Home / ಕವನ / ಕವಿತೆ / ಪಂಢರಪುರದಲ್ಲಿ

ಪಂಢರಪುರದಲ್ಲಿ

ರಾಗ ಯಮುನಾಕಲ್ಯಾಣಿ-ತಾಳ ಧುಮಾಳಿ

ಯಾವ ಭಾಗ್ಯದಿಂದಿಲ್ಲಿಗೆ ಬಂದೆ?
ನಿನ್ನ ಕಂಡು ಧನ್ಯನಾದೆ ತಂದೆ!
ಇನ್ನಾದಡಮೆನಿಸೆನ್ನೆದೆಯಿಂದೆ-
ಜಯ ಜಯ ಪಂಢರಿನಾಥ ವಿಠೋಬಾ! ||೧||

ತುಕಾರಾಮ ನಾಮದೇವರಿಲ್ಲಿ
ಕುಣಿದ ರಂಗಸಿಲೆಯಿಂ ೧ಸೆಲೆವಲ್ಲಿ
ನಿನ್ನ ನಾಮಮೆದೆಯೊತ್ತುವೆನಲ್ಲಿ-
ಜಯ ಜಯ ಪಂಢರಿನಾಥ ವಿಠೋಬಾ! ||೨||

ನಡುವಲಿ ಕೆಯ್ಮಡಗುತ ನಿಡುನಿಂತೆ
ಕೃತಕೃತ್ಯನೊಲೆನ್ನ ಕಾವ ಮುಂತೆ
ಮುಗಿವುದೆಂತು ನಿನ್ನ ಕೆಲಸದಂತೆ?
ಜಯ ಜಯ ಪಂಢರಿನಾಥ ವಿಠೋಬಾ! ||೩||

೨ಬಬ್ಬುಳಿಯ ಮುಳ್ಳ ಮೆಳೆಯಲಿ ನಿಲ್ಲೆ,
ಏಕೆ ವಿಷಯವಿಷಮ ಮನಮನೊಲ್ಲೆ?
ನೀತಿಯಿದೇಂ, ದೇವ, ನೀನೆ ಬಲ್ಲೆ!
ಜಯ ಜಯ ಪಂಢರಿನಾಥ ವಿಠೋಬಾ ||೪||

ಸಕೂಬಾಯಿಯೊಡಬೀಸಿದೆ ಕಲ್ಲಂ,
ಗೋಮಾಯಿಯ ೩ಕಡಸಲಾಂತೆ ಜಲ್ಲಂ-
ನನ್ನ ಕಡೆಗೆ ಕಣ್ಣೆತ್ತಿದುದಿಲ್ಲಂ!
ಜಯ ಜಯ ಪಂಢರಿನಾಥ ವಿಠೋಬಾ ||೫||

೪ಹಳಸಿರದೆ ೫ಅಂದಿನಿಟ್ಟಿಗೆ ನಿನ್ನ?
ನೋಡ ಜೀಯ ತಂದಿಹೆ ಹೊಸತನ್ನ-
ಮೆಟ್ಟಿ ನಿಲ್ಲು ನಿಷ್ಠುರ ಮನಮೆನ್ನ,
ಜಯ ಜಯ ಪಂಢರಿನಾಥ ವಿಠೋಬಾ! ||೬||

ಪುಣ್ಯಸಲಿಲೆ ತಾಯೆ ಚಂದ್ರಭಾಗೆ,
ತೊಳಸೆನ್ನ ಮನದ ಶಂಕೆಯ ನೀಗೆ,
ಗುಳುಗುಳಿಸೊಡೆಯನ ನೆನವೆದೆ ಬೀಗೆ-
ಜಯ ಜಯ ಪಂಢರಿನಾಥ ವಿಠೋಬಾ! ||೭||

ಪೊರೆಯ! ತೊರೆಯ! ಇನ್ನೆರೆಯ ನೀನೆನ್ನ-
ಧನ್ಯನಾದೆ ಕಂಡೆನೆಂದೆ ನಿನ್ನ!
ನೀ ಮರೆವೊಡಮಿನ್ನಿದೆ ಮರೆಯೆನ್ನ-
ಜಯ ಜಯ ಪಂಢರಿನಾಥ ವಿಠೋಬಾ! ||೮||

ಗೆಯ್ದ ಪಾಪಮನಿತುಂ ನಿನಗರ್ಪಣ,
ಗೆಯ್ಯದ ಪುಣ್ಯಮದುಂ ನಿನಗರ್ಪಣ,
ಕಳೆದುಳಿದ ಜೀವಿತಂ ನಿನಗರ್ಪಣ,
ಜಯ ಜಯ ಪಂಢರಿನಾಥ ವಿಠೋಬಾ! ||೯||

ನಿನ್ನನೊಡೆಯ ಮತ್ತೇನನು ಬೇಡೆ-
ಬೇಡಲೇಕೆ ನೀ ಬೇಡದೆ ನೀಡೆ?
ಸಾಕಂತ್ಯವರಂ ನಾಲಗೆಯಾಡೆ –
ಜಯ ಜಯ ಪಂಢರಿನಾಥ ವಿಠೋಬಾ! ||೧೦||
*****
೧ ಮರುಧ್ವನಿಸು
೨ ಜಾಲೀಗಿಡ
೩ ಕಡವನ್ನು ದಾಟಿಸು
೪ ಹಳತಾಗು
೫ ದೇವರು ತನ್ನ ಭಕ್ತನಾದ ಪುಂಡರೀಕನ ಮನೆಗೆ ಬಂದಾಗ, ತಾಯಿತಂದೆಯವರ ಸೇವೆಯಲ್ಲಿ ನಿರತನಾಗಿದ್ದ ಆತನು ತಾನದನ್ನು ಮುಗಿಸಿ ಬರುವ ವರೆಗೆ ಇದರಲ್ಲಿರು ಎಂದು ಕೊಟ್ಟ ಇಟ್ಟಿಗೆ.

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...