ಭಾರತಾಂಬೆಯ ಮಹಿಮೆ

ಭಾರತವನುಳಿಯುತ್ತ ನನಗೆ ಜೀವನವೆತ್ತ?
ಭಾರತವೆ ನನ್ನುಸಿರು, ನನ್ನೊಗೆದ ಬಸಿರು.
ಭಾರತವೆ ಧನಧಾನ್ಯ, ಭಾರತವೆ ಮನೆಮಾನ್ಯ,
ಭಾರತವೆ ದೇವಾರವೆನ್ನ ಸಂಸಾರ.

ಭಾರತದ ನೆಲಹೊಲವು ಸುರಭಿಯಿಳಿಕೆಚ್ಚಲವು,
ಭಾರತದ ತಿಳಿಜಳವು ಸೊದೆಯ ಸವಿ ಸೆಳವು,
ಭಾರತದ ಶ್ಯಾಮಲತೆ ತನುಮನಕ ಕಾಮಲತೆ.
ಭಾರತದ ಪಶುಪಕ್ಷಿ ವೈಚಿತ್ರ್ಯ ಸಾಕ್ಷಿ.

ಭಾರತದ ಸಕ್ಕದವು ಜ್ಞಾನನಿಧಿಯೊಕ್ಕದವು.
ಭಾರತದ ಹಲ ಮಾತೆ ಮೇಳವದ ಗೀತೆ;
ಭಾರತದ ಶುಭ ಚರಿತ ಧರೆಗೆ ಧರ್‍ಮದ ಕರೆತ,
ಭಾರತದ ತೋಳ್ಮಿಗಿಲು ಹಗೆಯ ಬಗೆದಿಗಿಲು.

ಭಾರತೀಯ ಸ್ವತಂತ್ರ ಸಾಧನವೆ ನಿಜಮಂತ್ರ,
ಭಾರತದ ಜಯಮೂರ್‍ತಿ ಮನ್ಮನಃಪೂರ್‍ತಿ,
ಭಾರತದ ಸೋದರಿಕೆ ನನ್ನ ದಿನದಿನದೆರಕ,
ಭಾರತ ಯಶೋಗಾನವೆನ್ನೆದಯ ತಾನ.

ಭಾರತದ ಮಂಗಲವು ಭುವನವಲ್ಲಭನೊಲವು,
ಭಾರತದ ಸಮುಚ್ಛ್ರಯವು ಶಾಂತಿಗಾಶ್ರಯವು;
ಭಾರತದ ಜನಕುಲವು ಭುವಿಯ ಬಳಗಕೆ ಬಲವು,
ಭಾರತಾಂಬೆಯ ಭಕ್ತಿ ನನಗಾತ್ಮಶಕ್ತಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಂತ ನೆಲದಲ್ಲಿ
Next post ಹೃದಯಕ್ಕೆ ಸಂಜೀವನಿ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಉಧೋ ಉಧೋ

    ಸಂತ್ರಸ್ತರ ಆ ಶೆಡ್ಡಿಗೆ ನಾಗವ್ವನ ಕುಟುಂಬ ಸ್ಥಳಾಂತರವಾಗಿ ಆರು ತಿಂಗಳಾಗಿತ್ತು. ನಾಲ್ಕಂಕಣದ ದಂಧಕ್ಕಿ ಮನಿ ಸಾರಿಸಿ ಪಡಿ ಹಿಟ್ಟಿನ ರೊಟ್ಟಿತಟ್ಟಿ ತಣ್ಣಗ ಮುಂದಿನ ಬಂಕಕ್ಕೆ ಕುಬಸ ಬಿಚ್ಚಿ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…