ಕೊಳುಗುಳದ ಮನವಿ

[Theodor Korner ಎ೦ಬ ಜರ್ಮನ್‌ ಕವಿಯ `Gebet wahrend der
Schlacht’ (Prayer during the battle) ಎಂಬ ಕವಿತೆಯಿಂದ ಪ್ರೇರಿತವಾದುದು]

ಕರೆವೆ ನಾ ನಿನ್ನನೊಡೆಯಾ!
ನಿನ್ನ ಹೆಸರಂ ಕೊಂಡು ನಿಂದೆನಿದೊ ಸಿಡಿಗುಂಡು
ನೂರ್ಮೆ ಮಾರ್ಮೊರಸೆ ಕಾರ್ಮೊಳಗನುರ್ವರೆಯಿಂ,
ಕಿಸುಬಾಯನಾಕಳಿಸಿ ದೆಸೆಗಳಂ ಬಾಗುಳಿಸಿ,
ಮಿಂಚೆರಂಚಿ ಪಳಂಚಿ ಮುಂಚೆ ದಳ್ಳುರಿಯಿಂ-
ಪ್ರೋಚ್ಚಂಡ ತಾಂಡವಮೊ ನಿನ್ನದೊಡೆಯಾ?
ನಿನಗೆ ಮಣಿಮಣಿವೆನೊಡೆಯಾ| ೭

ನಿನಗೆ ಮುಣಿಮಣಿನೆನೊಡೆಯಾ!
ಕಾಳೆಗಳ ಭೋಂಕಾರ ಢೋಲ್ಗಳ ಧಳಂಕಾರ-
ಹೊಂಗುತಿದೆ ಮಂಗಲಾಮಂಗಲಮೊ ತೂರ್ಯಂ!
ಇದೊ ನಿಶಾಂತ ತುತೂರಿಯೂದಲಿಂತೆದೆ ತೂರಿ-
‘ಪರಧುರ್ಯರಿತಿಕಾರ್ಯಮನಿವಾರ್ಯ ಶೌರ್ಯಂ!’
ಜೀವಂತ ಕೋವಿಯಾನೇವೆನೊಡೆಯಾ!
ಕಾಣಿಸಾಣತಿಯನೊಡೆಯಾ! ೧೪

ಕಾಣಿಸಾಣತಿಯನೊಡೆಯಾ!
ನಮ್ಮ ಬಾಯಿಯ ತುತ್ತ ಕಸಿವ ಹಸಿವೆಯ ಕುತ್ತ
ಮೆಂತಂತು ಸಂಗ್ರಾಮ ಸಂಭ್ರಮಾಹ್ವಾನಂ,
ಗೃಹಲಕ್ಷ್ಮಿ ಕೊರಳಾಂತು ಸುರಿದ ನೀರವಮೆಂತು
ಅಂತೀ ರಣಾಂಗಣ ಘನಾಘನ ಧ್ವಾನಂ-
ನಿನ್ನ ನಿಶ್ಶಂಕ ಸಂಕಲ್ಪಮೊಡೆಯಾ!
ನೀಡ ರಣದೀಕ್ಷೆಯೊಡೆಯಾ! ೨೧

ನೀಡ ರಣದೀಕ್ಷೆಯೊಡೆಯಾ!
ವಶಗೆಯ್ಯಲಿಳೆಯೆಲ್ಲ ಮಸಗಿ ಕಾದುವೆನಲ್ಲ-
ಸ್ವಾರಾಜ್ಯವರ್ಜ್ಯಮನ್ಯರ ರಾಜ್ಯಮೇಕೆ?
ತಾಯ ಸೆರೆಯಂ ಸವರಲೆಂದೆ ವೆರಮೀ ಬವರ-
ದಬ್ಬಾಳಿಕೆಯ ಮೆಟ್ಟಡಿಯ ತಬ್ಬಬೇಕೆ?
ವಿಸ್ಫಾರಿಸೆನ್ನೆದೆಯ ಧಮನಿಯೊಡೆಯಾ!
ತಾರ ಸಮರಾಜ್ಞೆಯೊಡೆಯಾ! ೨೮

ತಾರ ಸಮರಾಜ್ಞೆಯೊಡೆಯಾ!
ಅನ್ಯದೇಶಾಕ್ರಾಂತಿ ಸ್ವಪರನಾಶಭ್ರಾಂತಿ
ಯಿಂ ದ್ವಿಪಕ್ಷದ ರಕ್ಷೆಗೀಕ್ಷಿಸದೆ ಬಗೆಯಂ,
ರಣಮೊಂದೆ ಶರಣೆಂದೆ ಬಂದೆ ಮುಂದೆದೆಯಿಂದೆ
ತೊಳೆದು ಕಂಬನಿಯೊಳೆದುರಾಳಿಗಳ ಪಗೆಯಂ-
ಸನ್ನದ್ಧನಾಂ ಧರ್ಮಯುದ್ಧಕೊಡೆಯಾ!
ಬೆಂಬಲಿಸು ನನ್ನನೊಡೆಯಾ! ೩೫

