Home / ಕವನ / ಕವಿತೆ / ಜೀವನದೀ ಮಧುಮಾಸಂ

ಜೀವನದೀ ಮಧುಮಾಸಂ

ಜೀವನದೀ ಮಧುಮಾಸಂ
ಬತ್ತುತ ಬಂತು,
ಮನಸಿನ ಮಧುರವಿಕಾಸಂ
ನನೆಯೊಳೆ ಸಂತು;
ಮುಸುರಿದ ಮಕರಂದಪಾನ
ಮೊದವದೆದೆಯ ಭ್ರಮರಗಾನ
ಮೆಚ್ಚರಲೆಂತು? ೭

ಮನೆಗೆಯ್ದಕ್ಕರೆಯ ಪಿಕಂ
ಪಾರಿದುದೆಲ್ಲಿ?
ಗೂಡುಗೊಂಡ ಹಿಂಡು ಶುಕಂ
ಕಾಣಿಸವಿಲ್ಲಿ!
ಅಳಲ ಕಣಜವಿನ್ನು ಸಾಗೆ,
ಹಗಲುದ್ದಕೆ ಮರುಗೆ ಗೂಗೆ,
ಚೀರ್ವುದು ಹಲ್ಲಿ ೧೪

ನಡುಚೈತ್ರದಿ ಮಸಗೆ ಗ್ರೀಷ್ಮ,
ಬೇಯದೆ ಮನಸು?
ಮಗಚದೆ ಮೃಗಜಲದೊಳೂಷ್ಮ
ಕಡಸಿದ ಕನಸು?
೧ಪಾತೆಯೆಲರ ೨ಪಾತಿಯಿಲ್ಲ,
ತರಗೆಲೆಗಳ ೩ಬಟ್ಟೆಯೊಲ್ಲ
ಡೇವುದೊ ನೆನಸು? ೨೧

ತೆರೆಯಿಲ್ಲದ ಕಡಲೊಳಿಲ್ಲಿ
ದಾವ ದಾವರಂ?
ಮರಳಿಲ್ಲದ ಮರುವೊಳಲ್ಲಿ೪
ಕಾವ ಕಾವರಂ!
ಮುಗಿಲಲಿ ರವಿಶಶಿಯ ಕೀಸೆ
ಸಿಡಿವ ಕಿಡಿಯೊ ಕೆಲಮೆ ಸೂಸೆ
ಸೀವ ಸೀವರಂ? ೨೮

ಬೇಗೆ ಮಸುಕಲಿಂತು ಶಾನೆ
ದೂರವೆ ವೃಷ್ಟಿ?
ತಂಬನಿಗಿಂಬಾಗೆ ತಾನೆ
ಮೊಳೆಯದೆ ಸೃಷ್ಟಿ ?
ಹಸುರು ಹಗಲು ಹೊರಳೆ, ಹೊಂಚು
ಹಾಕದೆ ನೂರಾರು ಮಿಂಚು
ಹುಳಗಳ ದೃಷ್ಟಿ? ೩೫

ಒಮ್ಮೆ ಮುಗಿಯಲದೆ ವಸಂತ
ವಿನ್ನಹುದಳವ?
ಒಮ್ಮೆ ಮುಗಿದ ತನುವನಂತ
ರಂ ನಮಗೊಳವೆ?
ಸುಗ್ಗಿ ಮುಗಿದೆ ಮಳೆಯಲ್ಲವೆ?
ತನು ಮುಗಿದಡೆ ಕೆಳೆಯಿಲ್ಲವೆ?-
ಕೆಳೆಗೇನಳಿನೆ? ೪೨
****
೧ ಪಾತರಗಿತ್ತಿ
೨ ಪಾತಿ=ದೋಣಿ
೩ ದಾರಿ
೪ ಅಲ್ಲಿ=ಆಕಾಶದಲ್ಲಿ

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...