ನಾವೆ ನಮಗಾಗಿಸುವೆವೆಮ್ಮ ಕೋಟಲೆಯಂ

ನಾವೆ ನಮಗಾಗಿಸುವೆವೆಮ್ಮ ಕೋಟಲೆಯಂ-
ಬಾಳ್ವೆ ಸಂಗರರಂಗವೆಂಬುದಂ ಮರೆದು,
ಸಿಂಗರಂ ಗೆತ್ತು ಶಸ್ತ್ರಂಗಳಂ ಮುರಿದು
ವಿಧಿಗೆರೆದು ಕಡೆದೀವೆವಳಲ ಸಂಕಲೆಯಂ.

ಕಾದದೊಡೆ ಬಾಳೇಕೆ? ಕಾದೆನೆನೆ ನಿನ್ನ
ಸಂಧಿಪುದೊ? ಬಂಧಿಪುದೊ? ಬಗೆಯ ವಿಧಿಯದರಿಂ
ಬಿಳಿಯ ಪಳವಿಗೆಯಳವೆ? ಬಾಳನೆತ್ತುದರಿಂ
ಪಡೆವಳಂ ತಾನೆ, ಪಡೆ ತಾನೆ, ನಡೆ ಮುನ್ನ!

ಮಾರಾಂತ ವಿಧಿಗೀಯಲೇಂ ತನ್ನ ಬಿಲ್ಲಾ?
ತನ್ನಾಯುಧದಿ ತಾನೆ ಮಡಿವೆಯೇನಿಂತು?
ಹುಟ್ಟೊಡನೆ ತೊಟ್ಟ ತಾನೆಂಬಂಬನಾಂತು
ನಿನ್ನ ಹೆಸರಿಂ ಕೊರೆಯ ವಿಧಿಯೆದೆಯ ಕಲ್ಲಾ!

ನಿನ್ನವೆ ಜಯಾಜಯಂ? ಕಾದುವುದೆ ನಿನ್ನ-
ಕರೆಯಂಬ ಗುರಿಗೊಂಬ ವಿಧಿ ಕಾಂಬ ಮುನ್ನ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎದೆ ತುಂಬಿದ ಹಾಡು

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…