ಬೆಂಬಲಿಸು ನನ್ನನೊಡೆಯಾ!
ಎನ್ನೆವರೆಗೀ ಪ್ರಾಣಮೆನ್ನೆವರೆಗೆ ಕೃಪಾಣ
ಮನ್ನೆಗಂ ಕಾದೆಂದು ಬೀಳ್ಕೊಡಿಂದೆನ್ನ!
ನೀನೆ ವಿಜಯಧ್ವಜಂ! ನೀನೆ ಹೃದಯಸ್ರಜಂ!
ನೀನೆ ವಿಷ್ವಕ್ಸೇನ ಸೇನಾನಿಯೆನ್ನ!
ಸೋಲಗೆಲವೆನ್ನದೇಂ? ನಿನ್ನದೊಡೆಯಾ!
ಕಾದವುದೆ ನನ್ನದೊಡೆಯಾ! ೪೨

ಕಾದುವುದೆ ನನ್ನದೊಡೆಯಾ!
ಸರ್ವಭಾರಮನಿಂದು ನಿನಗಿರಿಸಿ ತರಿಸಂದು
ನಿನ್ನ ಹೆಸರೆತ್ತುತೆತ್ತುವೆ ಕತ್ತಿಯನ್ನ!
ನಿನ್ನಿಚ್ಛೆ ಎಂತೆಂತು ನಡೆಸೆನ್ನನಂತಂತು-
ಜಯಕೆ ಮುನ್ನಡೆಯಿಸಥವಾ ಮರಣಕೆನ್ನ!
ಮರಣಮೆ ವರಂ ಪರಾಶ್ರಯದಿನೊಡೆಯಾ!
ಮುನ್ನಡೆಯಿಸೆನ್ನನೊಡೆಯಾ! ೪೯

ಮುನ್ನಡೆಯಿಸೆನ್ನನೊಡೆಯಾ!
ಇಂದು ಜೀವಮನೆನ್ನ ತೆತ್ತೆ ಕೆಯ್ಗಿದೊ ನಿನ್ನ-
ನೀನಿದಂ ನನಗಿತ್ತೆ, ನೀನೆ ಕೊಳಬಲ್ಲೆ!
ಹರಸೆನ್ನನುಳಿಯೆಂದೊ, ಹರಸೆನ್ನನಳಿಯೆಂದೊ-
ಅಳುವ ತಾಯಿಳೆಯೊಳೆನ್ನಳಿವುಳಿವನೊಲ್ಲೆ!
ಇದೆ ಜಲಾಂಜಲಿ ಜೀವಿತಾಶೆಗೊಡೆಯಾ!
ನಿನಗೆನ್ನನಿತ್ತೆನೊಡೆಯಾ! ೫೬

ನಿನಗೆನ್ನನಿತ್ತೆನೊಡೆಯಾ!
ಸಿಡಿಲ ಸನ್ನೆಯಿನೆನ್ನನಂತಕಂ ಕರೆವನ್ನ,
ಕೆಯ್ಮುಗಿಯುವಲಿ ನಿನಗೆ ಕಣ್ಮುಗಿಯುವೆನ್ನ
ಜೀವನಂ ಬಸಿವನ್ನ ಭಾವನಂ ಕುಸಿವನ್ನ,
ಮೂರ್ಛೆಯಿಂ ನಿನ್ನ ಹೆಸರುಚ್ಚರಿಸದನ್ನ,
ಸ್ವಾಗತಮೆ ತವ ಪದಾಗತನಿಗೊಡೆಯಾ?
ಇದೆ ಕೊನೆಯ ಮನವಿಯೊಡೆಯಾ! ೬೩

ಇದೆ ಕೊನೆಯ ಮನವಿಯೊಡೆಯಾ!
ತಾಯ ಸಂಕಲೆೆ ಕಡಿಯೆ ಸಂಗಳಿಸದಾಂ ಮಡಿಯೆ,
ನೀನದಂ ತವಕದಿಂ ತರಿವೆಂದು ಬಲ್ಲೆ!
ಮಡಿಯೆ ಜನಿತ ವ್ಯಕ್ತಿ, ಮಡಿವುದೇನನುರಕ್ತಿ?—
ತಾಯೊಸಗೆ ತರ್ವಿನಂ ಸ್ವರ್ಗಸುಖಮೊಲ್ಲೆ!
ಭವಭವನಮನೆನಗಿಲ್ಲಿ ಸಲ್ಲಿಸೊಡೆಯಾ!
ಕರೆವೆ ನಾ ನಿನ್ನನೊಡೆಯಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನೆದೆಯ ಕೋಗಿಲೆ
Next post ಇದು ಸಿನಿಮಾ ಅಲ್ಲ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

cheap jordans|wholesale air max|wholesale jordans|wholesale jewelry|wholesale jerseys