Home / ಕವನ / ಕವಿತೆ / ಜೀವನದೀ ಮಧುಮಾಸಂ

ಜೀವನದೀ ಮಧುಮಾಸಂ

ಜೀವನದೀ ಮಧುಮಾಸಂ
ಬತ್ತುತ ಬಂತು,
ಮನಸಿನ ಮಧುರವಿಕಾಸಂ
ನನೆಯೊಳೆ ಸಂತು;
ಮುಸುರಿದ ಮಕರಂದಪಾನ
ಮೊದವದೆದೆಯ ಭ್ರಮರಗಾನ
ಮೆಚ್ಚರಲೆಂತು? ೭

ಮನೆಗೆಯ್ದಕ್ಕರೆಯ ಪಿಕಂ
ಪಾರಿದುದೆಲ್ಲಿ?
ಗೂಡುಗೊಂಡ ಹಿಂಡು ಶುಕಂ
ಕಾಣಿಸವಿಲ್ಲಿ!
ಅಳಲ ಕಣಜವಿನ್ನು ಸಾಗೆ,
ಹಗಲುದ್ದಕೆ ಮರುಗೆ ಗೂಗೆ,
ಚೀರ್ವುದು ಹಲ್ಲಿ ೧೪

ನಡುಚೈತ್ರದಿ ಮಸಗೆ ಗ್ರೀಷ್ಮ,
ಬೇಯದೆ ಮನಸು?
ಮಗಚದೆ ಮೃಗಜಲದೊಳೂಷ್ಮ
ಕಡಸಿದ ಕನಸು?
೧ಪಾತೆಯೆಲರ ೨ಪಾತಿಯಿಲ್ಲ,
ತರಗೆಲೆಗಳ ೩ಬಟ್ಟೆಯೊಲ್ಲ
ಡೇವುದೊ ನೆನಸು? ೨೧

ತೆರೆಯಿಲ್ಲದ ಕಡಲೊಳಿಲ್ಲಿ
ದಾವ ದಾವರಂ?
ಮರಳಿಲ್ಲದ ಮರುವೊಳಲ್ಲಿ೪
ಕಾವ ಕಾವರಂ!
ಮುಗಿಲಲಿ ರವಿಶಶಿಯ ಕೀಸೆ
ಸಿಡಿವ ಕಿಡಿಯೊ ಕೆಲಮೆ ಸೂಸೆ
ಸೀವ ಸೀವರಂ? ೨೮

ಬೇಗೆ ಮಸುಕಲಿಂತು ಶಾನೆ
ದೂರವೆ ವೃಷ್ಟಿ?
ತಂಬನಿಗಿಂಬಾಗೆ ತಾನೆ
ಮೊಳೆಯದೆ ಸೃಷ್ಟಿ ?
ಹಸುರು ಹಗಲು ಹೊರಳೆ, ಹೊಂಚು
ಹಾಕದೆ ನೂರಾರು ಮಿಂಚು
ಹುಳಗಳ ದೃಷ್ಟಿ? ೩೫

ಒಮ್ಮೆ ಮುಗಿಯಲದೆ ವಸಂತ
ವಿನ್ನಹುದಳವ?
ಒಮ್ಮೆ ಮುಗಿದ ತನುವನಂತ
ರಂ ನಮಗೊಳವೆ?
ಸುಗ್ಗಿ ಮುಗಿದೆ ಮಳೆಯಲ್ಲವೆ?
ತನು ಮುಗಿದಡೆ ಕೆಳೆಯಿಲ್ಲವೆ?-
ಕೆಳೆಗೇನಳಿನೆ? ೪೨
****
೧ ಪಾತರಗಿತ್ತಿ
೨ ಪಾತಿ=ದೋಣಿ
೩ ದಾರಿ
೪ ಅಲ್ಲಿ=ಆಕಾಶದಲ್ಲಿ

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...