Home / ಕವನ / ಕವಿತೆ / ಈ ಜನುಮವೆ ಮುಗಿವ ಮುನ್ನ

ಈ ಜನುಮವೆ ಮುಗಿವ ಮುನ್ನ

ಈ ಜನುಮವೆ ಮುಗಿವ ಮುನ್ನ
ಕಾಣೆನೊ ಕಾಣುವೆನೊ ನಿನ್ನ
ನರಿಯದೊಡನಭಿನ್ನಮೆನ್ನ
ಮನದ ತಿತಿಕ್ಷೆ
ಇಂದಲ್ಲಡೆ ಮುಂದೆ ನೆರೆಯ
ದಿರದಿಲ್ಲಿಯೆ ಬಲ್ಲೆನೆರೆಯ-
ಸಲದೆ ತಾಯ ಬಸಿರ ಮರೆಯ
ಮಗುವ ದಿದೃಕ್ಷೆ?

ನಿನ್ನೊಳೊಗೆದ ನನ್ನೊಳಿಂತು
ನಿನ್ನ ಕಾಂಬ ಬಯಕೆ ಬಂತು,
ಕಡಲಾಳದ ತೆರೆಯೊಳೆಂತು
ಕಡಲ ಕಾಣಿಕೆ;

ನನಗೀ ಜನುಮದಿ ಪ್ರಸನ್ನ
ನಹುದು ಕಣಾ ಹೊಣೆಯೆ ನಿನ್ನ,
ಕಡಲ ಹೊಣೆಯದೆಂತು ತನ್ನ
ತೆರೆಯ ಪೂಣಿಕೆ.

ನಾನಿದೊ ಬರೆ ಬಾಷ್ಪದಂಧು,
ನೀನೊಡೆಯಾ ದಯಾಸಿಂಧು-
ನಿನ್ನಿಂದ ಸಮೀಪಬಂಧು
ವಾರೊಳರೆನ್ನ?
ಇಂತೆನೆ ಮೊಗಮರಸಿ ಬೆಂಗೆ
ಬಂದಡೆ ಮೊಗ ಮರಸೆ ಹಂಗೆ?
ಎನ್ನೆಗಮಿಂತೆನ್ನ ಕಂಗೆ
ಮಾಚುವೆ ನಿನ್ನ?

ಜನನದಿ ಮರಣಾಂತಮಿಲ್ಲಿ
ಬಾಳ್ವೆ ನಿನ್ನನರಸುವಲ್ಲಿ,
ನೋಡದಿಲ್ಲಿ ಕೂಡಲಲ್ಲಿ
ಬಲ್ಲುದೆ ನಿನ್ನ?
ಮರಳಿ ತನ್ನ ಹೊರಟ ರೇವ
ನಯ್ದೆ ಸುತ್ತಿ ಬರುವ ನಾವ
ಮಿಳಿಸಿತೆ ಹಾಯದರ ಸೋವ
ಕಾಣದ ಮುನ್ನ?

ಉದಯಾಸ್ತಂ ಬಡೆವ ಖರ್ವ
ಗತಿಯಂತಿನನೊಡನೆ ಪರ್ವ
ವಡೆವ ಗತಿಯುಮೆಂತು ಶರ್ವ
ರೀಶಗೆ ದ್ವಿಧಾ

ಜೀವನದಿಂದಂತು ಭಿನ್ನ
ಪಥಮೆನಗಿಲ್ಲಿರಲಖಿನ್ನ
ಮದಂ ನಡೆವಗೆಂತು ನಿನ್ನ
ದರ್‍ಶನಂ ಮುಧಾ?

ಬಾಳ್ವೆಯ ನಿಡುಮರಳಿನಲ್ಲಿ
ಸುಖದಿಂ ದಣಿದೊಣಗಿದಲ್ಲಿ
ನಡುದೀವಿಗಳಳಲೊಳಲ್ಲಿ
ಕಾವನಾವನಿಂ
ಕಂಬನಿಯಾತಿಥ್ಯ ದೊರೆತೆ
ನವನ ಮುಂದುವರಿಯೆ ಮರೆತೆ-
ನಿನ್ನಿಂದವನಕಟ ಪೆರತೆ?
ಪೇಳ ದೇವ ನೀಂ!

ನಿನ್ನನಿಲ್ಲಿ ನಮಗೆ ತೋರ
ಲಲ್ಲಡಳಲು ಬರಿದೆ ಬಾರ;
ಕಂಡ ನಿನ್ನ ನೋಡಲಾರ
ದೆನ್ನ ಕಣ್ಣಿಗೆ
ಬಲ್ಲೆನಿಲ್ಲೆ ಕಾಣಬರುವೆ-
ಎಂದೊ ಎಂತೊ ನೀನೆ ಅರಿವೆ,
ಬಗೆಗೆ ಕಾವ ಕವಿಯೊಲಿರುವೆ
ನಿಂತು ತಣ್ಣಗೆ.

ಬಲ್ಲೆನೆಂತು ಬಾಳ್ವೆ ಸಂದು
ನಿನ್ನೊಳೆ ಮೆಯ್ಗರೆವೆನೆಂದು,
ಬಲ್ಲೆನಂತು ಬಾಳುವಂದು
ಕಾಣುವೆ ನಿನ್ನ,
ರವಿಯಲಿ ಮೆಯ್ಗರೆವ ಮುಂತು
ಹುಣ್ಣಿಮೆಯಮೃತಾಂಶು ನಿಂತು
ಮುಖಾಮುಖಿಯೆ ಕಾಣುವಂತು
ಭಾಸ್ಕರನನ್ನ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...