Home / ಕವನ / ಕವಿತೆ / ಯುಗಾದಿಯ ನೆನಪು

ಯುಗಾದಿಯ ನೆನಪು

ನಿನ್ನೆ ಹೆಸರಳಿದು ನೀರಾದುದಾ ಪ್ರಭವಂ
ಜೀವನಪ್ಲವಮೆನ್ನ ಸಂಪ್ಲವಿಸಿ ನಿನ್ನ!
ಇಂದೆನ್ನನೀಚಿಸುವ ವೀಚಿಯೂ ವಿಭವಂ
ಸಾರ್ಥಮಕ್ಕೆಮ ವಿಯೋಗಿಸಿ ಭವದಿನೆನ್ನ ೪

ಆ ಯುಗಾದಿಯಲಿ ನೀನೆನ್ನ ಕಣ್ತಣಿಮೆ-
ಈ ಯುಗಾದಿಯಲಿ ನೀನೆಲ್ಲಿ? ನಾನೆಲ್ಲಿ?
ನನ್ನೆದೆಯಮಾಸೆಗಿನ್ನಶ್ರು ತರ್ಪಣಮೆ-
ಹಬ್ಬಮಿನ್ನೆನಗೆ ನಿನ್ನೊಡಗೂಡುವಲ್ಲಿ! ೮

ಕೊನೆಯ ತವರ್ಮನೆಗಕಟ! ನೀ ತೆರಳುವಂದು
ತಿಂಗಳಾರರ ಮುನ್ನಮುಟ್ಟ ಮಡಿಸೀರೆ
ಕಡೆಗಾಯ್ತೆ? ಇನ್ನುಡೆಯನೆಂತೀವೆನೆಂದು
ನೆನವ ನೂಲಂ ಮೀಸಲಿಡುವೆನಿದೊ ನೀರೆ! ೧೨

ಸರ್ವಮಂಗಲೆ! ಸರ್ವಶೃಂಗಾರವೆತ್ತು-
ಕೆಚ್ಚೆರಂಕದಿನೆನ್ನ ಹಚ್ಚಿ ಕುಂಕುಮಮಂ,
ನೆನವ ಬಾಗಿನವನೆನಗನುವಿಂದ ತೆತ್ತು,
ಮುಡಿದು ಮುಡಿಗೆನ್ನ ಸುರಿಕಂಬನಿಯ ಸುಮಮಂ- ೧೬

ಮದವಳಿಗೆ ಲಗ್ನವೇದಿಕೆಯಂತೆ, ಚಿತಿಯ
ಪೊಗುತಗ್ನಿಯಂ ಮನ್ಮನೋರಣಿಯಿನಾಂತು,
ನಮ್ಮೇಕ ಗಾರ್ಹಪತ್ಯವ್ರತವ ಸತಿಯ
ಧರ್ಮದಿಂದುದ್ಯಾಪಿಸಿದೆ ನೀ ಸಮಂತು ೨೦

ನಿನ್ನಯ ಚಿತಾಗ್ನಿಯಾಗಳಿನೆದೆಯೊಳೆನ್ನ
ಬೇಯೆ ಬಾಂಗಿನೆಯೆ ಬೈಗಿನ ಬೆಂಕಿಯಂತೆ
ಮೂಡಿಂದುವಂತೆ! ಕರೆಯಕ್ಕರೆಯ ಜೊನ್ನ
ದುಮ್ಮನದ ಗುಮ್ಮನೆರಕೆಯಿಳುಂಕಿಪಂತೆ. ೨೪

ಕಂತಿದಿಂ ಬಳಿಕ ನೀ ನಿನ್ನೊಸಗೆಯರಿಯೆಂ,
ನೀನಾದಡಂ ಬಲ್ಲೆಯೇನಳಲನೆನ್ನ?-
ನನೆನಲಿನಮಂ ನಿಟ್ಟಿಪಂತಿರುಳ ಮರೆಯಿಂ
ನೇಸರೇನಿರುಳ ನಲಿನಂ ನೇಸರನ್ನ? ೨೮

ಕುಂದೇನು ಮನದನ್ನೆ ನೊಂದಡಾನಿಲ್ಲಿ?
ಮಗು ಮುಡಿದ ತೊಟ್ಟಿಲೇನಾದಡೇನಂತೆ?
ನೀರ ಕೆರೆ ತಾರದಂತರಗಾಲದಲ್ಲಿ,
ನೀನಲ್ಲಿ ನೆಮ್ಮದಿಯಿನಿರೆ ಸಾಕು, ಕಾಂತೆ! ೩೨

ಪತಿಗೆ ಹೆಂಡತಿ ಸಾಲಗಾತಿ ತಾನಂತೆ,
ನಮ್ಮೊಳಂತಲ್ಲ, ನಾ ಸಾಲಿಗನೆ ನಿನ್ನ-
ಕಣ್ಣ ಕಾಣಿಕೆಯಂತೆ ನನ್ನಿರವನಾಂತೆ,
ಪಾಲಾಗಿ ನೀರನಿನಿವಾಲೆಸಗಿದೆನ್ನ ೩೬

ಇದ್ದೆ ಸೆಯಿನಿದ್ದೊರೆಗಳೆದ್ದು ಮುಂಬೆರೆಯೆ,
ಒಂದನಿನ್ನೊಂದು ಮರೆಸಂದು ಹರಿವಂತೆ,
ಬಲ್ಲೆನೆನ್ನಯ ಕಂಗಣಂಗಿ ನೀ ಸರಿಯೆ,
ಬೆರತಿನ್ನುಮಿರವನ್ನ ಹರಿವೆ ಮುನ್ನಂತೆ. ೪೦

ಕಡಲೆನಿತು ಕೆರಳ್ದೊಡಂ, ಕಡೆವುದೇಂ ಕರೆಯಂ?-
ಆಯುರವಧಿಯನೆನ್ನ ನನ್ನಳವೆ ಮೀರೆ?
ಕಾವೆನಾಚೆಗೆ ನಿನ್ನ ತೇರಿಸಿದ ತರಿಯಂ,
ಗೆಣೆವಕ್ಕಿ ಹಗಲಂತೆ ತನ್ನೆಣೆಯ ಸೇರೆ. ೪೪

ಎನಿತಿನ್ನುಮೆನ್ನ ಬಾಳ್ವೆಯ ಹುಳುಕು ವಾಲೆ
ಮಗಚುವುದೊ ನಾನರಿಯೆ- ಬರೆದವನೆ ಬಲ್ಲಂ!
ಇನ್ನುಮಳ್ತಿಯೆ ನನ್ನನಿಂತು ವಿಧಿಯಾಲೆ
ಹಿಳಿಯಲೇವಾಳ್ತೆ? ಕಳಲಿಂದಹುದೆ ಬೆಲ್ಲಂ? ೪೮

ತಾಳದು ವಿಕಾಳಿಸುವ ಕಾಳಿಮೆ! ಇದನ್ನ
ತಾಳದಕಟಾ ನಿನ್ನ ಬಾಳೆನೆನೆ, ಮನವಂ
ಸೇರುವೆಗೆ ಕೋರಿಸಿ ಚಕೋರಿಸುವೆನೆನ್ನ
ಪ್ರೇಮಪರಿಧಿಯ ಸುಧಾನಿಧಿಯೆ ನಿನ್ನೆನವಂ! ೫೨
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...