Home / ಕವನ / ಕವಿತೆ / ಇನ್ನು ನೀನೆನ್ನವನು

ಇನ್ನು ನೀನೆನ್ನವನು

ಇನ್ನು ನೀನೆನ್ನವನು
ನಾನಿನ್ನು ನಿನ್ನವನು
ಇಂದಿನಿಂದೆ,
ಇಂದಿನಿಂದ ಮುಂದೆ.

ನಿನ್ನ ನೆನವುದೆ ಚನ್ನ,
ನಿನ್ನ ಕನವುದೆ ನನ್ನ
ದಿನದ ಬಾಳು,
ನನ್ನ ಮನದ ಕೂಳು.

ಮಳೆಯೆ ಬೇಸಗೆಯಾಸೆ
ಯಂತೆ ನನ್ನ ಪಿಪಾಸೆ
ಯೆದೆಯ ನೀನೆ
ತಣಿಪ ಸೊದೆಯ ಸೋನೆ.

ಮುಚ್ಚುಕಿಟಿಕಿಯ ಮುಂತೆ
ಕಾವ ತಂಬೆಲರಂತೆ
ನನ್ನ ಕಾವೆ
ಮನದಿ ನಿನ್ನ ತೀವೆ.

ತನ್ನ ದೃಷ್ಟಿಯ ಕಾಣ
ದಂಬಕದೊಲೇಂ ಜಾಣ
ನೆನ್ನ ಬಳಿಯೆ
ಸುಳಿವ ನಿನ್ನ ತಿಳಿಯೆ?

ಒಳಮಿಂಚು ಹೊರಮಿರುಗು
ವರಮಂಬುದಂ ತಿರುಗು
ವಂತೆ ನಿನ್ನ
ನರಿಯದಾಂತೆ ಬನ್ನ

ಜೇನನಿಳಿಸದ ಮುನ್ನ
ಜ್ಯೋತಿ ಮಯಣದೊಳೆನ್ನ?
ಮೋಹವಿಳಿಸು
ನಿನ್ನ ನೇಹ ಬೆಳಸು.

ನಿನ್ನ ಗುರುತೆದೆಗಿಲ್ಲ
ದೆಡನಾಣ್ಯವಿದು ಸಲ್ಲ
ದೊತ್ತು ನಿನ್ನ
ಅಚ್ಚನೆತ್ತು ನನ್ನ.

ನುಡಿಗೆ ಬಾರದ ಬಾಸೆ
ಯಿಂದ ಬೇಡುವುದಾಸೆ
ನಿನ್ನ ನೋಡೆ,
ನಿನಗೆ ನನ್ನ ನೀಡೆ.

ರವಿಯ ತೋರಿಸೆ ರವಿಯೊ?
ಮಿಣುಕು ಬತ್ತಿಯ ಛವಿಯೊ?
ನೋಡಲೆನ್ನ
ಮನಕೆ ಮೂಡು ಮುನ್ನ.

ಹಗಲೊಡನೆ ಮಸೆವಂತೆ
ಇರುಳೆ ಹಗಲಿಸುವಂತೆ,
ನಿನ್ನ ಮಲೆವೆ
ನಾದಡೆನ್ನ ಕಲೆವೆ.

ತಂದೆ ಗದ್ದಿಸದೆನ್ನ,
ತಾಯೆ ಮುದ್ದಿಸುತೆನ್ನ
ಕೇಡ ಮರೆಯ,
ನನಗೆ ನೀಡ ಮರೆಯ.

ನಿನ್ನನಲ್ಲದೆ ಸಲ್ಲ
ದೇನ ನಿನ್ನೊಡನೆಲ್ಲ
ಬೇಡಲಿಲ್ಲ!
ನಿನ್ನ ಕಾಡಲಿಲ್ಲ!

ಇಲ್ಲ ವೆನದದನೆಲ್ಲ
ನನಗೊದವಿಸಿದೆಯಲ್ಲ!
ಎರೆದೆನೆಂತು
ದೂರವರಿದೆನಂತು!

ಇನ್ಯಾವುದಂ ಬೇಡ
ಲೊಲ್ಲೆ; ನನಗೇಂ ಬೇಡ-
ಬೇಡಲಿಂತು
ನಿನ್ನ ಕೂಡಲೆಂತು?

ಏನೆನಗೆ ಬೇಕಿಲ್ಲ,
ನೀನೆನಗೆ ಸಾಕಲ್ಲ ?
ನೀನೆ ಬೇಕು
ನನಗೆ ನೀನೆ ಸಾಕು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...