ತೌಳವ ಮಾತೆ

ರಾಗ ಭೈರವೀ-ತ್ರಿತಾಲ
(‘ಪತಿತೋದ್ಧಾರಿಣಿ ಗಂಗೇ’ ಎಂಬ ಬಂಗಾಳೀ ಹಾಡಿನಂತೆ)

ಜಯ ಜಯ ತೌಳವ ತಾಯ ||ಪಲ್ಲ||
ಮಣಿವೆ ತಂದೆತಾಯಂದಿರ ತಾಯೇ,
ಭುವನದಿ ತ್ರಿದಿವಚ್ಛಾಯೇ ||ಅನು||
ಭಾರ್ಗವನಂದು ಬಿಸುಡೆ ಕೊಡಲಿಯ ನೀ ಕಡಲೊಡೆದೆಡೆಯಿಂ ಮೂಡಿ,

ಭಾರತಮಾತೆ ತೊಡೆಯೊಳೊಡಗೂಡಿಸೆ, ಸಹ್ಯವೀಣೆಯಂ ತೀಡಿ-
ದೆಸೆದೆಸೆ ರವಿಶಶಿ ಕಿರಣದ ಮಳೆಕುಳಿರಿನ ಮಿಸುಸೇಸೆಯ ಸೂಸೆ-
ನವನವ ರಿತುಗಾನವನವತರಿಸುವೆ, ಗಗನವನಧಿಯೋಲೈಸೆ ||೧||

ಸಾತಿಯಪುತರ ತವರ್ಮನೆ, 1ಸಾತರ ತೆಂಕಣ ನೆಲೆಮನೆಯ ಲೂಪರಾ
ಕೆಳಮನೆ, ಪಾಂಡ್ಯರ ಮೇಲ್ಮನೆ, ನೆರೆಯರಮನೆ ಕನ್ನಾಡಿನ ಭೂಪರಾ;
ಭೈರವ ಬಂಗರ ಚೌಟರಜಿಲ ಸಾವಂತರ ಮನೆಮನೆಯಿಂಬೇ,
ತುಳುವರ ತಾಯ್ಮನೆಯುಳಿದರ ಕಾಯ್ಮನೆ – ನೀನೆಮ್ಮಯ ಮನೆಯಂಬೇ ||೨||

ದೇಗುಲಗಳೊ ಧರ್ಮದ ಬಾಗಿಲಗಳೊ? ಪುಣ್ಯಘಟಂ ತಟಿನೀತಟಂ!
ಬಸದಿಗಳೋ ಕನಸೇ ಕಲ್ಲಾದುವೋ? ನೆಲಬಿರಿದೆದ್ದರೆ ಗೊಮ್ಮಟಂ?
ನಿನ್ನ ಪುಲಕವೇ ಪಸುರಿದಂತೆ ಪಸರಿಸಿದೀ ಸಸ್ಯದ ಚೆಲುವೇಂ!
ಜೀವನಸಾಮವನಾಡುನ ಪಾಡುವ ಖಗಮೃಗಪತಂಗದೊಲನೇಂ ||೩||

ಹಿಂದು ಜೈನ ಮಸ್ಲೀಮ ಕೈಸ್ತ್ರರಾವೊಂದೇ ಬಾಂಧವರೆಮ್ಮಾ
ತಂದೆ ದೇವರೊಬ್ಬನೆ, ನೀನೊಬ್ಬಳೆ ನಮ್ಮೆಲ್ಲರ ತಾಯಮ್ಮಾ!
ಎಂದಿನವಳೊ ನೀನಿಂದಿನವರೆ ನಾವಾದೊಡೆಮ್ಮನಕ್ಕರೆಯಿಂ
ನಿನ್ನೆದೆ ತೊಟ್ಟಿಲೊಳಿಟ್ಟು ಸಾಕುತಿಹೆ, ಸರಸಿಯಂತೆ ತಾವರೆಯೆಂ ||೪||

ಧನ್ಯನೆನಿತೊ ನಾ ನಿನ್ನಯ ಬಸುರಿಂದುಸುರಿಸಲೀ ಹೂವನ್ನ!
ಕೆಸರೊಳುದುರಲೀಯದೆ, ನಿನ್ನಡಿಗರ್ಪಿಸಿಕೊಳು ಸೌಸವವನ್ನ!
ಬೇಡುವೆನವ್ವಾ, ಬೀಳ್ಕೊಡುವಂದೆನ್ನನೆತ್ತಿದಂಕದಿ ನಿನ್ನ,
‘ಮರಳಿ ಬಾರ, ಕಂದಾ, ನನ್ನುದರದಿ’ ಎಂದು ತಬ್ಬಿ ಹರಸೆನ್ನ! ||೫||
*****
೧ ಸಾತವಾಹನರು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾದಿದೆ ಬಹುಮಾನ
Next post ಜನಸಂಖ್ಯೆ ಕತೆ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys