Home / ಕವನ / ಕವಿತೆ / ಕನ್ನಡಿಗರ ತಾಯಿ

ಕನ್ನಡಿಗರ ತಾಯಿ

ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ!
ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ!
ನಮ್ಮ ತಪ್ಪನೆನಿತೊ ತಾಳ್ವೆ,
ಅಕ್ಕರೆಯಿಂದೆಮ್ಮನಾಳ್ವೆ;
ನೀನೆ ಕಣಾ ನಮ್ಮ ಬಾಳ್ವೆ,
ನಿನ್ನ ಮರೆಯಲನೆಮ್ಮೆವು-
ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವೆಮ್ಮವು. ೭

ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೊ,
ಪತ್ರಮೀವ ಪುಷ್ಪಮೀವ ಲತೆಯ ತರತರಂಗಳೊ,
ತೆನೆಯ ಕೆನೆಯ ಗಾಳಿಯೊ,
ಖಗಮೃಗೋರಗಾಳಿಯೊ,
ನದಿನಗರನಗಾಳಿಯೊ!
ಇಲ್ಲಿಲ್ಲದುದುಳಿದುದೆ?
ಜೇನು ಸುರಿವ ಹಾಲು ಹರಿವ ದಿವಂ ಭೂಮಿಗಿಳಿದುದೆ? ೧೪

ಬುಗರಿಯೀಯೆ ಶಬರಿ ಕಾಯೆ ರಾಮನಿಲ್ಲಿ ಬಂದನೆ?
ಕನ್ನಡ ದಳ ಕೂಡಿಸಿ ಖಳ ದಶಾಸ್ಯನಂ ಕೊಂದನೆ?
೧ಪಾಂಡವರಜ್ಞಾತಮಿದ್ದ,
ವಲಲಂ ಕೀಚಕನ ಗೆದ್ದ,
೨ಕುರುಕುಲ ಮುಂಗದನಮೆದ್ದ
ನಾಡು ನೋಡಿದಲ್ಲವೇ?
ನಂದನಂದನನಿಲ್ಲಿಂದ ಸಂದಿಗಯ್ದನಲ್ಲವೇ? ೨೧

ಶಕವಿಜೇತನಮರ ೩ಶಾತವಾಹನಾಖ್ಯನೀ ಶಕಂ
ನಿನ್ನೊಳಂದು ತೊಡಗಿ ಸಂದುದರ್ಧ ಭರತದೇಶಕಂ!
ಚಳುಕ್ಯ ರಾಷ್ಟ್ರಕೂಟರೆಲ್ಲಿ,
ಗಂಗರಾ ಕದಂಬರೆಲ್ಲಿ,
ಹೊಯ್ಸಳ ಕಳಚುರ್ಯರೆಲ್ಲಿ,
ವಿಜಯನಗರ ಭೂಪರು
ಆಳ್ದರಿಲ್ಲಿಯಲ್ಲದೆಲ್ಲಿ ತಾಯೆ ಮೇಣಲೂಪರು? ೨೮

ಜೈನರಾದ ಪೂಜ್ಯಪಾದ ಹೊಂಡಕುಂದ ವರ್ಯರ,
ಮದ್ವಯತಿಯೆ ಬಸವಪತಿಯೆ ಮುಖ್ಯ ಮತಾಚಾರ್ಯರ,
೪ಶರ್ವ ಪಂಪ ರನ್ನರ,
ಲಕ್ಷ್ಮೀಪತಿ ಜನ್ನರ,
ಷಡಕರಿ ಮುದಣ್ಣರ,
ಪುರಂದರ ವರೇಣ್ಯರ,
ತಾಯೆ, ನಿನ್ನ ಬಸಿರೆ ಹೊನ್ನ ಗನಿ ವಿದ್ಯಾರಣ್ಯರ! ೩೫

ಹಳೆಯ ಬೀಡ ೫ಬೇಲನಾಡ ಮಾಡಮೆನಿತೊ ಸುಂದರಂ!
೬ಬಿಳಿಯ ಕೊಳದ ಕಾರಕಳದ ೭ನಿಡುಕರೆನಿತೊ ಬಂಧುರಂ!
ಇಲ್ಲಿಲ್ಲದ ಶಿಲ್ಪಮಿಲ್ಲ;
ನಿನ್ನ ಕಲ್ಲೆ ನುಡಿವುದಲ್ಲ!
ಹಿಂಗತೆಯಿನಿವಾಲ ಸೊಲ್ಲ
ನೆಮ್ಮ ತೃಷೆಗೆ ದಕ್ಕಿಸು-
ಹೊಸತು ಕಿನ್ನರಿಯಲಿ ನಿನ್ನ ಹಳೆಯ ಹಾಡನುಕ್ಕಿಸು! ೪೨

ಆರ್ಯರಿಲ್ಲಿ ಬಾರದಲ್ಲಿ ಬಾಸೆ ಎಲ್ಲಿ ಸಕ್ಕದಂ?
ನಿನ್ನ ನುಡಿಯಿನಚ್ಚುಪಡಿಯನಾಂತರೆನಿತೊ ತಕ್ಕುದಂ!
ಎನಿತೊ ಹಳೆಯ ಕಾಲದಿಂದ
ಬರ್ದಿಲಮೀ ಬಾಸೆಯಿಂದ
ಕಾಲನ ಮೂದಲಿಸಿ ನಿಂದ
ನಿನಗೆ ಮರವೆ ಹೊದೆವುದೆ?
ನಿನ್ನ ನುಡಿಗೆ ನಿನ್ನ ನಡೆಗೆ ಮುದುಪುಮೆಂದುಮೊದವುದೆ? ೪೯

ತನ್ನ ಮರೆಯ ಕಂಪನರಿಯದದನೆ ಹೊರಗೆ ಹುಡುಕುವ
ಮೃಗದ ಸೇಡು ನಮ್ಮ ಪಾಡು ಪರರ ನುಡಿಗೆ ಮಿಡುಕುವ!
ಕನ್ನಡ ಕಸ್ತೂರಿಯನ್ನ
ಹೊಸತುಸಿರಿಂ ತೀಡದನ್ನ
ಸುರಭಿ ಎಲ್ಲಿ? ನೀನದನ್ನ
ನವಶಕ್ತಿಯಿನೆಬ್ಬಿಸು-
ಹೊಸ ಸುಗಂದದೊಸಗೆಯಿಂದ ಜಗದಿ ಹೆಸರ ಹಬ್ಬಿಸು! ೫೬

ನಿನ್ನ ಪಡೆಯ ಕತೆಯ ಕಡೆಯ ನುಡಿಯೆ ತಾಳಿಕೋಟೆಯು?
ಕಡಲಿನೊರತೆಗೊಳವೆ ಕೊರತೆ? ಬತ್ತದು ನಿನ್ನೂಟೆಯು!
ಸೋಲ ಗೆಲ್ಲವಾರಿಗಿಲ್ಲ?
ಸೋತು ನೀನೆ ಗೆದ್ದೆಯಲ್ಲ?
ನಿನ್ನನಳಿವು ತಟ್ಟಲೊಲ್ಲ!-
ತಾಳಿಕೋಟೆ ಸಾಸಿರಂ
ಬಾಹುಬಲದಿ ಮುನೋಬಲದಿ ತಾಯೆ ಗೆಲುನೆ ಭಾಸುರಂ! ೬೩

ಕುಗ್ಗದಂತೆ ಹಿಗ್ಗಿಪಂತೆ ನಿನ್ನ ಹೆಸರ ಟೆಕ್ಕೆಯಂ,
ನೀಗದಂತೆ ಸಾಗಿಪಂತೆ ನಿನ್ನ ನುಡಿಯ ಢಕ್ಕೆಯಂ,
ನಮ್ಮೆದೆಯಂ ತಾಯೆ ಬಲಿಸು,
ಎಲ್ಲರ ಬಾಯಲ್ಲಿ ನೆಲಸು,
ನಮ್ಮ ಮನಮನೊಂದೆ ಕಲಸು!
ಇದನೊಂದನೆ ಕೋರುವೆ-
ನಿನ್ನ ಮೂರ್ತಿ ಜಗತ್ಕೀರ್ತಿ ಎಂದಿಗೆಮಗೆ ತೋರುವೆ? ೭೦
*****
೧ ಧಾರವಾಡ ಜಿಲ್ಲೆಯ ‘ಹಾನಗಲ್ಲು’ ವಿರಾಟನ ರಾಜಧಾನಿ ಎಂದು ಪ್ರಖ್ಯಾತವಿದೆ.
೨ ಗೋಗ್ರಹಣದ ಯುದ್ಧ
೩ ಶಾಲಿವಾಹನ
೪ ಶರ್ವನೆಂದು ನೃಪತುಂಗನ ಹೆಸರು.
೫ ಬೇಲೂರು
೬ ಶ್ರವಣಬೆಳ್ಗೊಳ
೭ ನಿಡುನಿಂದಿರುವ ಗೊಮ್ಮಟ ಮೂರ್ತಿಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...