರ ತಾಯೇ,
ಭುವನದಿ ತ್ರಿದಿವಚ್ಛಾಯೇ ||ಅನು||
ಭಾರ್ಗವನಂದು ಬಿಸುಡೆ ಕೊಡಲಿಯ ನೀ ಕಡಲೊಡೆದೆಡೆಯಿಂ ಮೂಡಿ,

ಭಾರತಮಾತೆ ತೊಡೆಯೊಳೊಡಗೂಡಿಸೆ, ಸಹ್ಯವೀಣೆಯಂ ತೀಡಿ-
ದೆಸೆದೆಸೆ ರವಿಶಶಿ ಕಿರಣದ ಮಳೆಕುಳಿರಿನ ಮಿಸುಸೇಸೆಯ ಸೂಸೆ-
ನವನವ ರಿತುಗಾನವನವತರಿಸುವೆ, ಗಗನವನಧಿಯೋಲೈಸೆ ||೧||

ಸಾತಿಯಪುತರ ತವರ್ಮನೆ, 1ಸಾತರ ತೆಂಕಣ ನೆಲೆಮನೆಯ ಲೂಪರಾ
ಕೆಳಮನೆ, ಪಾಂಡ್ಯರ ಮೇಲ್ಮನೆ, ನೆರೆಯರಮನೆ ಕನ್ನಾಡಿನ ಭೂಪರಾ;
ಭೈರವ ಬಂಗರ ಚೌಟರಜಿಲ ಸಾವಂತರ ಮನೆಮನೆಯಿಂಬೇ,
ತುಳುವರ ತಾಯ್ಮನೆಯುಳಿದರ ಕಾಯ್ಮನೆ – ನೀನೆಮ್ಮಯ ಮನೆಯಂಬೇ ||೨||

ದೇಗುಲಗಳೊ ಧರ್ಮದ ಬಾಗಿಲಗಳೊ? ಪುಣ್ಯಘಟಂ ತಟಿನೀತಟಂ!
ಬಸದಿಗಳೋ ಕನಸೇ ಕಲ್ಲಾದುವೋ? ನೆಲಬಿರಿದೆದ್ದರೆ ಗೊಮ್ಮಟಂ?
ನಿನ್ನ ಪುಲಕವೇ ಪಸುರಿದಂತೆ ಪಸರಿಸಿದೀ ಸಸ್ಯದ ಚೆಲುವೇಂ!
ಜೀವನಸಾಮವನಾಡುನ ಪಾಡುವ ಖಗಮೃಗಪತಂಗದೊಲನೇಂ ||೩||

ಹಿಂದು ಜೈನ ಮಸ್ಲೀಮ ಕೈಸ್ತ್ರರಾವೊಂದೇ ಬಾಂಧವರೆಮ್ಮಾ
ತಂದೆ ದೇವರೊಬ್ಬನೆ, ನೀನೊಬ್ಬಳೆ ನಮ್ಮೆಲ್ಲರ ತಾಯಮ್ಮಾ!
ಎಂದಿನವಳೊ ನೀನಿಂದಿನವರೆ ನಾವಾದೊಡೆಮ್ಮನಕ್ಕರೆಯಿಂ
ನಿನ್ನೆದೆ ತೊಟ್ಟಿಲೊಳಿಟ್ಟು ಸಾಕುತಿಹೆ, ಸರಸಿಯಂತೆ ತಾವರೆಯೆಂ ||೪||

ಧನ್ಯನೆನಿತೊ ನಾ ನಿನ್ನಯ ಬಸುರಿಂದುಸುರಿಸಲೀ ಹೂವನ್ನ!
ಕೆಸರೊಳುದುರಲೀಯದೆ, ನಿನ್ನಡಿಗರ್ಪಿಸಿಕೊಳು ಸೌಸವವನ್ನ!
ಬೇಡುವೆನವ್ವಾ, ಬೀಳ್ಕೊಡುವಂದೆನ್ನನೆತ್ತಿದಂಕದಿ ನಿನ್ನ,
‘ಮರಳಿ ಬಾರ, ಕಂದಾ, ನನ್ನುದರದಿ’ ಎಂದು ತಬ್ಬಿ ಹರಸೆನ್ನ! ||೫||
*****
೧ ಸಾತವಾಹನರು

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...