Home / ಕವನ / ಕವಿತೆ / ಈ ಜನುಮವೆ ಮುಗಿವ ಮುನ್ನ

ಈ ಜನುಮವೆ ಮುಗಿವ ಮುನ್ನ

ಈ ಜನುಮವೆ ಮುಗಿವ ಮುನ್ನ
ಕಾಣೆನೊ ಕಾಣುವೆನೊ ನಿನ್ನ
ನರಿಯದೊಡನಭಿನ್ನಮೆನ್ನ
ಮನದ ತಿತಿಕ್ಷೆ
ಇಂದಲ್ಲಡೆ ಮುಂದೆ ನೆರೆಯ
ದಿರದಿಲ್ಲಿಯೆ ಬಲ್ಲೆನೆರೆಯ-
ಸಲದೆ ತಾಯ ಬಸಿರ ಮರೆಯ
ಮಗುವ ದಿದೃಕ್ಷೆ?

ನಿನ್ನೊಳೊಗೆದ ನನ್ನೊಳಿಂತು
ನಿನ್ನ ಕಾಂಬ ಬಯಕೆ ಬಂತು,
ಕಡಲಾಳದ ತೆರೆಯೊಳೆಂತು
ಕಡಲ ಕಾಣಿಕೆ;

ನನಗೀ ಜನುಮದಿ ಪ್ರಸನ್ನ
ನಹುದು ಕಣಾ ಹೊಣೆಯೆ ನಿನ್ನ,
ಕಡಲ ಹೊಣೆಯದೆಂತು ತನ್ನ
ತೆರೆಯ ಪೂಣಿಕೆ.

ನಾನಿದೊ ಬರೆ ಬಾಷ್ಪದಂಧು,
ನೀನೊಡೆಯಾ ದಯಾಸಿಂಧು-
ನಿನ್ನಿಂದ ಸಮೀಪಬಂಧು
ವಾರೊಳರೆನ್ನ?
ಇಂತೆನೆ ಮೊಗಮರಸಿ ಬೆಂಗೆ
ಬಂದಡೆ ಮೊಗ ಮರಸೆ ಹಂಗೆ?
ಎನ್ನೆಗಮಿಂತೆನ್ನ ಕಂಗೆ
ಮಾಚುವೆ ನಿನ್ನ?

ಜನನದಿ ಮರಣಾಂತಮಿಲ್ಲಿ
ಬಾಳ್ವೆ ನಿನ್ನನರಸುವಲ್ಲಿ,
ನೋಡದಿಲ್ಲಿ ಕೂಡಲಲ್ಲಿ
ಬಲ್ಲುದೆ ನಿನ್ನ?
ಮರಳಿ ತನ್ನ ಹೊರಟ ರೇವ
ನಯ್ದೆ ಸುತ್ತಿ ಬರುವ ನಾವ
ಮಿಳಿಸಿತೆ ಹಾಯದರ ಸೋವ
ಕಾಣದ ಮುನ್ನ?

ಉದಯಾಸ್ತಂ ಬಡೆವ ಖರ್ವ
ಗತಿಯಂತಿನನೊಡನೆ ಪರ್ವ
ವಡೆವ ಗತಿಯುಮೆಂತು ಶರ್ವ
ರೀಶಗೆ ದ್ವಿಧಾ

ಜೀವನದಿಂದಂತು ಭಿನ್ನ
ಪಥಮೆನಗಿಲ್ಲಿರಲಖಿನ್ನ
ಮದಂ ನಡೆವಗೆಂತು ನಿನ್ನ
ದರ್‍ಶನಂ ಮುಧಾ?

ಬಾಳ್ವೆಯ ನಿಡುಮರಳಿನಲ್ಲಿ
ಸುಖದಿಂ ದಣಿದೊಣಗಿದಲ್ಲಿ
ನಡುದೀವಿಗಳಳಲೊಳಲ್ಲಿ
ಕಾವನಾವನಿಂ
ಕಂಬನಿಯಾತಿಥ್ಯ ದೊರೆತೆ
ನವನ ಮುಂದುವರಿಯೆ ಮರೆತೆ-
ನಿನ್ನಿಂದವನಕಟ ಪೆರತೆ?
ಪೇಳ ದೇವ ನೀಂ!

ನಿನ್ನನಿಲ್ಲಿ ನಮಗೆ ತೋರ
ಲಲ್ಲಡಳಲು ಬರಿದೆ ಬಾರ;
ಕಂಡ ನಿನ್ನ ನೋಡಲಾರ
ದೆನ್ನ ಕಣ್ಣಿಗೆ
ಬಲ್ಲೆನಿಲ್ಲೆ ಕಾಣಬರುವೆ-
ಎಂದೊ ಎಂತೊ ನೀನೆ ಅರಿವೆ,
ಬಗೆಗೆ ಕಾವ ಕವಿಯೊಲಿರುವೆ
ನಿಂತು ತಣ್ಣಗೆ.

ಬಲ್ಲೆನೆಂತು ಬಾಳ್ವೆ ಸಂದು
ನಿನ್ನೊಳೆ ಮೆಯ್ಗರೆವೆನೆಂದು,
ಬಲ್ಲೆನಂತು ಬಾಳುವಂದು
ಕಾಣುವೆ ನಿನ್ನ,
ರವಿಯಲಿ ಮೆಯ್ಗರೆವ ಮುಂತು
ಹುಣ್ಣಿಮೆಯಮೃತಾಂಶು ನಿಂತು
ಮುಖಾಮುಖಿಯೆ ಕಾಣುವಂತು
ಭಾಸ್ಕರನನ್ನ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...